Latest Updates
-
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ
ಅನ್ನದ ಜೊತೆ ನಿಂಬೆ ಸಾರಿದ್ದರೆ ತಿನ್ನಲು ಬಲುರುಚಿ

ಬೇಕಾಗುವ ಸಾಮಾಗ್ರಿಗಳು:
* 1/2 ಕಪ್ ಸಾರು ಬೇಳೆ
* 2 ಹಸಿಮೆಣಸು
* ಒಂದು ಬೆಳ್ಳುಳ್ಳಿ
* 1/2 ಇಂಚಿನ ಶುಂಠಿ
* ಕೊತ್ತಂಬರಿ ಸೊಪ್ಪು
* ಸ್ವಲ್ಪ ಕರಿಬೇವಿನ ಎಲೆ
* 1/2 ದೊಡ್ಡ ನಿಂಬೆಹಣ್ಣು
* 8-10 ಕರಿಮೆಣಸು ಬೀಜ
* 1/4 ಚಮಚ ಅರಿಶಿಣ
* 1/2 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 2-3 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಬೇಳೆಯನ್ನು ಚೆನ್ನಾಗಿ ತೊಳೆದು ಸ್ವಲ್ಪ ಅರಿಶಿಣ ಹಾಕಿ 2-3 ಕಪ್ ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ 3 ವಿಶಲ್ ಬರುವವರೆಗೆ ಬೇಯಿಸಬೇಕು.
2. ಈಗ ಬೆಂದ ಬೇಳೆಯನ್ನು ಸೌಟ್ ನಿಂದ ಜಜ್ಜಿ, ಒಂದು ಕಪ್ ನೀರು ಸೇರಿಸಿ 5-10 ನಿಮಿಷ ಹಾಗೇ ಬಿಡಬೇಕು.
3. ಈಗ ಸಾರಿನ ಪಾತ್ರೆಯನ್ನು ಉರಿಯಲ್ಲಿಟ್ಟು ಅದಕ್ಕೆ ಎಣ್ಣೆ ಅಥವಾ ತುಪ್ಪ ಹಾಕಬೇಕು. ಎಣ್ಣೆ ಬಿಸಿಯಾದಾಗ ಅದಕ್ಕೆ ಸಾಸಿವೆಯನ್ನು ಹಾಕಬೇಕು.
4. ಸಾಸಿವೆ ಚಟಾಪಟಾ ಶಬ್ದ ಬಂದ ನಂತರ ಜೀರಿಗೆ, ಜಜ್ಜಿದ ಬೆಳ್ಳುಳ್ಳಿ, ಚಿಕ್ಕದಾಗಿ ಕತ್ತರಿಸಿದ ಶುಂಠಿ, ಹಸಿಮೆಣಸಿನ ಕಾಯಿ, ಕರಿಬೇವಿನ ಎಲೆ, ಪುಡಿಮಾಡಿದ ಕರಿಮೆಣಸು ಮತ್ತು ಹಸಿಮೆಣಸಿನ ಕಾಯಿ ಹಾಕಬೇಕು. ಬೆಳ್ಳುಳ್ಳಿ ಕಂದು ಬಣ್ಣಕ್ಕೆ ತಿರುಗುವಾಗ ಸ್ವಲ್ಪ ಅರಿಶಿಣವನ್ನು ಸೇರಿಸಬೇಕು. ಅರಿಶಿಣ ಕರಿಯಲು ಬಿಡಬಾರದು.
5. ಈಗ ಬೇಯಿಸಿದ ಬೇಳೆಯನ್ನು ಈ ಮಿಶ್ರಣಕ್ಕೆ ಮೆಲ್ಲನೆ ಸುರಿಯಬೇಕು. ನಂತರ ಬೇಯಿಸಬೇಕು. ರಸ ಪಾತ್ರೆಯಿಂದ ಉಕ್ಕಿ ಹೊರಚೆಲ್ಲದಂತೆ ನೋಡಿಕೊಳ್ಳಬೇಕು. ಈಗ ರುಚಿಗೆ ತಕ್ಕ ಉಪ್ಪು ಹಾಕಿ ರಸವನ್ನು ಚೆನ್ನಾಗಿ ಕುದಿಸಬೇಕು. ಈಗ ಸಾರಿಗೆ ನಿಂಬೆರಸ ಹಿಂಡಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ನಿಂಬೆ ಸಾರು ರೆಡಿ.



Click it and Unblock the Notifications











