Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಹಬ್ಬದ ಅಡುಗೆಯ ರುಚಿ ಹೆಚ್ಚಿಸುತ್ತೆ ನವರತ್ನ ಕೂರ್ಮ

ಬೇಕಾಗುವ ಸಾಮಾಗ್ರಿಗಳು:
* ಪನ್ನೀರ್ 100 ಗ್ರಾಂ
* ಕ್ಯಾರೆಟ್, ಹೂಕೋಸು, ಆಲೂಗೆಡ್ಡೆ, ಬೀನ್ಸ್ 3 ಕಪ್ (ಬೇಯಿಸಿದ್ದು)
* ಟೊಮೆಟೊ 2
* ಹಸಿಮೆಣಸಿನ ಕಾಯಿ 3-4
* ಮೊಸರು 3 ಚಮಚ
* ಹಾಲು ಒಂದು ಕಪ್
* ನಿಂಬೆಹಣ್ಣು 1
* ಶುಂಠಿ ಒಂದು ಚಿಕ್ಕ ತುಂಡು
* ಬೆಳ್ಳುಳ್ಳಿ 6 ಎಸಳು
* ಅರಿಶಿಣ ಪುಡಿ 1/4 ಚಮಚ
* ಕೆಂಪು ಮೆಣಸಿನ ಪುಡಿ 1 ಚಮಚ
* ಕೊತ್ತಂಬರಿ ಪುಡಿ 1/2 ಚಮಚ
* ತುಪ್ಪ 3 ಚಮಚ
* ರುಚಿಗೆ ತಕ್ಕ ಉಪ್ಪು
* ಗೋಡಂಬಿ 10 (ಎಣ್ಣೆಯಲ್ಲಿ ಸ್ವಲ್ಪ ಹುರಿದಿರಬೇಕು)
* ಬಾದಾಮಿ 10
* ಸ್ವಲ್ಪಕೊತ್ತಂಬರಿ ಸೊಪ್ಪು
* ಚಿಟಿಕೆಯಷ್ಟು ಕೇಸರಿಯನ್ನು ಒಂದು ಬಿಸಿ ಹಾಲು ಅಥವಾ ನೀರಿನಲ್ಲಿ ಹಾಕಿದ್ದು
ತಯಾರಿಸುವ ವಿಧಾನ:
1. ಪನ್ನೀರ್ ಅನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಎಣ್ಣೆಯಲ್ಲಿ ಹುರಿದು ಪಕ್ಕಕ್ಕಿಡಬೇಕು.
2. ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಪೇಸ್ಟ್ ರೀತಿ ಅರೆಯಬೇಕು.
3. ಟೊಮೆಟೊವನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಹಾಕಿ, ನಂತರ ಸಿಪ್ಪೆ ಸುಲಿಯಬೇಕು, ನಂತರ ಟೊಮೆಟೊವನ್ನು ಸೌಟಿನಿಂದ ಹಿಸುಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಬಾಣಲೆಯನ್ನು ಇಟ್ಟು ತುಪ್ಪವನ್ನು ಬಿಸಿ ಮಾಡಬೇಕು. ತುಪ್ಪ ಬಿಸಿಯಾದಾಗ ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತಯಾರಿಸಿದ ಪೇಸ್ಟ್ ಹಾಕಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗದಂತೆ ಹಾಲನ್ನು ಆಗಾಗ ಚಿಮುಕಿಸುತ್ತಾ ಇರಬೇಕು.
5. ಈಗ ಪೇಸ್ಟ್ ರೀತಿ ಮಾಡಿದ ಟೊಮೆಟೊ, ಅರಿಶಿಣ ಪುಡಿ, ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ ಪುಡಿ, ಕೊತ್ತಂಬರಿ ಪುಡಿ ಗರಂ ಮಸಾಲ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಬೇಕು.
6. ಈಗ ಬೇಯಿಸಿದ ತರಕಾರಿಯನ್ನು ಸೇರಿಸಬೇಕು, ಅದಕ್ಕೆ ಮೊಸರು ಸೇರಿಸಿ ಸ್ವಲ್ಪ ಹೊತ್ತು ಬಿಸಿಮಾಡಬೇಕು.
7. ಗ್ರೇವಿ ಗಟ್ಟಿಯಾದಾಗ ಹಾಲನ್ನು ಸೇರಿಸಿ ಕುದಿಸಬೇಕು.
8. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ಪನ್ನೀರ್, ಬಾದಾಮಿ, ಗೋಡಂಬಿಯನ್ನು ಸೇರಿಸಬೇಕು. ಮಿಶ್ರಣವನ್ನು ಆಗಾಗ ತಿರುಗಿಸುತ್ತಾ ಇರಬೇಕು. ಕೊನೆಗೆ ಕೇಸರಿಯನ್ನು ಹಾಕಿ, ನಿಂಬೆರಸ ಸ್ವಲ್ಪ ಹಾಕಿದರೆ ರುಚಿಕರವಾದ ನವರತ್ನ ಕೂರ್ಮ ರೆಡಿ.



Click it and Unblock the Notifications
