Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಹಬ್ಬದ ಅಡುಗೆಯ ರುಚಿ ಹೆಚ್ಚಿಸುತ್ತೆ ನವರತ್ನ ಕೂರ್ಮ

ಬೇಕಾಗುವ ಸಾಮಾಗ್ರಿಗಳು:
* ಪನ್ನೀರ್ 100 ಗ್ರಾಂ
* ಕ್ಯಾರೆಟ್, ಹೂಕೋಸು, ಆಲೂಗೆಡ್ಡೆ, ಬೀನ್ಸ್ 3 ಕಪ್ (ಬೇಯಿಸಿದ್ದು)
* ಟೊಮೆಟೊ 2
* ಹಸಿಮೆಣಸಿನ ಕಾಯಿ 3-4
* ಮೊಸರು 3 ಚಮಚ
* ಹಾಲು ಒಂದು ಕಪ್
* ನಿಂಬೆಹಣ್ಣು 1
* ಶುಂಠಿ ಒಂದು ಚಿಕ್ಕ ತುಂಡು
* ಬೆಳ್ಳುಳ್ಳಿ 6 ಎಸಳು
* ಅರಿಶಿಣ ಪುಡಿ 1/4 ಚಮಚ
* ಕೆಂಪು ಮೆಣಸಿನ ಪುಡಿ 1 ಚಮಚ
* ಕೊತ್ತಂಬರಿ ಪುಡಿ 1/2 ಚಮಚ
* ತುಪ್ಪ 3 ಚಮಚ
* ರುಚಿಗೆ ತಕ್ಕ ಉಪ್ಪು
* ಗೋಡಂಬಿ 10 (ಎಣ್ಣೆಯಲ್ಲಿ ಸ್ವಲ್ಪ ಹುರಿದಿರಬೇಕು)
* ಬಾದಾಮಿ 10
* ಸ್ವಲ್ಪಕೊತ್ತಂಬರಿ ಸೊಪ್ಪು
* ಚಿಟಿಕೆಯಷ್ಟು ಕೇಸರಿಯನ್ನು ಒಂದು ಬಿಸಿ ಹಾಲು ಅಥವಾ ನೀರಿನಲ್ಲಿ ಹಾಕಿದ್ದು
ತಯಾರಿಸುವ ವಿಧಾನ:
1. ಪನ್ನೀರ್ ಅನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಎಣ್ಣೆಯಲ್ಲಿ ಹುರಿದು ಪಕ್ಕಕ್ಕಿಡಬೇಕು.
2. ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಪೇಸ್ಟ್ ರೀತಿ ಅರೆಯಬೇಕು.
3. ಟೊಮೆಟೊವನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಹಾಕಿ, ನಂತರ ಸಿಪ್ಪೆ ಸುಲಿಯಬೇಕು, ನಂತರ ಟೊಮೆಟೊವನ್ನು ಸೌಟಿನಿಂದ ಹಿಸುಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಬಾಣಲೆಯನ್ನು ಇಟ್ಟು ತುಪ್ಪವನ್ನು ಬಿಸಿ ಮಾಡಬೇಕು. ತುಪ್ಪ ಬಿಸಿಯಾದಾಗ ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತಯಾರಿಸಿದ ಪೇಸ್ಟ್ ಹಾಕಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗದಂತೆ ಹಾಲನ್ನು ಆಗಾಗ ಚಿಮುಕಿಸುತ್ತಾ ಇರಬೇಕು.
5. ಈಗ ಪೇಸ್ಟ್ ರೀತಿ ಮಾಡಿದ ಟೊಮೆಟೊ, ಅರಿಶಿಣ ಪುಡಿ, ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ ಪುಡಿ, ಕೊತ್ತಂಬರಿ ಪುಡಿ ಗರಂ ಮಸಾಲ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಬೇಕು.
6. ಈಗ ಬೇಯಿಸಿದ ತರಕಾರಿಯನ್ನು ಸೇರಿಸಬೇಕು, ಅದಕ್ಕೆ ಮೊಸರು ಸೇರಿಸಿ ಸ್ವಲ್ಪ ಹೊತ್ತು ಬಿಸಿಮಾಡಬೇಕು.
7. ಗ್ರೇವಿ ಗಟ್ಟಿಯಾದಾಗ ಹಾಲನ್ನು ಸೇರಿಸಿ ಕುದಿಸಬೇಕು.
8. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ಪನ್ನೀರ್, ಬಾದಾಮಿ, ಗೋಡಂಬಿಯನ್ನು ಸೇರಿಸಬೇಕು. ಮಿಶ್ರಣವನ್ನು ಆಗಾಗ ತಿರುಗಿಸುತ್ತಾ ಇರಬೇಕು. ಕೊನೆಗೆ ಕೇಸರಿಯನ್ನು ಹಾಕಿ, ನಿಂಬೆರಸ ಸ್ವಲ್ಪ ಹಾಕಿದರೆ ರುಚಿಕರವಾದ ನವರತ್ನ ಕೂರ್ಮ ರೆಡಿ.



Click it and Unblock the Notifications