Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಹಬ್ಬದ ಅಡುಗೆಯ ರುಚಿ ಹೆಚ್ಚಿಸುತ್ತೆ ನವರತ್ನ ಕೂರ್ಮ

ಬೇಕಾಗುವ ಸಾಮಾಗ್ರಿಗಳು:
* ಪನ್ನೀರ್ 100 ಗ್ರಾಂ
* ಕ್ಯಾರೆಟ್, ಹೂಕೋಸು, ಆಲೂಗೆಡ್ಡೆ, ಬೀನ್ಸ್ 3 ಕಪ್ (ಬೇಯಿಸಿದ್ದು)
* ಟೊಮೆಟೊ 2
* ಹಸಿಮೆಣಸಿನ ಕಾಯಿ 3-4
* ಮೊಸರು 3 ಚಮಚ
* ಹಾಲು ಒಂದು ಕಪ್
* ನಿಂಬೆಹಣ್ಣು 1
* ಶುಂಠಿ ಒಂದು ಚಿಕ್ಕ ತುಂಡು
* ಬೆಳ್ಳುಳ್ಳಿ 6 ಎಸಳು
* ಅರಿಶಿಣ ಪುಡಿ 1/4 ಚಮಚ
* ಕೆಂಪು ಮೆಣಸಿನ ಪುಡಿ 1 ಚಮಚ
* ಕೊತ್ತಂಬರಿ ಪುಡಿ 1/2 ಚಮಚ
* ತುಪ್ಪ 3 ಚಮಚ
* ರುಚಿಗೆ ತಕ್ಕ ಉಪ್ಪು
* ಗೋಡಂಬಿ 10 (ಎಣ್ಣೆಯಲ್ಲಿ ಸ್ವಲ್ಪ ಹುರಿದಿರಬೇಕು)
* ಬಾದಾಮಿ 10
* ಸ್ವಲ್ಪಕೊತ್ತಂಬರಿ ಸೊಪ್ಪು
* ಚಿಟಿಕೆಯಷ್ಟು ಕೇಸರಿಯನ್ನು ಒಂದು ಬಿಸಿ ಹಾಲು ಅಥವಾ ನೀರಿನಲ್ಲಿ ಹಾಕಿದ್ದು
ತಯಾರಿಸುವ ವಿಧಾನ:
1. ಪನ್ನೀರ್ ಅನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಎಣ್ಣೆಯಲ್ಲಿ ಹುರಿದು ಪಕ್ಕಕ್ಕಿಡಬೇಕು.
2. ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಪೇಸ್ಟ್ ರೀತಿ ಅರೆಯಬೇಕು.
3. ಟೊಮೆಟೊವನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಹಾಕಿ, ನಂತರ ಸಿಪ್ಪೆ ಸುಲಿಯಬೇಕು, ನಂತರ ಟೊಮೆಟೊವನ್ನು ಸೌಟಿನಿಂದ ಹಿಸುಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಬಾಣಲೆಯನ್ನು ಇಟ್ಟು ತುಪ್ಪವನ್ನು ಬಿಸಿ ಮಾಡಬೇಕು. ತುಪ್ಪ ಬಿಸಿಯಾದಾಗ ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತಯಾರಿಸಿದ ಪೇಸ್ಟ್ ಹಾಕಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗದಂತೆ ಹಾಲನ್ನು ಆಗಾಗ ಚಿಮುಕಿಸುತ್ತಾ ಇರಬೇಕು.
5. ಈಗ ಪೇಸ್ಟ್ ರೀತಿ ಮಾಡಿದ ಟೊಮೆಟೊ, ಅರಿಶಿಣ ಪುಡಿ, ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ ಪುಡಿ, ಕೊತ್ತಂಬರಿ ಪುಡಿ ಗರಂ ಮಸಾಲ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಬೇಕು.
6. ಈಗ ಬೇಯಿಸಿದ ತರಕಾರಿಯನ್ನು ಸೇರಿಸಬೇಕು, ಅದಕ್ಕೆ ಮೊಸರು ಸೇರಿಸಿ ಸ್ವಲ್ಪ ಹೊತ್ತು ಬಿಸಿಮಾಡಬೇಕು.
7. ಗ್ರೇವಿ ಗಟ್ಟಿಯಾದಾಗ ಹಾಲನ್ನು ಸೇರಿಸಿ ಕುದಿಸಬೇಕು.
8. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ಪನ್ನೀರ್, ಬಾದಾಮಿ, ಗೋಡಂಬಿಯನ್ನು ಸೇರಿಸಬೇಕು. ಮಿಶ್ರಣವನ್ನು ಆಗಾಗ ತಿರುಗಿಸುತ್ತಾ ಇರಬೇಕು. ಕೊನೆಗೆ ಕೇಸರಿಯನ್ನು ಹಾಕಿ, ನಿಂಬೆರಸ ಸ್ವಲ್ಪ ಹಾಕಿದರೆ ರುಚಿಕರವಾದ ನವರತ್ನ ಕೂರ್ಮ ರೆಡಿ.



Click it and Unblock the Notifications











