Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಹಬ್ಬದ ಅಡುಗೆಯ ರುಚಿ ಹೆಚ್ಚಿಸುತ್ತೆ ನವರತ್ನ ಕೂರ್ಮ

ಬೇಕಾಗುವ ಸಾಮಾಗ್ರಿಗಳು:
* ಪನ್ನೀರ್ 100 ಗ್ರಾಂ
* ಕ್ಯಾರೆಟ್, ಹೂಕೋಸು, ಆಲೂಗೆಡ್ಡೆ, ಬೀನ್ಸ್ 3 ಕಪ್ (ಬೇಯಿಸಿದ್ದು)
* ಟೊಮೆಟೊ 2
* ಹಸಿಮೆಣಸಿನ ಕಾಯಿ 3-4
* ಮೊಸರು 3 ಚಮಚ
* ಹಾಲು ಒಂದು ಕಪ್
* ನಿಂಬೆಹಣ್ಣು 1
* ಶುಂಠಿ ಒಂದು ಚಿಕ್ಕ ತುಂಡು
* ಬೆಳ್ಳುಳ್ಳಿ 6 ಎಸಳು
* ಅರಿಶಿಣ ಪುಡಿ 1/4 ಚಮಚ
* ಕೆಂಪು ಮೆಣಸಿನ ಪುಡಿ 1 ಚಮಚ
* ಕೊತ್ತಂಬರಿ ಪುಡಿ 1/2 ಚಮಚ
* ತುಪ್ಪ 3 ಚಮಚ
* ರುಚಿಗೆ ತಕ್ಕ ಉಪ್ಪು
* ಗೋಡಂಬಿ 10 (ಎಣ್ಣೆಯಲ್ಲಿ ಸ್ವಲ್ಪ ಹುರಿದಿರಬೇಕು)
* ಬಾದಾಮಿ 10
* ಸ್ವಲ್ಪಕೊತ್ತಂಬರಿ ಸೊಪ್ಪು
* ಚಿಟಿಕೆಯಷ್ಟು ಕೇಸರಿಯನ್ನು ಒಂದು ಬಿಸಿ ಹಾಲು ಅಥವಾ ನೀರಿನಲ್ಲಿ ಹಾಕಿದ್ದು
ತಯಾರಿಸುವ ವಿಧಾನ:
1. ಪನ್ನೀರ್ ಅನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಎಣ್ಣೆಯಲ್ಲಿ ಹುರಿದು ಪಕ್ಕಕ್ಕಿಡಬೇಕು.
2. ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹಸಿ ಮೆಣಸಿನಕಾಯಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಪೇಸ್ಟ್ ರೀತಿ ಅರೆಯಬೇಕು.
3. ಟೊಮೆಟೊವನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಹಾಕಿ, ನಂತರ ಸಿಪ್ಪೆ ಸುಲಿಯಬೇಕು, ನಂತರ ಟೊಮೆಟೊವನ್ನು ಸೌಟಿನಿಂದ ಹಿಸುಕಿ ಪೇಸ್ಟ್ ರೀತಿ ಮಾಡಬೇಕು.
4. ಈಗ ಬಾಣಲೆಯನ್ನು ಇಟ್ಟು ತುಪ್ಪವನ್ನು ಬಿಸಿ ಮಾಡಬೇಕು. ತುಪ್ಪ ಬಿಸಿಯಾದಾಗ ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತಯಾರಿಸಿದ ಪೇಸ್ಟ್ ಹಾಕಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗದಂತೆ ಹಾಲನ್ನು ಆಗಾಗ ಚಿಮುಕಿಸುತ್ತಾ ಇರಬೇಕು.
5. ಈಗ ಪೇಸ್ಟ್ ರೀತಿ ಮಾಡಿದ ಟೊಮೆಟೊ, ಅರಿಶಿಣ ಪುಡಿ, ಜೀರಿಗೆ ಪುಡಿ, ಕೆಂಪು ಮೆಣಸಿನ ಕಾಯಿ ಪುಡಿ, ಕೊತ್ತಂಬರಿ ಪುಡಿ ಗರಂ ಮಸಾಲ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಬೇಕು.
6. ಈಗ ಬೇಯಿಸಿದ ತರಕಾರಿಯನ್ನು ಸೇರಿಸಬೇಕು, ಅದಕ್ಕೆ ಮೊಸರು ಸೇರಿಸಿ ಸ್ವಲ್ಪ ಹೊತ್ತು ಬಿಸಿಮಾಡಬೇಕು.
7. ಗ್ರೇವಿ ಗಟ್ಟಿಯಾದಾಗ ಹಾಲನ್ನು ಸೇರಿಸಿ ಕುದಿಸಬೇಕು.
8. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ಪನ್ನೀರ್, ಬಾದಾಮಿ, ಗೋಡಂಬಿಯನ್ನು ಸೇರಿಸಬೇಕು. ಮಿಶ್ರಣವನ್ನು ಆಗಾಗ ತಿರುಗಿಸುತ್ತಾ ಇರಬೇಕು. ಕೊನೆಗೆ ಕೇಸರಿಯನ್ನು ಹಾಕಿ, ನಿಂಬೆರಸ ಸ್ವಲ್ಪ ಹಾಕಿದರೆ ರುಚಿಕರವಾದ ನವರತ್ನ ಕೂರ್ಮ ರೆಡಿ.



Click it and Unblock the Notifications