Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಜೀರಿಗೆ ಸಾರು ಮಾಡಿದ ವಿಧಾನ

ಬೇಕಾಗುವ ಪದಾರ್ಥಗಳು : ಅರ್ಧ ಚಮಚ ಉದ್ದಿನಬೇಳೆ | ಅರ್ಧ ಚಮಚ ಕೊತ್ತಂಬರಿ ಬೀಜ | ಎರಡು ಚಮಚ ಜೀರಿಗೆ | ಐದು ಒಣಮೆಣಸಿನಕಾಯಿ | ಒಂದು ಚಮಚ ಸನ್ ಗೋಲ್ಡ್ ಅಡುಗೆ ಎಣ್ಣೆ.
ಇವಿಷ್ಟನ್ನೂ ತವದಲ್ಲಿ ಘಂ ಎಂದು ಪರಿಮಳ ಬರುವವರೆಗೆ ಹುರಿದುಕೊಂಡೆ. ಇದಕ್ಕೆ ಮೂರು ಚಮಚ ಹಸಿ ತೆಂಗಿನತುರಿ, ಮೂರು ಚಮಚ ಒಣ ಕೊಬ್ಬರಿ ತುರಿ ಬೆರೆಸಿ ಮಿಕ್ಸಿಗೆ ಹಾಕಿ, ಚೂರು ನೀರು ಬೆರೆಸಿ ನುಣ್ಣಗೆ ರುಬ್ಬಿಟ್ಟುಕೊಂಡೆ.
ಆನಂತರದಲ್ಲಿ, ಅರ್ಧ ಗೋಳಾಕಾರದ ಒಂದು ಬಾಣಲೆಯನ್ನು ಸ್ಟೌವ್ ಮೇಲಿಟ್ಟು ನಾಲಕ್ಕು ಲೋಟ ನೀರು ಕುದಿಯಲು ಇಟ್ಟೆ. ನೀರು ಕುದ್ದನಂತರ ಅದಕ್ಕೆ ರುಬ್ಬಿಕೊಂಡ ಪದಾರ್ಥವನ್ನು ಹಾಕಿ ಮತ್ತೆ ಕುದಿಸಿದೆ. ಇದೇ ಸಮಯಕ್ಕೆ ಅರ್ಧ ಚಮಚದಷ್ಟು ಹುಣಿಸೆಹಣ್ಣಿನ ಪೇಸ್ಟ್, ಅರ್ಧ ಉಂಡೆ ಬೆಲ್ಲ, ಉಪ್ಪು ಹಾಕಿ ಚೆನ್ನಾಗಿ ಕುದಿಯುವತನಕ ಕಾದೆ.
ಬಾಣಲೆ ಕೆಳಗಿಳಿಸಿದ ನಂತರ ಒಗ್ಗರಣೆ ಕೈಸೌಟಿನಲ್ಲಿ ಅರ್ಧ ಚಮಚ ಎಣ್ಣೆ, ಸಾಸಿವೆ, ಸಣ್ಣಗೆ ಹೆಚ್ಚಿಕೊಂಡ ತಾಜಾ ಕರಿಬೇವಿನ ಎಲೆಗಳು ಹಾಗೂ ಎರಡು ಚೂರು ಇಂಗು ಹಾಕಿ ಒಗ್ಗರಣೆ ಮಾಡಿ ಸಾರಿನ ಬಾಣಲೆಯಲ್ಲಿ ಮುಳುಗಿಸಿದೆ. ಜೀರಿಗೆ ಪರಿಮಳವೇ ಪ್ರಧಾನವಾದ ಈ ಸಾರಿನ ರುಚಿ ತುಂಬಾ ಚೆನ್ನಾಗಿತ್ತು. ಇದು ಗರ್ವದ ಮಾತಲ್ಲ. ನನ್ನ ಅಂದಾಜಿನ ಪ್ರಕಾರ ನಾನು ಬರೆದ ಅಳತೆಯಲ್ಲಿ ನೀವು ಸಾರು ಮಾಡಿದರೆ ಇಬ್ಬರ ಊಟಕ್ಕೆ ಸಾಕಾಗುತ್ತದೆ. ನಾನು ಒಬ್ಬನೇ ಇದ್ದುದರಿಂದ ಇಷ್ಟು ಪ್ರಮಾಣದ ಸಾರು ಮಧ್ಯಾನ್ಹ ಮತ್ತು ರಾತ್ರಿ ಊಟಕ್ಕೆ ಸಾಕಷ್ಟಾಯಿತು.



Click it and Unblock the Notifications
