Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಬರೇ ಬೇಳೆ ಸಾರಲ್ಲ, ಬೇಳೆ ಕಾಳುಗಳ ಪೌಷ್ಟಿಕ ಸಾರು

* ವೈಶಾಲಿ ಹೆಗಡೆ, ಬೋಸ್ಟನ್
ಪದಾರ್ಥಗಳು:
1/4 ಕಪ್ ಉದ್ದಿನಬೇಳೆ
1/4 ಕಪ್ ಹೆಸರುಬೇಳೆ
1/2 ಕಪ್ ತೊಗರಿಬೇಳೆ
1/4 ಕಪ್ ಹುರುಳಿಕಾಳು
1/4 ಕಪ್ ರಾಜ್ಮ ಅಥವಾ ಕಿಡ್ನಿ ಬೀನ್ಸ್
1/4 ಕಪ್ ಅಲಸಂದೆ ಕಾಳು
1-2 ಟೊಮೇಟೊ
1 ಈರುಳ್ಳಿ
1 ಚಮಚ ಸಾರಿನಪುಡಿ
1/2 ಚಮಚ ಗರಂ ಮಸಾಲ ಪುಡಿ
ಕೊತ್ತಂಬರಿ ಸೊಪ್ಪು, ಸ್ವಲ್ಪ
3-4 ಕೆಂಪು ಅಥವಾ ಹಸಿಮೆಣಸಿನಕಾಯಿ, ಖಾರಕ್ಕೆ ತಕ್ಕಂತೆ
ಒಗ್ಗರಣೆಗೆ ಎಣ್ಣೆ, ಅರಿಶಿನ, ಸಾಸಿವೆ, ಜೀರಿಗೆ
ಚಿಟಿಕೆ ಉಪ್ಪು, ಸಕ್ಕರೆ ರುಚಿಗೆ ತಕ್ಕಂತೆ
ಮಾಡುವ ವಿಧಾನ:
ಎಲ್ಲ ಕಾಳುಗಳನ್ನು 3-4 ಗಂಟೆ ನೀರಿನಲ್ಲಿ ನೆನೆಸಿಡಿ. ನಂತರ ಎಲ್ಲ ಬೇಳೆ ಕಾಳುಗಳನ್ನು ಒಟ್ಟಿಗೆ ಕುಕ್ಕರ್ನಲ್ಲಿ ಚೆನ್ನಾಗಿ ಬೇಯಿಸಿ. ಬೇಯಿಸುವಾಗ, ಸ್ವಲ್ಪ ಅರಿಶಿನ, 1/4 ಚಮಚ ಎಣ್ಣೆ ಸೇರಿಸಿದರೆ ಚೆನ್ನಾಗಿ ಅರಳಿ ಬೇಯುತ್ತವೆ.
ಒಂದು ದೊಡ್ಡ ಬಾಣಲೆಯಲ್ಲಿ ಒಗ್ಗರಣೆ ಹಾಕಿಕೊಂಡು, ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ ಸ್ವಲ್ಪ ಬಾಡಿಸಿ. ಈಗ ಸಾರಿನಪುಡಿ, ಗರಂ ಮಸಾಲ ಪುಡಿ ಸೇರಿಸಿ ಹುರಿಯಿರಿ. ಈಗ ಟೊಮೇಟೊ ಸೇರಿಸಿ, ಉಪ್ಪು, ಚಿಟಿಕೆ ಸಕ್ಕರೆ ಸೇರಿಸಿ ಮುಚ್ಚಿ ಬೇಯಿಸಿ. ಈ ಮಿಶ್ರಣ ಮೆತ್ತಗೆ ಪೇಸ್ಟ್ನಂತೆ ಬೆಂದಾಗ ಬೆಂದ ಬೇಳೆ ಕಾಲಿನ ಮಿಶ್ರಣ ಸೇರಿಸಿ. ನಿಮ್ಮ ಹದಕ್ಕೆ ತಕ್ಕಂತೆ ನೀರು ಸೇರಿಸಿ (ತುಂಬಾ ತೆಳ್ಳಗಿರದಂತೆ ನೋಡಿಕೊಳ್ಳಿ) ಕುದಿಸಿರಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.
ಬಿಸಿ ಅನ್ನ ಅಥವ ಘೀ ರೈಸ್, ಜೀರಾ ರೈಸ್ನೊಂದಿಗೆ ಬಡಿಸಿದರೆ ಚೆನ್ನಾಗಿರುತ್ತದೆ.



Click it and Unblock the Notifications
