Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬರೇ ಬೇಳೆ ಸಾರಲ್ಲ, ಬೇಳೆ ಕಾಳುಗಳ ಪೌಷ್ಟಿಕ ಸಾರು

* ವೈಶಾಲಿ ಹೆಗಡೆ, ಬೋಸ್ಟನ್
ಪದಾರ್ಥಗಳು:
1/4 ಕಪ್ ಉದ್ದಿನಬೇಳೆ
1/4 ಕಪ್ ಹೆಸರುಬೇಳೆ
1/2 ಕಪ್ ತೊಗರಿಬೇಳೆ
1/4 ಕಪ್ ಹುರುಳಿಕಾಳು
1/4 ಕಪ್ ರಾಜ್ಮ ಅಥವಾ ಕಿಡ್ನಿ ಬೀನ್ಸ್
1/4 ಕಪ್ ಅಲಸಂದೆ ಕಾಳು
1-2 ಟೊಮೇಟೊ
1 ಈರುಳ್ಳಿ
1 ಚಮಚ ಸಾರಿನಪುಡಿ
1/2 ಚಮಚ ಗರಂ ಮಸಾಲ ಪುಡಿ
ಕೊತ್ತಂಬರಿ ಸೊಪ್ಪು, ಸ್ವಲ್ಪ
3-4 ಕೆಂಪು ಅಥವಾ ಹಸಿಮೆಣಸಿನಕಾಯಿ, ಖಾರಕ್ಕೆ ತಕ್ಕಂತೆ
ಒಗ್ಗರಣೆಗೆ ಎಣ್ಣೆ, ಅರಿಶಿನ, ಸಾಸಿವೆ, ಜೀರಿಗೆ
ಚಿಟಿಕೆ ಉಪ್ಪು, ಸಕ್ಕರೆ ರುಚಿಗೆ ತಕ್ಕಂತೆ
ಮಾಡುವ ವಿಧಾನ:
ಎಲ್ಲ ಕಾಳುಗಳನ್ನು 3-4 ಗಂಟೆ ನೀರಿನಲ್ಲಿ ನೆನೆಸಿಡಿ. ನಂತರ ಎಲ್ಲ ಬೇಳೆ ಕಾಳುಗಳನ್ನು ಒಟ್ಟಿಗೆ ಕುಕ್ಕರ್ನಲ್ಲಿ ಚೆನ್ನಾಗಿ ಬೇಯಿಸಿ. ಬೇಯಿಸುವಾಗ, ಸ್ವಲ್ಪ ಅರಿಶಿನ, 1/4 ಚಮಚ ಎಣ್ಣೆ ಸೇರಿಸಿದರೆ ಚೆನ್ನಾಗಿ ಅರಳಿ ಬೇಯುತ್ತವೆ.
ಒಂದು ದೊಡ್ಡ ಬಾಣಲೆಯಲ್ಲಿ ಒಗ್ಗರಣೆ ಹಾಕಿಕೊಂಡು, ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ ಸ್ವಲ್ಪ ಬಾಡಿಸಿ. ಈಗ ಸಾರಿನಪುಡಿ, ಗರಂ ಮಸಾಲ ಪುಡಿ ಸೇರಿಸಿ ಹುರಿಯಿರಿ. ಈಗ ಟೊಮೇಟೊ ಸೇರಿಸಿ, ಉಪ್ಪು, ಚಿಟಿಕೆ ಸಕ್ಕರೆ ಸೇರಿಸಿ ಮುಚ್ಚಿ ಬೇಯಿಸಿ. ಈ ಮಿಶ್ರಣ ಮೆತ್ತಗೆ ಪೇಸ್ಟ್ನಂತೆ ಬೆಂದಾಗ ಬೆಂದ ಬೇಳೆ ಕಾಲಿನ ಮಿಶ್ರಣ ಸೇರಿಸಿ. ನಿಮ್ಮ ಹದಕ್ಕೆ ತಕ್ಕಂತೆ ನೀರು ಸೇರಿಸಿ (ತುಂಬಾ ತೆಳ್ಳಗಿರದಂತೆ ನೋಡಿಕೊಳ್ಳಿ) ಕುದಿಸಿರಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.
ಬಿಸಿ ಅನ್ನ ಅಥವ ಘೀ ರೈಸ್, ಜೀರಾ ರೈಸ್ನೊಂದಿಗೆ ಬಡಿಸಿದರೆ ಚೆನ್ನಾಗಿರುತ್ತದೆ.



Click it and Unblock the Notifications









