Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಬರೇ ಬೇಳೆ ಸಾರಲ್ಲ, ಬೇಳೆ ಕಾಳುಗಳ ಪೌಷ್ಟಿಕ ಸಾರು

* ವೈಶಾಲಿ ಹೆಗಡೆ, ಬೋಸ್ಟನ್
ಪದಾರ್ಥಗಳು:
1/4 ಕಪ್ ಉದ್ದಿನಬೇಳೆ
1/4 ಕಪ್ ಹೆಸರುಬೇಳೆ
1/2 ಕಪ್ ತೊಗರಿಬೇಳೆ
1/4 ಕಪ್ ಹುರುಳಿಕಾಳು
1/4 ಕಪ್ ರಾಜ್ಮ ಅಥವಾ ಕಿಡ್ನಿ ಬೀನ್ಸ್
1/4 ಕಪ್ ಅಲಸಂದೆ ಕಾಳು
1-2 ಟೊಮೇಟೊ
1 ಈರುಳ್ಳಿ
1 ಚಮಚ ಸಾರಿನಪುಡಿ
1/2 ಚಮಚ ಗರಂ ಮಸಾಲ ಪುಡಿ
ಕೊತ್ತಂಬರಿ ಸೊಪ್ಪು, ಸ್ವಲ್ಪ
3-4 ಕೆಂಪು ಅಥವಾ ಹಸಿಮೆಣಸಿನಕಾಯಿ, ಖಾರಕ್ಕೆ ತಕ್ಕಂತೆ
ಒಗ್ಗರಣೆಗೆ ಎಣ್ಣೆ, ಅರಿಶಿನ, ಸಾಸಿವೆ, ಜೀರಿಗೆ
ಚಿಟಿಕೆ ಉಪ್ಪು, ಸಕ್ಕರೆ ರುಚಿಗೆ ತಕ್ಕಂತೆ
ಮಾಡುವ ವಿಧಾನ:
ಎಲ್ಲ ಕಾಳುಗಳನ್ನು 3-4 ಗಂಟೆ ನೀರಿನಲ್ಲಿ ನೆನೆಸಿಡಿ. ನಂತರ ಎಲ್ಲ ಬೇಳೆ ಕಾಳುಗಳನ್ನು ಒಟ್ಟಿಗೆ ಕುಕ್ಕರ್ನಲ್ಲಿ ಚೆನ್ನಾಗಿ ಬೇಯಿಸಿ. ಬೇಯಿಸುವಾಗ, ಸ್ವಲ್ಪ ಅರಿಶಿನ, 1/4 ಚಮಚ ಎಣ್ಣೆ ಸೇರಿಸಿದರೆ ಚೆನ್ನಾಗಿ ಅರಳಿ ಬೇಯುತ್ತವೆ.
ಒಂದು ದೊಡ್ಡ ಬಾಣಲೆಯಲ್ಲಿ ಒಗ್ಗರಣೆ ಹಾಕಿಕೊಂಡು, ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ ಸ್ವಲ್ಪ ಬಾಡಿಸಿ. ಈಗ ಸಾರಿನಪುಡಿ, ಗರಂ ಮಸಾಲ ಪುಡಿ ಸೇರಿಸಿ ಹುರಿಯಿರಿ. ಈಗ ಟೊಮೇಟೊ ಸೇರಿಸಿ, ಉಪ್ಪು, ಚಿಟಿಕೆ ಸಕ್ಕರೆ ಸೇರಿಸಿ ಮುಚ್ಚಿ ಬೇಯಿಸಿ. ಈ ಮಿಶ್ರಣ ಮೆತ್ತಗೆ ಪೇಸ್ಟ್ನಂತೆ ಬೆಂದಾಗ ಬೆಂದ ಬೇಳೆ ಕಾಲಿನ ಮಿಶ್ರಣ ಸೇರಿಸಿ. ನಿಮ್ಮ ಹದಕ್ಕೆ ತಕ್ಕಂತೆ ನೀರು ಸೇರಿಸಿ (ತುಂಬಾ ತೆಳ್ಳಗಿರದಂತೆ ನೋಡಿಕೊಳ್ಳಿ) ಕುದಿಸಿರಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.
ಬಿಸಿ ಅನ್ನ ಅಥವ ಘೀ ರೈಸ್, ಜೀರಾ ರೈಸ್ನೊಂದಿಗೆ ಬಡಿಸಿದರೆ ಚೆನ್ನಾಗಿರುತ್ತದೆ.



Click it and Unblock the Notifications