Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ



Click it and Unblock the Notifications
