Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ



Click it and Unblock the Notifications
