Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ



Click it and Unblock the Notifications

