Just In
Don't Miss
- Movies ಬಯಸಿದ್ದು ಬಾಲಿವುಡ್ ಸಿನಿಮಾ, ಗೆದ್ದಿದ್ದು ತೆಲುಗು ಸಿನಿಮಾ; ಈ ನಟಿಯ ಭವಿಷ್ಯವೇನು?
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಈರುಳ್ಳಿ ಸಾಂಬಾರ್ ಕದ್ದವರಾರು?
ತರಕಾರಿ ಬೆಲೆ ನಿರ್ಧಾರ ಹೇಗೆ ಆಗುತ್ತದೆ, ಅದನ್ನು ನಿರ್ಧಾರ ಮಾಡುವವರು ಯಾರು ಎಂಬ ಪ್ರಶ್ನೆ ನಮ್ಮ ಮನೆಯವರನ್ನೆಲ್ಲ ಕಾಡಿತು. ನಮ್ಮ ಮನೆ ಹತ್ತಿರ ಇರುವ ರಿಲಯನ್ಸ್ ಮಳಿಗೆಯಲ್ಲಿ ತಾಜಾ ತರಕಾರಿಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆದರೆ ಅದೇ ತರಕಾರಿಗಳು ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಹೆಚ್ಚಾಗಿರುತ್ತವೆ. ಹೀಗೆ ಏಕೆ? ಖಾಸಗಿಯವರು ಕಡಿಮೆ ಬೆಲೆಗೆ, ಸರಕಾರದವರು ದುಬಾರಿ ಬೆಲೆಗೆ ಎನ್ನುವುದು ಯಾವ ನ್ಯಾಯ?
ರಿಲಯನ್ಸ್ ಫ್ರೆಶ್ ಅಂಗಡಿಯಲ್ಲಿ ತರಕಾರಿ ಬೆಲೆಗಳು ಯಾವತ್ತೂ ಕಡಿಮೆ ಇರುತ್ತವೆ. ಈರುಳ್ಳಿ ಬೇರೇ ಕಡೆ 16 ರೂಪಾಯಿ ಇದ್ದರೆ ರಿಲಯನ್ಸ್ ನಲ್ಲಿ 10 ಅಥವಾ 11 ರೂಪಾಯಿಗೆ ಮಾರುತ್ತಾರೆ. ಇತರ ತರಕಾರಿ ಬೆಲೆಗಳು ಕಡಿಮೆನೇ. ತರಕಾರಿಗಳು ಅಂಗಡಿಗೆ ಬರುವ ಮೂಲಗಳು ಒಂದೇ ಇರುವಾಗ ಬೆಲೆ ವ್ಯತ್ಯಾಸ ಏಕೆ ಆಗುತ್ತದೆ ಎನ್ನುವುದು ನಮ್ಮ ಪ್ರಶ್ನೆ. ಕೆಆರ್ ಮಾರುಕಟ್ಟೆ ಮತ್ತಿತರ ಕಾಂಪ್ಲೆಕ್ಸುಗಳಲ್ಲಿ ಮಾರಾಟವಾಗುವ ಬೆಲೆಗಳೂ ದುಬಾರಿಯೇ.
ಬೆಳೆಗಾರನಿಗೂ ಲಾಭವಿಲ್ಲ, ತಿನ್ನುವವರಿಗೂ ಲಾಭವಿಲ್ಲದ ತರಕಾರಿ ಬೆಲೆ ನಿರ್ಧಾರದ ಬಗ್ಗೆ ಏಕ ರೂಪತೆ ಬರಬೇಕು. ಮಧ್ಯವರ್ತಿಗಳ ಹಾವಳಿಯಲ್ಲಿ ಇಬ್ಬರಿಗೂ ಅನ್ಯಾಯವಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನಮಗೆ ಉತ್ತರಿಸಬೇಕು.
* ಲಲಿತಾ ಮುನಿರಾಜು ಮತ್ತು ಕೆಂಪಮ್ಮ ಆಡುಗೋಡಿ