Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಹೊಸರುಚಿ : ಹೋಳಿಗೆ ಸಾರು ಅಥವಾ ಒಬ್ಬಟ್ಟು ಸಾರು

ಬೇಳೆಕಟ್ಟು : ಬೇಳೆಯನ್ನು ತುಂಬಾ ನೀರು ಹಾಕಿ ಬೇಯಿಸಿಕೊಳ್ಳಬೇಕು. ಬೇಳೆಯೂ ಕರಗದಂತೆ ಬೇಯಿಸಿ, ಗಟ್ಟಿಯಿರುವಾಗಲೆ ಅದನ್ನು ಇಳಿಸಿ ನೀರು ಸೋಸಿ ಬಸಿದುಕೊಳ್ಳಿ. ಅದರಿಂದ ಬರುವ ನೀರನ್ನೆ "ಬೇಳೆ ಕಟ್ಟು" ಎನ್ನುತ್ತೇವೆ. ಬಸಿದಾಗ ಬಂದಿರುವ ಬೇಳೆಗೆ ಬೆಲ್ಲ ಮತ್ತು ಏಲಕ್ಕಿ ಹಾಕಿ, ಒಲೆ ಮೇಲಿಟ್ಟು ಕುದಿಸಿ, ರುಬ್ಬಿಕೊಳ್ಳುವ ಮಿಶ್ರಣವೇ "ಹೂರಣ".
ಬೇಕಾಗುವ ಸಾಮಗ್ರಿಗಳು:
ತೊಗರಿಬೇಳೆ ಬೇಯಿಸಿ ಬಸಿದು ತೆಗೆದ ಬೇಳೆಕಟ್ಟು
ಕರಿಬೇವು ಎಸಳು - ಎರಡು
ಹೂರಣ (ಬೇಳೆ-ಬೆಲ್ಲದ ರುಬ್ಬಿದ ಮಿಶ್ರಣ)- ಎರಡು ಚಮಚ
ಈರುಳ್ಳಿ - ಒಂದು
ಬೆಳ್ಳುಳ್ಳಿ ಐದಾರು ಎಸಳು
ತೆಂಗಿನಕಾಯಿ ತುರಿ ಸ್ವಲ್ಪ
ಹುಣಸೇಹಣ್ಣು / ಹುಣಸೇರಸ(ಪಲ್ಪ್)
ಕೊತ್ತಂಬರಿ ಸೊಪ್ಪು ಸ್ವಲ್ಪ
ಎಣ್ಣೆ / ತುಪ್ಪ
ಸಾಸಿವೆ, ಕರಿಬೇವು
ಇಂಗು, ಜೀರಿಗೆ
ಉಪ್ಪು
ಹುರಿದು ಮಸಾಲೆಪುಡಿ ಮಾಡಿಕೊಳ್ಳಿ
ಒಣಮೆಣಸಿನಕಾಯಿ ರುಚಿಗೆ
ಧನಿಯಾ - ಎರಡು ದೊಡ್ಡ ಚಮಚಗಳು
ಜೀರಿಗೆ - ಒಂದು ದೊಡ್ಡ ಚಮಚ
ಮೆಣಸು - ಕಾಲು ಚಮಚ
ಮೆಂತ್ಯ - ಕಾಲು ಚಮಚ
ಸಾಸಿವೆ - ಕಾಲು ಚಮಚ
ಚೆಕ್ಕೆ - ಚಿಕ್ಕ ಚೂರು,ಲವಂಗ -ಒಂದು
ತಯಾರಿಸುವ ರೀತಿ:
ಬೇಳೆ ಬಸಿದುಕೊಂಡ ಕಟ್ಟು ನೀರಿಗೆ ಅದು ಬಿಸಿಯಾಗಿರುವಾಗಲೆ ಒಂದೆರಡು ಎಸಳು ತೊಳೆದಿರುವ ಕರಿಬೇವಿನಸೊಪ್ಪು ಹಾಕಿಡಿ. ಮೊದಲು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಚೂರು ಎಣ್ಣೆ ಹಾಕಿ ಹುರಿದುಕೊಳ್ಳಿ. ಹುರಿದುಕೊಂಡು ಪುಡಿ ಮಾಡಲು ಹೇಳಿರುವ ಸಾಮಾನುಗಳನ್ನೆಲ್ಲಾ ಹುರಿದು ಪುಡಿಮಾಡಿಕೊಳ್ಳಿ.
ತೆಂಗಿನಕಾಯಿ ತುರಿಗೆ, ಹುರಿದಿರುವ ಈರುಳ್ಳಿ, ಬೆಳ್ಳುಳ್ಳಿ, ಮಸಾಲೆಪುಡಿ, ಹುಣಸೇಹಣ್ಣು, ಬೇಳೆ ಹೂರಣ, ಕೊತ್ತಂಬರಿಸೊಪ್ಪು ಮತ್ತು ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
ಈಗ ಒಂದು ಪಾತ್ರೆಗೆ ಸ್ವಲ್ಪ ಎಣ್ಣೆ ಮತ್ತು ಒಂದು ಚಮಚ ತುಪ್ಪ ಹಾಕಿ ಸಾಸಿವೆ, ಜೀರಿಗೆ, ಕರಿಬೇವು, ಇಂಗು ಮತ್ತು ಒಂದು ಜಜ್ಜಿದ ಬೆಳ್ಳುಳ್ಳಿ ಹಾಕಿ ಒಗ್ಗರಣೆ ಮಾಡಿಕೊಂಡು, ಅದಕ್ಕೆ ರುಬ್ಬಿದ ಮಸಾಲೆ ಹಾಕಿ ಮತ್ತು ಬೇಳೆ ಕಟ್ಟು ಕೂಡ ಸೇರಿಸಿ. ಎರಡನ್ನು ಚೆನ್ನಾಗಿ ಬೆರೆಸಿ ಕುದಿಯಲು ಬಿಡಿ. ರುಚಿಗೆ ತಕ್ಕ ಉಪ್ಪು ಮತ್ತು ಕಾರ ಸೇರಿಸಿಕೊಳ್ಳಿ. ಒಂದು ಕುದಿ ಮಾತ್ರ ಕುದಿಸಿ ಇಳಿಸಿ. ಹೋಳಿಗೆ ಸಾರು ತಯಾರಾಗುತ್ತದೆ.
ಈ ಹೋಳಿಗೆ ಸಾರನ್ನು ಮೊದಲ ಸಾರಿ ಮಾತ್ರ ಒಂದು ಸಾರಿ ಕುದಿಸಿದರೆ ಸಾಕು. ಈ ಸಾರು ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಕುದಿಸಿ ಕುದಿಸಿ ಸ್ವಲ್ಪ ಗಟ್ಟಿ ಬಂದಾಗ ಇನ್ನೂ ರುಚಿ ಜಾಸ್ತಿಯಾಗುತ್ತದೆ. [ಕೃಪೆ : ಅಡಿಗೆ ಸವಿರುಚಿ]



Click it and Unblock the Notifications