Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಕಾಳುಮೆಣಸಿನ ಕೋಲಾರ ಚಿಕಿತ್ಸೆ

ಮೊದಲೇ ಸ್ಪಷ್ಟಪಡಿಸುತ್ತಿದ್ದೇನೆ. ಬೆಂಗಳೂರಿಗೆ ಸ್ವಂತ ಹವಾಗುಣ ಇದೆಯೋ ಇಲ್ಲವೋ ಎನ್ನುವ ಚರ್ಚಾಕೂಟಕ್ಕೆ ಸೋಮವಾರ ಬೆಳ್ಳಂಬೆಳಗ್ಗೆ ನಿಮ್ಮನ್ನು ನಾನು ಆಹ್ವಾನಿಸುತ್ತಿಲ್ಲ.ಕೋಲಾರ ಪ್ರಾಂತ್ಯದ ಒಂದು ಝುಂಯೆನ್ನುವ ಬೆಚ್ಚನೆ ಅಡುಗೆ, ಅದೇ ಅಪ್ಪಟ ಮೆಣಸಿನ ಸಾರು ಮಾಡಿ ಊಟಕ್ಕೆ ಕರಿತೀದೀನಿ, ಬರ್ತೀರಾ!
ಈಗ ನಾನು ನಿಮಗೆ ಕೋಲಾರದ ಮೆಣಸಿನ ಸಾರಿನ ಬಗ್ಗೆ ಹೇಳಿಕೊಡ್ತೀನಿ.ಇದು ನಮ್ಮ ವಂಶಪಾರಂಪರ್ಯದ ರೆಸಿಪಿ. ಸಾಮಾನ್ಯವಾಗಿ ಕೋಲಾರದಿಂದ ಹೋದ ಹಾಗೂ ಕೋಲಾರಕ್ಕೆ ಮನೆತುಂಬಿಸಿಕೊಂಡು ಬಂದ ಹೆಣ್ಣು ಮಕ್ಕಳು ಅದರ ರುಚಿಗೆ ಮಾರು ಹೋಗಿ ಆಸ್ಥೆಯಿಂದ ಕಲಿತು ತಮ್ಮ ವಂಶದ ಮುಂದುವರೆದ ಭಾಗಕ್ಕೆ ತಿಳಿಸಿಕೊಡುವ ಸಾರು :)
ಬೇಕಾದ ಸಾಮಗ್ರಿಗಳು :
ನೀರು ಮೂರು ಕಪ್, ಹುಣಿಸೆ ಹಣ್ಣು ಪುಟ್ಟ ನೆಲ್ಲಿ ಕಾಯಿ ಗಾತ್ರದಷ್ಟು ,ಕರಿಬೇವು ಎರಡು ಎಸಳು,ಜಜ್ಜಿದ ಬೆಳ್ಳುಳ್ಳಿ ಒಂದು ಪೂರ್ತಿ , ಕತ್ತರಿಸಿದ ಒಣಮೆಣಸಿನ ಕಾಯಿ ಎರಡು, ಪೂರ್ತಿ ಪುಡಿ ಮಾಡದ ಜೀರಿಗೆ-ಮೆಣಸು ಎರಡು ಸೇರಿ ಒಂದು ಚಮಚೆ,ಒಗ್ಗರಣೆಗೆ ತುಪ್ಪ ( ಕಂಪಲ್ಸರಿ),ರುಚಿಗೆ ತಕ್ಕಷ್ಟು ಉಪ್ಪು,ಕಾಲು ಸ್ಪೂನ್ ಜೀರಿಗೆ.
ಮಾಡುವ ವಿಧಾನ:
ಮೊದಲು ಹುಣಿಸೆ ಹಣ್ಣನ್ನು ನೆನೆಸಿಡಬೇಕು.ಬಾಣಲೆ ಅಥವಾ ಪಾತ್ರೆಯಲ್ಲಿ ತುಪ್ಪ ಹಾಕಿ ಅದು ಸ್ವಲ್ಪ ಕಾದ ಬಳಿಕ ಅದರಲ್ಲಿ ಸಾಸಿವೆಯನ್ನು ಚಿಟುಗುಟ್ಟಿಸಿ,ತಕ್ಷಣ ಪುಡಿಮಾಡಿದ ಜೀರಿಗೆ-ಮೆಣಸು ಹಾಕಿ ಒಂದು ಸರ್ತಿ ಅತ್ತಿತ್ತ ಮಾಡಿ,ಜಜ್ಜಿದ ಬೆಳ್ಳುಳ್ಳಿ ಅದ್ರಲ್ಲಿ ಹಾಕಿ,ಅದನ್ನು ಅತ್ತಿತ್ತಮಾಡಿ,ತಕ್ಷಣ ಮೆಣಸಿನಕಾಯಿ ಚೂರು ಹಾಕಿಕೊಳ್ಳಲಿ. ಕೊನೆಯಲ್ಲಿ ಕರಿಬೇವು ಜೀರಿಗೆ ಇವೆಲ್ಲವನ್ನೂ ಒಂದೆರಡು ಸಲ ಅತ್ತಿತ್ತ ಹುರಿಯಿರಿ.
ಅನಂತರ ನೀರನ್ನು ಹಾಕಿ,ಒಂದು ಕುದಿ ಬಂದ ತಕ್ಷಣ ಹುಣಿಸೆ ರಸ ಬೆರೆಸಿ.ಅದು ಚನ್ನಾಗಿ ಕುದ್ದಾಗ ಉಪ್ಪು ಬೆರಸಿ.ರುಚಿ ನೋಡಿ ಹುಳಿ ಅನ್ನಿಸಿದರೆ ಸ್ವಲ್ಪ ಬಿಸಿನೀರನ್ನು ಬೆರಸಬಹುದು.ಇದು ಅಡುಗೆ ಕಲಿಯ ಬಯಸುವವರ ಸಂಜೀವಿನಿ. ಆರೋಗ್ಯ ಇರಲಿ ಬಿಡಲಿ ಇದು ದೇಹಕ್ಕೆ ಉತ್ತಮ. ಚಳಿಗಾಲಕ್ಕೆ ಹೇಳಿಮಾಡಿಸಿದ ಸಾರು. ಬೇಸಿಗೆಯಲ್ಲಿ ಬಿಡದೆ ಸೇವಿಸುವ ರಸ, ಮಳೆಗಾಲದಲ್ಲೂ ತೊಂದರೆಯಿಲ್ಲದೆ ಜಮಾಯಿಸ ಬಹುದು. ಟ್ರೈ ಇಟ್ ಅಂಡ್ ಹ್ಯಾವ್ ಇಟ್.ಆದ್ರೆ ಒಳ್ಳೆಯ ಫಲಿತಾಂಶ ಸಿಗುತ್ತೆ. ಮತ್ತೆ ಇದು ರುಚಿಯಾದ ಮೆಣಸಿನ ಸಾರು.ಓಕೆ ಫ್ರೆಂಡ್ಸ್, ಟೇಕ್ ಕೇರ್.



Click it and Unblock the Notifications