Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕಾಳುಮೆಣಸಿನ ಕೋಲಾರ ಚಿಕಿತ್ಸೆ

ಮೊದಲೇ ಸ್ಪಷ್ಟಪಡಿಸುತ್ತಿದ್ದೇನೆ. ಬೆಂಗಳೂರಿಗೆ ಸ್ವಂತ ಹವಾಗುಣ ಇದೆಯೋ ಇಲ್ಲವೋ ಎನ್ನುವ ಚರ್ಚಾಕೂಟಕ್ಕೆ ಸೋಮವಾರ ಬೆಳ್ಳಂಬೆಳಗ್ಗೆ ನಿಮ್ಮನ್ನು ನಾನು ಆಹ್ವಾನಿಸುತ್ತಿಲ್ಲ.ಕೋಲಾರ ಪ್ರಾಂತ್ಯದ ಒಂದು ಝುಂಯೆನ್ನುವ ಬೆಚ್ಚನೆ ಅಡುಗೆ, ಅದೇ ಅಪ್ಪಟ ಮೆಣಸಿನ ಸಾರು ಮಾಡಿ ಊಟಕ್ಕೆ ಕರಿತೀದೀನಿ, ಬರ್ತೀರಾ!
ಈಗ ನಾನು ನಿಮಗೆ ಕೋಲಾರದ ಮೆಣಸಿನ ಸಾರಿನ ಬಗ್ಗೆ ಹೇಳಿಕೊಡ್ತೀನಿ.ಇದು ನಮ್ಮ ವಂಶಪಾರಂಪರ್ಯದ ರೆಸಿಪಿ. ಸಾಮಾನ್ಯವಾಗಿ ಕೋಲಾರದಿಂದ ಹೋದ ಹಾಗೂ ಕೋಲಾರಕ್ಕೆ ಮನೆತುಂಬಿಸಿಕೊಂಡು ಬಂದ ಹೆಣ್ಣು ಮಕ್ಕಳು ಅದರ ರುಚಿಗೆ ಮಾರು ಹೋಗಿ ಆಸ್ಥೆಯಿಂದ ಕಲಿತು ತಮ್ಮ ವಂಶದ ಮುಂದುವರೆದ ಭಾಗಕ್ಕೆ ತಿಳಿಸಿಕೊಡುವ ಸಾರು :)
ಬೇಕಾದ ಸಾಮಗ್ರಿಗಳು :
ನೀರು ಮೂರು ಕಪ್, ಹುಣಿಸೆ ಹಣ್ಣು ಪುಟ್ಟ ನೆಲ್ಲಿ ಕಾಯಿ ಗಾತ್ರದಷ್ಟು ,ಕರಿಬೇವು ಎರಡು ಎಸಳು,ಜಜ್ಜಿದ ಬೆಳ್ಳುಳ್ಳಿ ಒಂದು ಪೂರ್ತಿ , ಕತ್ತರಿಸಿದ ಒಣಮೆಣಸಿನ ಕಾಯಿ ಎರಡು, ಪೂರ್ತಿ ಪುಡಿ ಮಾಡದ ಜೀರಿಗೆ-ಮೆಣಸು ಎರಡು ಸೇರಿ ಒಂದು ಚಮಚೆ,ಒಗ್ಗರಣೆಗೆ ತುಪ್ಪ ( ಕಂಪಲ್ಸರಿ),ರುಚಿಗೆ ತಕ್ಕಷ್ಟು ಉಪ್ಪು,ಕಾಲು ಸ್ಪೂನ್ ಜೀರಿಗೆ.
ಮಾಡುವ ವಿಧಾನ:
ಮೊದಲು ಹುಣಿಸೆ ಹಣ್ಣನ್ನು ನೆನೆಸಿಡಬೇಕು.ಬಾಣಲೆ ಅಥವಾ ಪಾತ್ರೆಯಲ್ಲಿ ತುಪ್ಪ ಹಾಕಿ ಅದು ಸ್ವಲ್ಪ ಕಾದ ಬಳಿಕ ಅದರಲ್ಲಿ ಸಾಸಿವೆಯನ್ನು ಚಿಟುಗುಟ್ಟಿಸಿ,ತಕ್ಷಣ ಪುಡಿಮಾಡಿದ ಜೀರಿಗೆ-ಮೆಣಸು ಹಾಕಿ ಒಂದು ಸರ್ತಿ ಅತ್ತಿತ್ತ ಮಾಡಿ,ಜಜ್ಜಿದ ಬೆಳ್ಳುಳ್ಳಿ ಅದ್ರಲ್ಲಿ ಹಾಕಿ,ಅದನ್ನು ಅತ್ತಿತ್ತಮಾಡಿ,ತಕ್ಷಣ ಮೆಣಸಿನಕಾಯಿ ಚೂರು ಹಾಕಿಕೊಳ್ಳಲಿ. ಕೊನೆಯಲ್ಲಿ ಕರಿಬೇವು ಜೀರಿಗೆ ಇವೆಲ್ಲವನ್ನೂ ಒಂದೆರಡು ಸಲ ಅತ್ತಿತ್ತ ಹುರಿಯಿರಿ.
ಅನಂತರ ನೀರನ್ನು ಹಾಕಿ,ಒಂದು ಕುದಿ ಬಂದ ತಕ್ಷಣ ಹುಣಿಸೆ ರಸ ಬೆರೆಸಿ.ಅದು ಚನ್ನಾಗಿ ಕುದ್ದಾಗ ಉಪ್ಪು ಬೆರಸಿ.ರುಚಿ ನೋಡಿ ಹುಳಿ ಅನ್ನಿಸಿದರೆ ಸ್ವಲ್ಪ ಬಿಸಿನೀರನ್ನು ಬೆರಸಬಹುದು.ಇದು ಅಡುಗೆ ಕಲಿಯ ಬಯಸುವವರ ಸಂಜೀವಿನಿ. ಆರೋಗ್ಯ ಇರಲಿ ಬಿಡಲಿ ಇದು ದೇಹಕ್ಕೆ ಉತ್ತಮ. ಚಳಿಗಾಲಕ್ಕೆ ಹೇಳಿಮಾಡಿಸಿದ ಸಾರು. ಬೇಸಿಗೆಯಲ್ಲಿ ಬಿಡದೆ ಸೇವಿಸುವ ರಸ, ಮಳೆಗಾಲದಲ್ಲೂ ತೊಂದರೆಯಿಲ್ಲದೆ ಜಮಾಯಿಸ ಬಹುದು. ಟ್ರೈ ಇಟ್ ಅಂಡ್ ಹ್ಯಾವ್ ಇಟ್.ಆದ್ರೆ ಒಳ್ಳೆಯ ಫಲಿತಾಂಶ ಸಿಗುತ್ತೆ. ಮತ್ತೆ ಇದು ರುಚಿಯಾದ ಮೆಣಸಿನ ಸಾರು.ಓಕೆ ಫ್ರೆಂಡ್ಸ್, ಟೇಕ್ ಕೇರ್.



Click it and Unblock the Notifications
