Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಕಾರ್ತೀಕ ಕೃಷ್ಣ ದ್ವಾದಶಿಗೆ ಸ್ಪೆಷಲ್ ಸಾರು

ನಾಳೆ ದ್ವಾದಶಿಗೆ ಹೊಸ ಟೈಪ್ ಬೇಳೆ ಸಾರು. ಆದರೆ ಅದೇ, ಮಾಡಿದ್ದೇ ಮಾಡೋ ಸಾರಲ್ಲ. ಬೇಳೆ ಬೇಯಿಸಿ ಉಪ್ಪು ಖಾರ ಹುಳಿ ಹಾಕಿ ಸ್ಟೌವ್ ನಿಂದ ಪಾತ್ರೆ ಕೆಳಗಿಳಿಸಿ ಕೈತೊಳೆದುಕೊಂಡು ಜೀ ಕನ್ನಡ ಆನ್ ಮಾಡಿ ಬದುಕು ಜಟಕಾ ಬಂಡಿ ಸೀರಿಯಲ್ಲಿಗೆ ಕಣ್ಣು ಕೀಲಿಸಿ ಕೂಡುವವರಿಗೆ ಇವತ್ತಿನ ಸಾರು ರೆಸಿಪಿ ಹೇಳಿಮಾಡಿಸಿದ ಕಿವಿಮಾತಲ್ಲ. ಈ ಸ್ಪೆಷಲ್ ಸಾರು ನಿಮಗೆ ಮಾತ್ರ. ಭಾನುವಾರದ ರಜೆಗಾಗಿ ಕಾಯುತ್ತಿರುವ ಶಬರಿಯರಿಗೆ ಮಾತ್ರ.
ಬೇಕಾಗುವ ಪದಾರ್ಥಗಳ ಪಟ್ಟಿಯಲ್ಲಿ ಯಥಾಪ್ರಕಾರ ತೊಗರಿ ಬೇಳೆ, ಹುಣಿಸೆ ಹಣ್ಣು, ಸಾರಿನ ಪುಡಿ, ಉಪ್ಪು, ಟೊಮೆಟೋ, ತುಪ್ಪ, ತೆಂಗಿನತುರಿ, ಜೀರಿಗೆ ಇರಲಿ. ಸಾರು ಪಾತ್ರೆ ತುಂಬಾ ಮಾಡಬೇಕಾ? ಅಥವಾ ಸ್ವಲ್ಪನೇ ಸಾಕಾ? ಎಂಬ ಪ್ರಶ್ನೆಯೇ ಇಲ್ಲ. ನಿಮ್ಮ ಮನೆಯಲ್ಲಿ ಊಟಕ್ಕೆ ಹಾಜರಾಗುವ ಅನ್ನ ಸಾರು ಭಕ್ತರ ಲೆಕ್ಕದ ಮೇಲೆ ಪ್ರಮಾಣ ಅವಲಂಬಿತ.
ಹಂತ 1) ಕುಕ್ಕರಿನಲ್ಲಿ ಬೇಳೆ ಬೇಯಲಿ. ಬೆಂದು ಕರಗಿರಲಿ; ಹಂತ 2) ಒಗ್ಗರಣೆ ಸೌಟಿನಲ್ಲಿ ತುಪ್ಪ, ಜೀರಿಗೆ, ಟೊಮೆಟೋ ಸ್ವಲ್ಪ ಕಾಯಿತುರಿ ಹಾಕಿ ಬಾಡಿಸಿ ನಂತರ ಅದನ್ನು ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿ ಈಕಡೆ ಇಡಿ; ಹಂತ 3) ನಿತ್ಯ ಸಾರು ಮಾಡುವ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ಹಾಕಿ ಒಲೆ ಮೇಲಿಟ್ಟು ಅದು ಕುದಿಬಂದ ಮೇಲೆ ಹೆಚ್ಚಿದ ಕೊತ್ತಂಬರಿ, ಹೆಚ್ಚಿದ ಕರಿಬೇವು, ಸಾರಿನಪುಡಿ, ಉಪ್ಪು ಹಾಕಿ ಕುದಿಯುವುದಕ್ಕೆ ಬಿಡಿ; ಹಂತ 4) ಇದು ಚೆನ್ನಾಗಿ ಕುದ್ದು ಸಾರಿನ ಪುಡಿಯ ಹಸಿ ವಾಸನೆ ಆವಿಯಾದನಂತರ ಹುಣಿಸೆಹಣ್ಣಿನ ರಸ, ಚೂರು ಬೆಲ್ಲ ಹಾಕಿ ಮತ್ತೆ ಕುದಿಯಲು ಬಿಡಿ;
ಹಂತ 5) ರುಬ್ಬಿಕೊಂಡ ಟೊಮೆಟೋ ಚಟ್ನಿಯನ್ನು ಕುದಿಯುತ್ತಿರುವ ಈ ನೀರಿಗೆ ಬೆರಸಿ ಮತ್ತೆ ಕುದಿಯಲು ಬಿಡಿ. ಒಂದೊಂದೂ ಹಂತದಲ್ಲೂ ಚೆನ್ನಾಗಿ ಕುದಿಯುತ್ತಲೇ ಇರಬೇಕು.ಈ ಮೆಥೆಡ್ಡೇ ಈ ಸಾರಿನ ಬಂಡವಾಳ. ಇದೇ ವೇಳೆ, ದಟ್ಸ್ ಕನ್ನಡ ಅಡುಗೆ ರೆಸಿಪಿಗೆ ಗ್ಯಾಸ್ ಜಾಸ್ತಿ ಖರ್ಚಾಗತ್ತೆ ಎಂದು ಗೊಣಗಬಾರದು, ಪ್ಲೀಜ್.
ಕುದಿಯುತ್ತಿರುವ ಸಾರುನೀರಿಗೆ ಈಗ ಬೆಂದ ಬೇಳೆ ಕಟ್ಟನ್ನು ಸುರಿದು ಮತ್ತೆ ಕುದಿಯಲು ಬಿಡಿ. ಕೊತಕೊತ ಕುದ್ದನಂತರ ಎರಡು ಚಮಚ ತುಪ್ಪಕ್ಕೆ, ಚಮಚೆ ಜೀರಿಗೆ, ಚಿಟಿಕೆ ಇಂಗಿನ ಒಗ್ಗರಣೆ ಕೊಟ್ಟು ಸಾರಿನ ಪಾತ್ರೆಯಲ್ಲಿ ಮುಳುಗಿಸಿ. ಚುಂಯ್ ಅಂದರೆ ಸಾರು ರೆಡಿ. ಊಟಕ್ಕೆ ಇನ್ನೂ ಟೈಂ ಇದೆ ಎನ್ನುವವರು ಪುನಃ ಹೆಚ್ಚಿದ ಕೊತ್ತಂಬರಿ, ತೊಳೆದ ಹಸಿ ಕರಿಬೇವಿನ ಎಲೆಗಳನ್ನು ಸಾರಿನ ಮೇಲೆ ತೇಲಿಬಿಡಬಹುದು. ಕೊತ್ತಂಬರಿ ಅಲಂಕಾರಕ್ಕೆ, ಹಸಿ ಕರಿಬೇವು ಪರಿಮಳಕ್ಕೆ.
(ದಟ್ಸ್ ಕನ್ನಡ ಅಡುಗೆಶಾಲೆ)



Click it and Unblock the Notifications