Latest Updates
-
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್!
ಚಳಿಗಾಲದಲ್ಲಿ ತಯಾರಿಸಿ ಅವರೆಕಾಳಿನ ಹುಳಿ

* ಭೀಮಸೇನ್ ರಾವ್
ಹೇಮಂತಋತು ಕಾಲಿಡುತ್ತಿದ್ದಂತೆ ಬೆಂಗಳೂರಿನ ಬೀದಿಬೀದಿಗಳಲ್ಲಿ ಅವರೆಕಾಳು ಗುಡ್ಡೆಗಳು ಹಾಜರಾಗುತ್ತವೆ. ಸೇರಿಗೆ 40 ಅಥವಾ 50 ರು. ಸೇರಿಗೆ ಅರವತ್ತೆಂದರೂ ಜನ ಮುಗಿಬಿದ್ದು ಕೊಂಡ್ಕೊಂಡು ಹೋಗ್ತಾರೆ. ಅವರೆಕಾಳು ಮಾರುವವರಿಗೂ ಭರ್ಜರಿ ವ್ಯಾಪಾರ.
ಅವರೆಕಾಳಿನಿಂದ ತಯಾರಿಸುವ ನಾನಾಬಗೆಯ ತಿಂಡಿತಿನಿಸುಗಳನ್ನು ನೆನೆದರಂತೂ ಕುಂತಲ್ಲಿಯೇ ಬಾಯಲ್ಲಿ ನೀರೂರಲು ಪ್ರಾರಂಭಿಸುತ್ತದೆ. ಅವರೆಕಾಳು ನಿಪ್ಪಟ್ಟು, ಕೋಡುಬಳೆ, ಉಸಳಿ, ಹುಳಿ, ಬಸ್ಸಾರು, ಮಸಾಲೆವಡೆ... ಒಂದೆ ಎರಡೆ... ಇನ್ನೂ ಎಷ್ಟೆಷ್ಟಿವೆಯೋ ಆ ಭಗವಂತನೇ ಬಲ್ಲ.
ಮಾಗಿಯ ಚಳಿಗೆ ಸೊಗಡಾಗಿ ಸಿಗುವ ಅವರೆ ಕಾಳು ರುಚಿಕರವಷ್ಟೇ ಅಲ್ಲ. ಪೌಷ್ಟಿಕ ಕೂಡ. ಅವರೆ ಚಳಿಯನ್ನು ತಡೆಯುವ ಶಕ್ತಿಯನ್ನೂ ವೃದ್ಧಿಸುತ್ತದಂತೆ. ಡಿಸೆಂಬರ್ ಕೊನೆಯ ವಾರ ಮತ್ತು ಮುಂದಿನ ವರ್ಷದ ಮೊದಲ ವಾರ ರಾಜ್ಯದಲ್ಲಿ ಭಯಂಕರ ಚಳಿ ಇರುತ್ತದೆಂದು ಹವಾಮಾನ ಇಲಾಖೆ ಬೇರೆ ಮುನ್ನೆಚ್ಚರಿಕೆ ನೀಡಿದೆ. ಚಳಿಯನ್ನು ಒದ್ದೋಡಿಸಲು ಅವರೆಕಾಳು ಹುಳಿ ಅಥವಾ ಸಾಂಬಾರನ್ನೇ ಮಾಡಿದರೆ ಹೇಗೆ?
ಬೇಕಾಗುವ ಪದಾರ್ಥ : ಬಲಿತ ಅವರೆಕಾಯಿ, ಒಂದು ಚಮಚ ತುಪ್ಪ, 1 ಚಮಚ ಮೆಂತ್ಯ, ಅರ್ಧ ಗಿಟಕು ಒಣಕೊಬ್ಬರಿ, ಒಂದು ಚಮಚ ಹುರಿಗಡಲೆ, ಒಂದೊಂದು ಚಮಚದಷ್ಟು ಅರಿಶಿನ, ಜೀರಿಗೆ, ಕೊತ್ತಂಬರಿ ಬೀಜ, ಗಸಗಸೆ, ನಾಲ್ಕು ಈರುಳ್ಳಿ, 10-15 ಕೆಂಪು ಮೆಣಸಿನಕಾಯಿ ಮತ್ತು ಪಾಲಾಕ್ ಸೊಪ್ಪು, ಸ್ವಲ್ಪ ಎಣ್ಣೆ.
ಮಾಡುವ ವಿಧಾನ : ಮೊದಲು ಬಲಿತ ಅವರೆಕಾಯನ್ನು ಸುಲಿದು ಕಾಳನ್ನು ಆರಿಸಿ ಸಾರು ಮಾಡುವ ಹಿಂದಿನ ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಚೆನ್ನಾಗಿ ನೆಂದ ಕಾಳಿನ ಮೇಲ್ಭಾಗದ ಸಿಪ್ಪೆ ತೆಗೆದು ಇದುಕಿ ಬೇಳೆ ಮಾಡಿಕೊಳ್ಳಿ. ದಪ್ಪ ತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ ಕಾಳುಗಳನ್ನು ಬಿಳಿಹೊಗೆ ಬರುವವರೆಗೆ ಹುರಿಯಿರಿ.
2 ಪಾವಿನಷ್ಟು ಕಾಳಿಗೆ 3 ಪಾವು ನೀರು ಹಾಕಿ ಕುಕ್ಕರಿನಲ್ಲಿ ಬೇಯಿಸಿಕೊಳ್ಳಿ. ಮಸಾಲೆಗೆ 1 ಚಮಚ ಮೆಂತ್ಯ, ತುರಿದ ಕೊಬ್ಬರಿ, ಹುರಿಗಡಲೆ, ಅರಿಶಿನ, ಜೀರಿಗೆ, ಕೊತ್ತಂಬರಿಬೀಜ, ಗಸಗಸೆ, ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿಯನ್ನು ಎಣ್ಣೆಯ ಬಾಣಲೆಯಲ್ಲಿ ಕೆಂಪಾಗಿ ಹುರಿಯಿರಿ. ನಂತರ ಉಳಿದ ಸಾಮಾನುಗಳನ್ನು ಹಾಕಿ ನುಣ್ಣಗೆ ರುಬ್ಬಿ.
ಬೆಂದ ಕಾಳಿಗೆ ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ಕಲಕಿ, ಅದಕ್ಕೆ ಸಣ್ಣಗೆ ಹೆಚ್ಚಿದ ಪಾಲಾಕ್ ಸೊಪ್ಪನ್ನು ಎಣ್ಣೆಯಲ್ಲಿ ಸ್ಪಲ್ಪ ತಾಳಿಸಿ ಮಾಡಿ ಹಾಕಿ. ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಒಲೆಯ ಮೇಲಿಡಿ. ಚೆನ್ನಾಗಿ ಕುದ್ದನಂತರ ಕೆಳಗಿಳಿಸಿದರೆ ಸೊಗಸಾದ ... ಆಹಾ... ಘಮ..ಘಮ.
ತುಪ್ಪ ಬಡಿಸಿದ ಅನ್ನ, ಚಪಾತಿ, ರೊಟ್ಟಿ, ಬಿಸಿಬಿಸಿ ರಾಗಿ ಮುದ್ದೆ, ಮಸಾಲೆ ದೋಸೆ ಯಾವುದೇ ತಿನಿಸಿನ ಜೊತೆ ಬೆರೆಯಲು ಅವರೆಕಾಳು ಹುಳಿ ಹಿಂಜರಿಯುವುದಿಲ್ಲ. ಸರಿ ಇನ್ನೇಕೆ ತಡ, ಜಮಾಯಿಸಿ. ಆದರೆ, ಮಿತಿಯಿರಲಿ!



Click it and Unblock the Notifications
