Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಚಳಿಗಾಲದಲ್ಲಿ ತಯಾರಿಸಿ ಅವರೆಕಾಳಿನ ಹುಳಿ

* ಭೀಮಸೇನ್ ರಾವ್
ಹೇಮಂತಋತು ಕಾಲಿಡುತ್ತಿದ್ದಂತೆ ಬೆಂಗಳೂರಿನ ಬೀದಿಬೀದಿಗಳಲ್ಲಿ ಅವರೆಕಾಳು ಗುಡ್ಡೆಗಳು ಹಾಜರಾಗುತ್ತವೆ. ಸೇರಿಗೆ 40 ಅಥವಾ 50 ರು. ಸೇರಿಗೆ ಅರವತ್ತೆಂದರೂ ಜನ ಮುಗಿಬಿದ್ದು ಕೊಂಡ್ಕೊಂಡು ಹೋಗ್ತಾರೆ. ಅವರೆಕಾಳು ಮಾರುವವರಿಗೂ ಭರ್ಜರಿ ವ್ಯಾಪಾರ.
ಅವರೆಕಾಳಿನಿಂದ ತಯಾರಿಸುವ ನಾನಾಬಗೆಯ ತಿಂಡಿತಿನಿಸುಗಳನ್ನು ನೆನೆದರಂತೂ ಕುಂತಲ್ಲಿಯೇ ಬಾಯಲ್ಲಿ ನೀರೂರಲು ಪ್ರಾರಂಭಿಸುತ್ತದೆ. ಅವರೆಕಾಳು ನಿಪ್ಪಟ್ಟು, ಕೋಡುಬಳೆ, ಉಸಳಿ, ಹುಳಿ, ಬಸ್ಸಾರು, ಮಸಾಲೆವಡೆ... ಒಂದೆ ಎರಡೆ... ಇನ್ನೂ ಎಷ್ಟೆಷ್ಟಿವೆಯೋ ಆ ಭಗವಂತನೇ ಬಲ್ಲ.
ಮಾಗಿಯ ಚಳಿಗೆ ಸೊಗಡಾಗಿ ಸಿಗುವ ಅವರೆ ಕಾಳು ರುಚಿಕರವಷ್ಟೇ ಅಲ್ಲ. ಪೌಷ್ಟಿಕ ಕೂಡ. ಅವರೆ ಚಳಿಯನ್ನು ತಡೆಯುವ ಶಕ್ತಿಯನ್ನೂ ವೃದ್ಧಿಸುತ್ತದಂತೆ. ಡಿಸೆಂಬರ್ ಕೊನೆಯ ವಾರ ಮತ್ತು ಮುಂದಿನ ವರ್ಷದ ಮೊದಲ ವಾರ ರಾಜ್ಯದಲ್ಲಿ ಭಯಂಕರ ಚಳಿ ಇರುತ್ತದೆಂದು ಹವಾಮಾನ ಇಲಾಖೆ ಬೇರೆ ಮುನ್ನೆಚ್ಚರಿಕೆ ನೀಡಿದೆ. ಚಳಿಯನ್ನು ಒದ್ದೋಡಿಸಲು ಅವರೆಕಾಳು ಹುಳಿ ಅಥವಾ ಸಾಂಬಾರನ್ನೇ ಮಾಡಿದರೆ ಹೇಗೆ?
ಬೇಕಾಗುವ ಪದಾರ್ಥ : ಬಲಿತ ಅವರೆಕಾಯಿ, ಒಂದು ಚಮಚ ತುಪ್ಪ, 1 ಚಮಚ ಮೆಂತ್ಯ, ಅರ್ಧ ಗಿಟಕು ಒಣಕೊಬ್ಬರಿ, ಒಂದು ಚಮಚ ಹುರಿಗಡಲೆ, ಒಂದೊಂದು ಚಮಚದಷ್ಟು ಅರಿಶಿನ, ಜೀರಿಗೆ, ಕೊತ್ತಂಬರಿ ಬೀಜ, ಗಸಗಸೆ, ನಾಲ್ಕು ಈರುಳ್ಳಿ, 10-15 ಕೆಂಪು ಮೆಣಸಿನಕಾಯಿ ಮತ್ತು ಪಾಲಾಕ್ ಸೊಪ್ಪು, ಸ್ವಲ್ಪ ಎಣ್ಣೆ.
ಮಾಡುವ ವಿಧಾನ : ಮೊದಲು ಬಲಿತ ಅವರೆಕಾಯನ್ನು ಸುಲಿದು ಕಾಳನ್ನು ಆರಿಸಿ ಸಾರು ಮಾಡುವ ಹಿಂದಿನ ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಚೆನ್ನಾಗಿ ನೆಂದ ಕಾಳಿನ ಮೇಲ್ಭಾಗದ ಸಿಪ್ಪೆ ತೆಗೆದು ಇದುಕಿ ಬೇಳೆ ಮಾಡಿಕೊಳ್ಳಿ. ದಪ್ಪ ತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ ಕಾಳುಗಳನ್ನು ಬಿಳಿಹೊಗೆ ಬರುವವರೆಗೆ ಹುರಿಯಿರಿ.
2 ಪಾವಿನಷ್ಟು ಕಾಳಿಗೆ 3 ಪಾವು ನೀರು ಹಾಕಿ ಕುಕ್ಕರಿನಲ್ಲಿ ಬೇಯಿಸಿಕೊಳ್ಳಿ. ಮಸಾಲೆಗೆ 1 ಚಮಚ ಮೆಂತ್ಯ, ತುರಿದ ಕೊಬ್ಬರಿ, ಹುರಿಗಡಲೆ, ಅರಿಶಿನ, ಜೀರಿಗೆ, ಕೊತ್ತಂಬರಿಬೀಜ, ಗಸಗಸೆ, ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿಯನ್ನು ಎಣ್ಣೆಯ ಬಾಣಲೆಯಲ್ಲಿ ಕೆಂಪಾಗಿ ಹುರಿಯಿರಿ. ನಂತರ ಉಳಿದ ಸಾಮಾನುಗಳನ್ನು ಹಾಕಿ ನುಣ್ಣಗೆ ರುಬ್ಬಿ.
ಬೆಂದ ಕಾಳಿಗೆ ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ಕಲಕಿ, ಅದಕ್ಕೆ ಸಣ್ಣಗೆ ಹೆಚ್ಚಿದ ಪಾಲಾಕ್ ಸೊಪ್ಪನ್ನು ಎಣ್ಣೆಯಲ್ಲಿ ಸ್ಪಲ್ಪ ತಾಳಿಸಿ ಮಾಡಿ ಹಾಕಿ. ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಒಲೆಯ ಮೇಲಿಡಿ. ಚೆನ್ನಾಗಿ ಕುದ್ದನಂತರ ಕೆಳಗಿಳಿಸಿದರೆ ಸೊಗಸಾದ ... ಆಹಾ... ಘಮ..ಘಮ.
ತುಪ್ಪ ಬಡಿಸಿದ ಅನ್ನ, ಚಪಾತಿ, ರೊಟ್ಟಿ, ಬಿಸಿಬಿಸಿ ರಾಗಿ ಮುದ್ದೆ, ಮಸಾಲೆ ದೋಸೆ ಯಾವುದೇ ತಿನಿಸಿನ ಜೊತೆ ಬೆರೆಯಲು ಅವರೆಕಾಳು ಹುಳಿ ಹಿಂಜರಿಯುವುದಿಲ್ಲ. ಸರಿ ಇನ್ನೇಕೆ ತಡ, ಜಮಾಯಿಸಿ. ಆದರೆ, ಮಿತಿಯಿರಲಿ!



Click it and Unblock the Notifications