Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಚಳಿಗಾಲದಲ್ಲಿ ತಯಾರಿಸಿ ಅವರೆಕಾಳಿನ ಹುಳಿ

* ಭೀಮಸೇನ್ ರಾವ್
ಹೇಮಂತಋತು ಕಾಲಿಡುತ್ತಿದ್ದಂತೆ ಬೆಂಗಳೂರಿನ ಬೀದಿಬೀದಿಗಳಲ್ಲಿ ಅವರೆಕಾಳು ಗುಡ್ಡೆಗಳು ಹಾಜರಾಗುತ್ತವೆ. ಸೇರಿಗೆ 40 ಅಥವಾ 50 ರು. ಸೇರಿಗೆ ಅರವತ್ತೆಂದರೂ ಜನ ಮುಗಿಬಿದ್ದು ಕೊಂಡ್ಕೊಂಡು ಹೋಗ್ತಾರೆ. ಅವರೆಕಾಳು ಮಾರುವವರಿಗೂ ಭರ್ಜರಿ ವ್ಯಾಪಾರ.
ಅವರೆಕಾಳಿನಿಂದ ತಯಾರಿಸುವ ನಾನಾಬಗೆಯ ತಿಂಡಿತಿನಿಸುಗಳನ್ನು ನೆನೆದರಂತೂ ಕುಂತಲ್ಲಿಯೇ ಬಾಯಲ್ಲಿ ನೀರೂರಲು ಪ್ರಾರಂಭಿಸುತ್ತದೆ. ಅವರೆಕಾಳು ನಿಪ್ಪಟ್ಟು, ಕೋಡುಬಳೆ, ಉಸಳಿ, ಹುಳಿ, ಬಸ್ಸಾರು, ಮಸಾಲೆವಡೆ... ಒಂದೆ ಎರಡೆ... ಇನ್ನೂ ಎಷ್ಟೆಷ್ಟಿವೆಯೋ ಆ ಭಗವಂತನೇ ಬಲ್ಲ.
ಮಾಗಿಯ ಚಳಿಗೆ ಸೊಗಡಾಗಿ ಸಿಗುವ ಅವರೆ ಕಾಳು ರುಚಿಕರವಷ್ಟೇ ಅಲ್ಲ. ಪೌಷ್ಟಿಕ ಕೂಡ. ಅವರೆ ಚಳಿಯನ್ನು ತಡೆಯುವ ಶಕ್ತಿಯನ್ನೂ ವೃದ್ಧಿಸುತ್ತದಂತೆ. ಡಿಸೆಂಬರ್ ಕೊನೆಯ ವಾರ ಮತ್ತು ಮುಂದಿನ ವರ್ಷದ ಮೊದಲ ವಾರ ರಾಜ್ಯದಲ್ಲಿ ಭಯಂಕರ ಚಳಿ ಇರುತ್ತದೆಂದು ಹವಾಮಾನ ಇಲಾಖೆ ಬೇರೆ ಮುನ್ನೆಚ್ಚರಿಕೆ ನೀಡಿದೆ. ಚಳಿಯನ್ನು ಒದ್ದೋಡಿಸಲು ಅವರೆಕಾಳು ಹುಳಿ ಅಥವಾ ಸಾಂಬಾರನ್ನೇ ಮಾಡಿದರೆ ಹೇಗೆ?
ಬೇಕಾಗುವ ಪದಾರ್ಥ : ಬಲಿತ ಅವರೆಕಾಯಿ, ಒಂದು ಚಮಚ ತುಪ್ಪ, 1 ಚಮಚ ಮೆಂತ್ಯ, ಅರ್ಧ ಗಿಟಕು ಒಣಕೊಬ್ಬರಿ, ಒಂದು ಚಮಚ ಹುರಿಗಡಲೆ, ಒಂದೊಂದು ಚಮಚದಷ್ಟು ಅರಿಶಿನ, ಜೀರಿಗೆ, ಕೊತ್ತಂಬರಿ ಬೀಜ, ಗಸಗಸೆ, ನಾಲ್ಕು ಈರುಳ್ಳಿ, 10-15 ಕೆಂಪು ಮೆಣಸಿನಕಾಯಿ ಮತ್ತು ಪಾಲಾಕ್ ಸೊಪ್ಪು, ಸ್ವಲ್ಪ ಎಣ್ಣೆ.
ಮಾಡುವ ವಿಧಾನ : ಮೊದಲು ಬಲಿತ ಅವರೆಕಾಯನ್ನು ಸುಲಿದು ಕಾಳನ್ನು ಆರಿಸಿ ಸಾರು ಮಾಡುವ ಹಿಂದಿನ ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಚೆನ್ನಾಗಿ ನೆಂದ ಕಾಳಿನ ಮೇಲ್ಭಾಗದ ಸಿಪ್ಪೆ ತೆಗೆದು ಇದುಕಿ ಬೇಳೆ ಮಾಡಿಕೊಳ್ಳಿ. ದಪ್ಪ ತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ ಕಾಳುಗಳನ್ನು ಬಿಳಿಹೊಗೆ ಬರುವವರೆಗೆ ಹುರಿಯಿರಿ.
2 ಪಾವಿನಷ್ಟು ಕಾಳಿಗೆ 3 ಪಾವು ನೀರು ಹಾಕಿ ಕುಕ್ಕರಿನಲ್ಲಿ ಬೇಯಿಸಿಕೊಳ್ಳಿ. ಮಸಾಲೆಗೆ 1 ಚಮಚ ಮೆಂತ್ಯ, ತುರಿದ ಕೊಬ್ಬರಿ, ಹುರಿಗಡಲೆ, ಅರಿಶಿನ, ಜೀರಿಗೆ, ಕೊತ್ತಂಬರಿಬೀಜ, ಗಸಗಸೆ, ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿಯನ್ನು ಎಣ್ಣೆಯ ಬಾಣಲೆಯಲ್ಲಿ ಕೆಂಪಾಗಿ ಹುರಿಯಿರಿ. ನಂತರ ಉಳಿದ ಸಾಮಾನುಗಳನ್ನು ಹಾಕಿ ನುಣ್ಣಗೆ ರುಬ್ಬಿ.
ಬೆಂದ ಕಾಳಿಗೆ ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ಕಲಕಿ, ಅದಕ್ಕೆ ಸಣ್ಣಗೆ ಹೆಚ್ಚಿದ ಪಾಲಾಕ್ ಸೊಪ್ಪನ್ನು ಎಣ್ಣೆಯಲ್ಲಿ ಸ್ಪಲ್ಪ ತಾಳಿಸಿ ಮಾಡಿ ಹಾಕಿ. ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಒಲೆಯ ಮೇಲಿಡಿ. ಚೆನ್ನಾಗಿ ಕುದ್ದನಂತರ ಕೆಳಗಿಳಿಸಿದರೆ ಸೊಗಸಾದ ... ಆಹಾ... ಘಮ..ಘಮ.
ತುಪ್ಪ ಬಡಿಸಿದ ಅನ್ನ, ಚಪಾತಿ, ರೊಟ್ಟಿ, ಬಿಸಿಬಿಸಿ ರಾಗಿ ಮುದ್ದೆ, ಮಸಾಲೆ ದೋಸೆ ಯಾವುದೇ ತಿನಿಸಿನ ಜೊತೆ ಬೆರೆಯಲು ಅವರೆಕಾಳು ಹುಳಿ ಹಿಂಜರಿಯುವುದಿಲ್ಲ. ಸರಿ ಇನ್ನೇಕೆ ತಡ, ಜಮಾಯಿಸಿ. ಆದರೆ, ಮಿತಿಯಿರಲಿ!



Click it and Unblock the Notifications