Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಚಳಿಗಾಲದಲ್ಲಿ ತಯಾರಿಸಿ ಅವರೆಕಾಳಿನ ಹುಳಿ

* ಭೀಮಸೇನ್ ರಾವ್
ಹೇಮಂತಋತು ಕಾಲಿಡುತ್ತಿದ್ದಂತೆ ಬೆಂಗಳೂರಿನ ಬೀದಿಬೀದಿಗಳಲ್ಲಿ ಅವರೆಕಾಳು ಗುಡ್ಡೆಗಳು ಹಾಜರಾಗುತ್ತವೆ. ಸೇರಿಗೆ 40 ಅಥವಾ 50 ರು. ಸೇರಿಗೆ ಅರವತ್ತೆಂದರೂ ಜನ ಮುಗಿಬಿದ್ದು ಕೊಂಡ್ಕೊಂಡು ಹೋಗ್ತಾರೆ. ಅವರೆಕಾಳು ಮಾರುವವರಿಗೂ ಭರ್ಜರಿ ವ್ಯಾಪಾರ.
ಅವರೆಕಾಳಿನಿಂದ ತಯಾರಿಸುವ ನಾನಾಬಗೆಯ ತಿಂಡಿತಿನಿಸುಗಳನ್ನು ನೆನೆದರಂತೂ ಕುಂತಲ್ಲಿಯೇ ಬಾಯಲ್ಲಿ ನೀರೂರಲು ಪ್ರಾರಂಭಿಸುತ್ತದೆ. ಅವರೆಕಾಳು ನಿಪ್ಪಟ್ಟು, ಕೋಡುಬಳೆ, ಉಸಳಿ, ಹುಳಿ, ಬಸ್ಸಾರು, ಮಸಾಲೆವಡೆ... ಒಂದೆ ಎರಡೆ... ಇನ್ನೂ ಎಷ್ಟೆಷ್ಟಿವೆಯೋ ಆ ಭಗವಂತನೇ ಬಲ್ಲ.
ಮಾಗಿಯ ಚಳಿಗೆ ಸೊಗಡಾಗಿ ಸಿಗುವ ಅವರೆ ಕಾಳು ರುಚಿಕರವಷ್ಟೇ ಅಲ್ಲ. ಪೌಷ್ಟಿಕ ಕೂಡ. ಅವರೆ ಚಳಿಯನ್ನು ತಡೆಯುವ ಶಕ್ತಿಯನ್ನೂ ವೃದ್ಧಿಸುತ್ತದಂತೆ. ಡಿಸೆಂಬರ್ ಕೊನೆಯ ವಾರ ಮತ್ತು ಮುಂದಿನ ವರ್ಷದ ಮೊದಲ ವಾರ ರಾಜ್ಯದಲ್ಲಿ ಭಯಂಕರ ಚಳಿ ಇರುತ್ತದೆಂದು ಹವಾಮಾನ ಇಲಾಖೆ ಬೇರೆ ಮುನ್ನೆಚ್ಚರಿಕೆ ನೀಡಿದೆ. ಚಳಿಯನ್ನು ಒದ್ದೋಡಿಸಲು ಅವರೆಕಾಳು ಹುಳಿ ಅಥವಾ ಸಾಂಬಾರನ್ನೇ ಮಾಡಿದರೆ ಹೇಗೆ?
ಬೇಕಾಗುವ ಪದಾರ್ಥ : ಬಲಿತ ಅವರೆಕಾಯಿ, ಒಂದು ಚಮಚ ತುಪ್ಪ, 1 ಚಮಚ ಮೆಂತ್ಯ, ಅರ್ಧ ಗಿಟಕು ಒಣಕೊಬ್ಬರಿ, ಒಂದು ಚಮಚ ಹುರಿಗಡಲೆ, ಒಂದೊಂದು ಚಮಚದಷ್ಟು ಅರಿಶಿನ, ಜೀರಿಗೆ, ಕೊತ್ತಂಬರಿ ಬೀಜ, ಗಸಗಸೆ, ನಾಲ್ಕು ಈರುಳ್ಳಿ, 10-15 ಕೆಂಪು ಮೆಣಸಿನಕಾಯಿ ಮತ್ತು ಪಾಲಾಕ್ ಸೊಪ್ಪು, ಸ್ವಲ್ಪ ಎಣ್ಣೆ.
ಮಾಡುವ ವಿಧಾನ : ಮೊದಲು ಬಲಿತ ಅವರೆಕಾಯನ್ನು ಸುಲಿದು ಕಾಳನ್ನು ಆರಿಸಿ ಸಾರು ಮಾಡುವ ಹಿಂದಿನ ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಚೆನ್ನಾಗಿ ನೆಂದ ಕಾಳಿನ ಮೇಲ್ಭಾಗದ ಸಿಪ್ಪೆ ತೆಗೆದು ಇದುಕಿ ಬೇಳೆ ಮಾಡಿಕೊಳ್ಳಿ. ದಪ್ಪ ತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ ಕಾಳುಗಳನ್ನು ಬಿಳಿಹೊಗೆ ಬರುವವರೆಗೆ ಹುರಿಯಿರಿ.
2 ಪಾವಿನಷ್ಟು ಕಾಳಿಗೆ 3 ಪಾವು ನೀರು ಹಾಕಿ ಕುಕ್ಕರಿನಲ್ಲಿ ಬೇಯಿಸಿಕೊಳ್ಳಿ. ಮಸಾಲೆಗೆ 1 ಚಮಚ ಮೆಂತ್ಯ, ತುರಿದ ಕೊಬ್ಬರಿ, ಹುರಿಗಡಲೆ, ಅರಿಶಿನ, ಜೀರಿಗೆ, ಕೊತ್ತಂಬರಿಬೀಜ, ಗಸಗಸೆ, ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿಯನ್ನು ಎಣ್ಣೆಯ ಬಾಣಲೆಯಲ್ಲಿ ಕೆಂಪಾಗಿ ಹುರಿಯಿರಿ. ನಂತರ ಉಳಿದ ಸಾಮಾನುಗಳನ್ನು ಹಾಕಿ ನುಣ್ಣಗೆ ರುಬ್ಬಿ.
ಬೆಂದ ಕಾಳಿಗೆ ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ಕಲಕಿ, ಅದಕ್ಕೆ ಸಣ್ಣಗೆ ಹೆಚ್ಚಿದ ಪಾಲಾಕ್ ಸೊಪ್ಪನ್ನು ಎಣ್ಣೆಯಲ್ಲಿ ಸ್ಪಲ್ಪ ತಾಳಿಸಿ ಮಾಡಿ ಹಾಕಿ. ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಒಲೆಯ ಮೇಲಿಡಿ. ಚೆನ್ನಾಗಿ ಕುದ್ದನಂತರ ಕೆಳಗಿಳಿಸಿದರೆ ಸೊಗಸಾದ ... ಆಹಾ... ಘಮ..ಘಮ.
ತುಪ್ಪ ಬಡಿಸಿದ ಅನ್ನ, ಚಪಾತಿ, ರೊಟ್ಟಿ, ಬಿಸಿಬಿಸಿ ರಾಗಿ ಮುದ್ದೆ, ಮಸಾಲೆ ದೋಸೆ ಯಾವುದೇ ತಿನಿಸಿನ ಜೊತೆ ಬೆರೆಯಲು ಅವರೆಕಾಳು ಹುಳಿ ಹಿಂಜರಿಯುವುದಿಲ್ಲ. ಸರಿ ಇನ್ನೇಕೆ ತಡ, ಜಮಾಯಿಸಿ. ಆದರೆ, ಮಿತಿಯಿರಲಿ!



Click it and Unblock the Notifications