Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಚಳಿಗಾಲದಲ್ಲಿ ತಯಾರಿಸಿ ಅವರೆಕಾಳಿನ ಹುಳಿ

* ಭೀಮಸೇನ್ ರಾವ್
ಹೇಮಂತಋತು ಕಾಲಿಡುತ್ತಿದ್ದಂತೆ ಬೆಂಗಳೂರಿನ ಬೀದಿಬೀದಿಗಳಲ್ಲಿ ಅವರೆಕಾಳು ಗುಡ್ಡೆಗಳು ಹಾಜರಾಗುತ್ತವೆ. ಸೇರಿಗೆ 40 ಅಥವಾ 50 ರು. ಸೇರಿಗೆ ಅರವತ್ತೆಂದರೂ ಜನ ಮುಗಿಬಿದ್ದು ಕೊಂಡ್ಕೊಂಡು ಹೋಗ್ತಾರೆ. ಅವರೆಕಾಳು ಮಾರುವವರಿಗೂ ಭರ್ಜರಿ ವ್ಯಾಪಾರ.
ಅವರೆಕಾಳಿನಿಂದ ತಯಾರಿಸುವ ನಾನಾಬಗೆಯ ತಿಂಡಿತಿನಿಸುಗಳನ್ನು ನೆನೆದರಂತೂ ಕುಂತಲ್ಲಿಯೇ ಬಾಯಲ್ಲಿ ನೀರೂರಲು ಪ್ರಾರಂಭಿಸುತ್ತದೆ. ಅವರೆಕಾಳು ನಿಪ್ಪಟ್ಟು, ಕೋಡುಬಳೆ, ಉಸಳಿ, ಹುಳಿ, ಬಸ್ಸಾರು, ಮಸಾಲೆವಡೆ... ಒಂದೆ ಎರಡೆ... ಇನ್ನೂ ಎಷ್ಟೆಷ್ಟಿವೆಯೋ ಆ ಭಗವಂತನೇ ಬಲ್ಲ.
ಮಾಗಿಯ ಚಳಿಗೆ ಸೊಗಡಾಗಿ ಸಿಗುವ ಅವರೆ ಕಾಳು ರುಚಿಕರವಷ್ಟೇ ಅಲ್ಲ. ಪೌಷ್ಟಿಕ ಕೂಡ. ಅವರೆ ಚಳಿಯನ್ನು ತಡೆಯುವ ಶಕ್ತಿಯನ್ನೂ ವೃದ್ಧಿಸುತ್ತದಂತೆ. ಡಿಸೆಂಬರ್ ಕೊನೆಯ ವಾರ ಮತ್ತು ಮುಂದಿನ ವರ್ಷದ ಮೊದಲ ವಾರ ರಾಜ್ಯದಲ್ಲಿ ಭಯಂಕರ ಚಳಿ ಇರುತ್ತದೆಂದು ಹವಾಮಾನ ಇಲಾಖೆ ಬೇರೆ ಮುನ್ನೆಚ್ಚರಿಕೆ ನೀಡಿದೆ. ಚಳಿಯನ್ನು ಒದ್ದೋಡಿಸಲು ಅವರೆಕಾಳು ಹುಳಿ ಅಥವಾ ಸಾಂಬಾರನ್ನೇ ಮಾಡಿದರೆ ಹೇಗೆ?
ಬೇಕಾಗುವ ಪದಾರ್ಥ : ಬಲಿತ ಅವರೆಕಾಯಿ, ಒಂದು ಚಮಚ ತುಪ್ಪ, 1 ಚಮಚ ಮೆಂತ್ಯ, ಅರ್ಧ ಗಿಟಕು ಒಣಕೊಬ್ಬರಿ, ಒಂದು ಚಮಚ ಹುರಿಗಡಲೆ, ಒಂದೊಂದು ಚಮಚದಷ್ಟು ಅರಿಶಿನ, ಜೀರಿಗೆ, ಕೊತ್ತಂಬರಿ ಬೀಜ, ಗಸಗಸೆ, ನಾಲ್ಕು ಈರುಳ್ಳಿ, 10-15 ಕೆಂಪು ಮೆಣಸಿನಕಾಯಿ ಮತ್ತು ಪಾಲಾಕ್ ಸೊಪ್ಪು, ಸ್ವಲ್ಪ ಎಣ್ಣೆ.
ಮಾಡುವ ವಿಧಾನ : ಮೊದಲು ಬಲಿತ ಅವರೆಕಾಯನ್ನು ಸುಲಿದು ಕಾಳನ್ನು ಆರಿಸಿ ಸಾರು ಮಾಡುವ ಹಿಂದಿನ ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಚೆನ್ನಾಗಿ ನೆಂದ ಕಾಳಿನ ಮೇಲ್ಭಾಗದ ಸಿಪ್ಪೆ ತೆಗೆದು ಇದುಕಿ ಬೇಳೆ ಮಾಡಿಕೊಳ್ಳಿ. ದಪ್ಪ ತಳದ ಪಾತ್ರೆಗೆ ಒಂದು ಚಮಚ ತುಪ್ಪ ಹಾಕಿ ಕಾಳುಗಳನ್ನು ಬಿಳಿಹೊಗೆ ಬರುವವರೆಗೆ ಹುರಿಯಿರಿ.
2 ಪಾವಿನಷ್ಟು ಕಾಳಿಗೆ 3 ಪಾವು ನೀರು ಹಾಕಿ ಕುಕ್ಕರಿನಲ್ಲಿ ಬೇಯಿಸಿಕೊಳ್ಳಿ. ಮಸಾಲೆಗೆ 1 ಚಮಚ ಮೆಂತ್ಯ, ತುರಿದ ಕೊಬ್ಬರಿ, ಹುರಿಗಡಲೆ, ಅರಿಶಿನ, ಜೀರಿಗೆ, ಕೊತ್ತಂಬರಿಬೀಜ, ಗಸಗಸೆ, ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿಯನ್ನು ಎಣ್ಣೆಯ ಬಾಣಲೆಯಲ್ಲಿ ಕೆಂಪಾಗಿ ಹುರಿಯಿರಿ. ನಂತರ ಉಳಿದ ಸಾಮಾನುಗಳನ್ನು ಹಾಕಿ ನುಣ್ಣಗೆ ರುಬ್ಬಿ.
ಬೆಂದ ಕಾಳಿಗೆ ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ಕಲಕಿ, ಅದಕ್ಕೆ ಸಣ್ಣಗೆ ಹೆಚ್ಚಿದ ಪಾಲಾಕ್ ಸೊಪ್ಪನ್ನು ಎಣ್ಣೆಯಲ್ಲಿ ಸ್ಪಲ್ಪ ತಾಳಿಸಿ ಮಾಡಿ ಹಾಕಿ. ನಿಮ್ಮ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಒಲೆಯ ಮೇಲಿಡಿ. ಚೆನ್ನಾಗಿ ಕುದ್ದನಂತರ ಕೆಳಗಿಳಿಸಿದರೆ ಸೊಗಸಾದ ... ಆಹಾ... ಘಮ..ಘಮ.
ತುಪ್ಪ ಬಡಿಸಿದ ಅನ್ನ, ಚಪಾತಿ, ರೊಟ್ಟಿ, ಬಿಸಿಬಿಸಿ ರಾಗಿ ಮುದ್ದೆ, ಮಸಾಲೆ ದೋಸೆ ಯಾವುದೇ ತಿನಿಸಿನ ಜೊತೆ ಬೆರೆಯಲು ಅವರೆಕಾಳು ಹುಳಿ ಹಿಂಜರಿಯುವುದಿಲ್ಲ. ಸರಿ ಇನ್ನೇಕೆ ತಡ, ಜಮಾಯಿಸಿ. ಆದರೆ, ಮಿತಿಯಿರಲಿ!



Click it and Unblock the Notifications