Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಶೀತ, ಕೆಮ್ಮು, ಕಫ ಹೋಗಲಾಡಿಸುವ ಕಷಾಯ
ಮಳೆಯ ಆರ್ಭಟ ಜಾಸ್ತಿಯಾಗಿದೆ. ವಾತಾವರಣ ತಂಪಾಗಿರುವುದರಿಂದ ಕಾಯಿಲೆ ಬೀಳುವ ಸಾಧ್ಯತೆ ಹೆಚ್ಚು. ಆದ್ದರಿಂದ ಕಾಯಿಲೆ ಬೀಳದಂತೆ ಮುನ್ನೆಚ್ಚರಿಕೆ ಪಾಲಿಸುವುದು ಒಳ್ಳೆಯದು. ಕಷಾಯ ಕಾಯಿಲೆ ಬೀಳದಂತೆ ತಡೆಯುವಲ್ಲಿ ತುಂಬಾ ಸಹಕಾರಿಯಾಗಿದೆ. ಶೀತ, ಕೆಮ್ಮು, ಜ್ವರ ಈ ರೀತಿಯ ಕಾಯಿಲೆಗಳನ್ನು ಗುಣ ಪಡಿಸುವ ಶಕ್ತಿ ಕಷಾಯಕ್ಕೆ ಇದೆ.
ಅನೇಕ ರೀತಿಯಲ್ಲಿ ಕಷಾಯ, ಮಾಡಬಹುದು. ಇಲ್ಲಿ ನಾವು ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವಂತಹ ಪದಾರ್ಥಗಳನ್ನು ಬಳಸಿ ಮಾಡುವ ಆರೋಗ್ಯಕರವಾದ ಕಷಾಯದ ರೆಸಿಪಿಯನ್ನು ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಾಗ್ರಿಗಳು
ಜೀರಿಗೆ 2 ಚಮಚ
ಅಂಗೈಯ ಅರ್ಧದಷ್ಟು ಅಗಲವಿರುವ ಹಸಿ ಶುಂಠಿ
ಕರಿ ಮೆಣಸು ಅರ್ಧ ಚಮಚ
ಚಕ್ಕೆ 2 ಪೀಸ್
ಲವಂಗ 3-4
ಪುದೀನಾ ಅರ್ಧ ಕಟ್ಟು
ತುಳಸಿ
ತಯಾರಿಸುವ ವಿಧಾನ:
ಒಂದು ಪಾತ್ರೆಗೆ ಶುಂಠಿಯನ್ನು ಜಜ್ಜಿ ಹಾಕಿ, ಕರಿ ಮೆಣಸು ಮತ್ತು ಜೀರಿಗೆಯನ್ನು ಸ್ವಲ್ಪ ಪುಡಿ ಮಾಡಿ ಹಾಕಿ, ನಂತರ ಉಳಿದ ಪದಾರ್ಥಗಳನ್ನು ಹಾಗೇ ಹಾಕಿ, ಅರ್ಧ ಚಮಚ ಉಪ್ಪು ಸೇರಿಸಿ, ಒಂದು ಲೀಟರ್ ನೀರು ಹಾಕಿ ಚೆನ್ನಾಗಿ ಕುದಿಸಿ. ಒಂದು ಲೀಟರ್ ನೀರು ಅರ್ಧ ಲೀಟರ್ ಆಗುವಷ್ಟು ಹೊತ್ತು ಕುದಿಸಿ, ನಂತರ ಉರಿಯಿಂದ ಇಳಿಸಿ, ಬಿಸಿ-ಬಿಸಿಯಾದ ಕಷಾಯವನ್ನು ಸ್ವಲ್ಪ ತಣ್ಣಗೆ ಮಾಡಿ ಒಂದು ಗ್ಲಾಸ್ ಕುಡಿಯಿರಿ .
ಸಲಹೆ:
* ಕಷಾಯವನ್ನು ತುಂಬಾ ತಣ್ಣಗೆ ಮಾಡಬೇಡಿ ಕಾಫಿ ರೀತಿಯಲ್ಲಿ ಬಿಸಿ- ಬಿಸಿಯಾಗಿದ್ದರೆ ಮಾತ್ರ ಕಷಾಯ ಕುಡಿಯಲು ಇಷ್ಟವಾಗುವುದು. ತುಂಬಾ ತಣ್ಣಗಾದರೆ ಕಷಾಯವನ್ನು ಕುಡಿಯಲು ಸಾಧ್ಯವಿಲ್ಲ.
* ಉಳಿದ ಕಷಾಯವನ್ನು ಮತ್ತೊಮ್ಮೆ ಬಿಸಿ ಮಾಡಿ ಕುಡಿಯಬಹುದು. ಈ ರೀತಿ 2-3 ಬಾರಿ ಕುಡಿದರೆ ಸಾಕು ನಿಮ್ಮ ಗಂಟಲಿನ ಕೆರತ, ಶೀತ ಇವುಗಳಿಂದ ಗುಣಮುಕ್ತರಾಗಬಹುದು.
* ಒಂದು ತುಂಡು ಬೆಲ್ಲವನ್ನು ಕೈಯಲ್ಲಿ ಹಿಡಿದು ತಿನ್ನುತ್ತಾ ಈ ಕಷಾಯ ಕುಡಿದರೆ ಕಷಾಯವನ್ನು ಕುಡಿಯಲು ಕಷ್ಟವೆನಿಸುವುದಿಲ್ಲ.



Click it and Unblock the Notifications