Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಶೀತ, ಕೆಮ್ಮು, ಕಫ ಹೋಗಲಾಡಿಸುವ ಕಷಾಯ
ಮಳೆಯ ಆರ್ಭಟ ಜಾಸ್ತಿಯಾಗಿದೆ. ವಾತಾವರಣ ತಂಪಾಗಿರುವುದರಿಂದ ಕಾಯಿಲೆ ಬೀಳುವ ಸಾಧ್ಯತೆ ಹೆಚ್ಚು. ಆದ್ದರಿಂದ ಕಾಯಿಲೆ ಬೀಳದಂತೆ ಮುನ್ನೆಚ್ಚರಿಕೆ ಪಾಲಿಸುವುದು ಒಳ್ಳೆಯದು. ಕಷಾಯ ಕಾಯಿಲೆ ಬೀಳದಂತೆ ತಡೆಯುವಲ್ಲಿ ತುಂಬಾ ಸಹಕಾರಿಯಾಗಿದೆ. ಶೀತ, ಕೆಮ್ಮು, ಜ್ವರ ಈ ರೀತಿಯ ಕಾಯಿಲೆಗಳನ್ನು ಗುಣ ಪಡಿಸುವ ಶಕ್ತಿ ಕಷಾಯಕ್ಕೆ ಇದೆ.
ಅನೇಕ ರೀತಿಯಲ್ಲಿ ಕಷಾಯ, ಮಾಡಬಹುದು. ಇಲ್ಲಿ ನಾವು ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವಂತಹ ಪದಾರ್ಥಗಳನ್ನು ಬಳಸಿ ಮಾಡುವ ಆರೋಗ್ಯಕರವಾದ ಕಷಾಯದ ರೆಸಿಪಿಯನ್ನು ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಾಗ್ರಿಗಳು
ಜೀರಿಗೆ 2 ಚಮಚ
ಅಂಗೈಯ ಅರ್ಧದಷ್ಟು ಅಗಲವಿರುವ ಹಸಿ ಶುಂಠಿ
ಕರಿ ಮೆಣಸು ಅರ್ಧ ಚಮಚ
ಚಕ್ಕೆ 2 ಪೀಸ್
ಲವಂಗ 3-4
ಪುದೀನಾ ಅರ್ಧ ಕಟ್ಟು
ತುಳಸಿ
ತಯಾರಿಸುವ ವಿಧಾನ:
ಒಂದು ಪಾತ್ರೆಗೆ ಶುಂಠಿಯನ್ನು ಜಜ್ಜಿ ಹಾಕಿ, ಕರಿ ಮೆಣಸು ಮತ್ತು ಜೀರಿಗೆಯನ್ನು ಸ್ವಲ್ಪ ಪುಡಿ ಮಾಡಿ ಹಾಕಿ, ನಂತರ ಉಳಿದ ಪದಾರ್ಥಗಳನ್ನು ಹಾಗೇ ಹಾಕಿ, ಅರ್ಧ ಚಮಚ ಉಪ್ಪು ಸೇರಿಸಿ, ಒಂದು ಲೀಟರ್ ನೀರು ಹಾಕಿ ಚೆನ್ನಾಗಿ ಕುದಿಸಿ. ಒಂದು ಲೀಟರ್ ನೀರು ಅರ್ಧ ಲೀಟರ್ ಆಗುವಷ್ಟು ಹೊತ್ತು ಕುದಿಸಿ, ನಂತರ ಉರಿಯಿಂದ ಇಳಿಸಿ, ಬಿಸಿ-ಬಿಸಿಯಾದ ಕಷಾಯವನ್ನು ಸ್ವಲ್ಪ ತಣ್ಣಗೆ ಮಾಡಿ ಒಂದು ಗ್ಲಾಸ್ ಕುಡಿಯಿರಿ .
ಸಲಹೆ:
* ಕಷಾಯವನ್ನು ತುಂಬಾ ತಣ್ಣಗೆ ಮಾಡಬೇಡಿ ಕಾಫಿ ರೀತಿಯಲ್ಲಿ ಬಿಸಿ- ಬಿಸಿಯಾಗಿದ್ದರೆ ಮಾತ್ರ ಕಷಾಯ ಕುಡಿಯಲು ಇಷ್ಟವಾಗುವುದು. ತುಂಬಾ ತಣ್ಣಗಾದರೆ ಕಷಾಯವನ್ನು ಕುಡಿಯಲು ಸಾಧ್ಯವಿಲ್ಲ.
* ಉಳಿದ ಕಷಾಯವನ್ನು ಮತ್ತೊಮ್ಮೆ ಬಿಸಿ ಮಾಡಿ ಕುಡಿಯಬಹುದು. ಈ ರೀತಿ 2-3 ಬಾರಿ ಕುಡಿದರೆ ಸಾಕು ನಿಮ್ಮ ಗಂಟಲಿನ ಕೆರತ, ಶೀತ ಇವುಗಳಿಂದ ಗುಣಮುಕ್ತರಾಗಬಹುದು.
* ಒಂದು ತುಂಡು ಬೆಲ್ಲವನ್ನು ಕೈಯಲ್ಲಿ ಹಿಡಿದು ತಿನ್ನುತ್ತಾ ಈ ಕಷಾಯ ಕುಡಿದರೆ ಕಷಾಯವನ್ನು ಕುಡಿಯಲು ಕಷ್ಟವೆನಿಸುವುದಿಲ್ಲ.



Click it and Unblock the Notifications