Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಈ ರೀತಿ ಎಗ್ ಮಸಾಲ ಟ್ರೈ ಮಾಡಿದ್ದೀರಾ?

ಬೇಕಾಗುವ ಸಾಮಾಗ್ರಿಗಳು:
* ಬೇಯಿಸಿದ ಮೊಟ್ಟೆ 5
* ಈರುಳ್ಳಿ 2 (ಕತ್ತರಿಸಿದ್ದು)
* ಪುಡಿ ಮಾಡಿದ ಕಾಳು ಮೆಣಸಿನ ಪುಡಿ 1/4 ಚಮಚ
* ಕೊತ್ತಂಬರಿ ಪುಡಿ 1 ಚಮಚ
* ಗರಂ ಮಸಾಲ ಅರ್ಧಚಮಚ
* ಕೆಂಪು ಮೆಣಸಿನ ಪುಡಿ ಅರ್ಧ ಚಮಚ
* ಕತ್ತರಿಸಿದ ಟೊಮೆಟೊ 3
* ಬೆಳ್ಳುಳ್ಳಿ 2 ಎಸಳು
* ಚಕ್ಕೆ 1 ತುಂಡು
* ಪಲಾವ್ ಎಲೆ 1
* ಗೋಡಂಬಿ 3-4
* ರುಚಿಗೆ ತಕ್ಕ ಉಪ್ಪು
* ನಿಂಬೆ ರಸ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಚಕ್ಕೆ, ಪಲಾವ್ ಎಲೆ , ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ನಂತರ ಟೊಮೆಟೊ , ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಗೋಡಂಬಿ ಹಾಕಿ 5 ನಿಮಿಷ ಹುರಿಯಬೇಕು. ನಂತರ ಸ್ವಲ್ಪ ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಕುದಿಸಬೇಕು.
3. ನಂತರ ಮೊಟ್ಟೆಯನ್ನು 2 ಭಾಗ ಮಾಡಿ ಕತ್ತರಿಸಿ ಹಾಕಬೇಕು. ನಂತರ ಗರಂ ಮಸಾಲ ಮತ್ತು ನಿಂಬೆ ರಸ ಹಕಿ ಮಿಶ್ರ ಮಾಡಿ 2 ನಿಮಿಷ ಬಿಸಿ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಎಗ್ ಮಸಾಲ ಫ್ರೈ ರೆಡಿ.



Click it and Unblock the Notifications