Latest Updates
-
ಬಿಸಿಗಾಳಿಯ ಆರ್ಭಟ: ನಿಮ್ಮ ಮನೆಯನ್ನು ಫ್ರಿಡ್ಜ್ನಂತೆ ತಂಪಾಗಿಡಲು ಇಲ್ಲಿವೆ ಅದ್ಭುತ ದೇಸಿ ಟಿಪ್ಸ್! -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ಹೊಡೆತದಿಂದ ಪಾರಾಗಲು ಮನೆಯಲ್ಲೇ ತಯಾರಿಸಿ ಈ ಜೀವ ರಕ್ಷಕ ಪಾನೀಯ! -
ಬಿಸಿಗಾಳಿಯ ಆರ್ಭಟ: ಸುಡುವ ಬಿಸಿಲಿನಿಂದ ಪಾರಾಗಲು ನೀವು ಮಾಡಲೇಬೇಕಾದ ಬದಲಾವಣೆಗಳೇನು? -
ಬಿಸಿಗಾಳಿಯ ಆರ್ಭಟ: ನಿಮ್ಮ ಬೆಳಗಿನ ವ್ಯಾಯಾಮದ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ?
ಶೀತ, ಕೆಮ್ಮು ದೂರವಿಡುವ ಬೆಳ್ಳುಳ್ಳಿ ರಸಂ

ಬೇಕಾಗುವ ಸಾಮಾಗ್ರಿಗಳು:
*10-15 ಬೆಳ್ಳುಳ್ಳಿ ಎಸಳು
* 2 ಚಮಚ ತೊಗರಿ ಬೇಳೆ
* 2 ಚಮಚ ಕೊತ್ತಂಬರಿ ಬೀಜ
* ಅರ್ಧ ಚಮಚ ಜೀರಿಗೆ
* ಅರ್ಧ ಚಮಚ ಕರಿಮೆಣಸಿನ ಪುಡಿ
* 2 ಒಣ ಕೆಂಪು ಮೆಣಸು
* 1/4 ಚಮಚ ಮೆಂತೆ
* 1/4 ಚಮಚ ಸಾಸಿವೆ
* ಒಂದು ಚಿಕ್ಕ ತುಂಡು ಶುಂಠಿ
* 1/4 ಚಮಚ ಅರಿಶಿಣ
* ಸ್ವಲ್ಪ ಕರಿಬೇವಿನ ಎಲೆ
* 2 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
* 1 ಚಮಚ ಹುಣಸೆ ರಸ
ತಯಾರಿಸುವ ವಿಧಾನ:
1. ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ, ಒಣ ಕೆಂಪು ಮೆಣಸು, ಮಂತೆ, ಕರಿಬೇವಿನ ಎಲೆ, ಅರಿಶಿಣ, ಜೀರಿಗೆ ಇವುಗಳನ್ನು ಹಾಕಿ ಹುರಿಯಬೇಕು. ನಂತರ ಈ ಹುರಿದ ಮಿಶ್ರಣಕ್ಕೆ ಶುಂಠಿ, ಕಾಳು ಮೆಣಸಿನ ಪುಡಿ ಹಾಕಿ ಈ ಮಿಶ್ರಣವನ್ನು ನುಣ್ಣಗೆ ಅರಿಯಬೇಕು.
2. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ ಹಾಕಬೇಕು. ಸಾಸಿವೆ ಚಟಾಪಟ ಶಬ್ದ ಬರುವಾಗ ಕರಿಬೇವಿನ ಎಲೆ ಮತ್ತು ಬೆಳ್ಳುಳ್ಳಿ ಹಾಕಿ ಬೆಳ್ಳುಳ್ಳಿ ಸ್ವಲ್ಪ ಕಂದು ಬಣ್ಣಕ್ಕೆ ಬರುವಾಗ ಅರೆದ ಮಿಶ್ರಣವನ್ನು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಿ ನಂತರ ರುಚಿಗೆ ತಕ್ಕ ಉಪ್ಪು ಹಾಕಿ 3 ಕಪ್ ನೀರು ಹಾಕಿ ಚೆನ್ನಾಗಿ ಕುದಿಸಬೇಕು.
3. ಸಾರು ಚೆನ್ನಾಗಿ ಕುದಿಯುತ್ತಿರುವಾಗ ಸ್ವಲ್ಪ ಹುಣಸೆ ರಸ ಹಾಕಿ 5 ನಿಮಿಷ ಕುದಿಸಿದರೆ ರುಚಿಯಾದ ಬೆಳ್ಳುಳ್ಳಿ ಸಾರು ರೆಡಿ.



Click it and Unblock the Notifications