Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶೀತ, ಕೆಮ್ಮು ದೂರವಿಡುವ ಬೆಳ್ಳುಳ್ಳಿ ರಸಂ

ಬೇಕಾಗುವ ಸಾಮಾಗ್ರಿಗಳು:
*10-15 ಬೆಳ್ಳುಳ್ಳಿ ಎಸಳು
* 2 ಚಮಚ ತೊಗರಿ ಬೇಳೆ
* 2 ಚಮಚ ಕೊತ್ತಂಬರಿ ಬೀಜ
* ಅರ್ಧ ಚಮಚ ಜೀರಿಗೆ
* ಅರ್ಧ ಚಮಚ ಕರಿಮೆಣಸಿನ ಪುಡಿ
* 2 ಒಣ ಕೆಂಪು ಮೆಣಸು
* 1/4 ಚಮಚ ಮೆಂತೆ
* 1/4 ಚಮಚ ಸಾಸಿವೆ
* ಒಂದು ಚಿಕ್ಕ ತುಂಡು ಶುಂಠಿ
* 1/4 ಚಮಚ ಅರಿಶಿಣ
* ಸ್ವಲ್ಪ ಕರಿಬೇವಿನ ಎಲೆ
* 2 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
* 1 ಚಮಚ ಹುಣಸೆ ರಸ
ತಯಾರಿಸುವ ವಿಧಾನ:
1. ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ, ಒಣ ಕೆಂಪು ಮೆಣಸು, ಮಂತೆ, ಕರಿಬೇವಿನ ಎಲೆ, ಅರಿಶಿಣ, ಜೀರಿಗೆ ಇವುಗಳನ್ನು ಹಾಕಿ ಹುರಿಯಬೇಕು. ನಂತರ ಈ ಹುರಿದ ಮಿಶ್ರಣಕ್ಕೆ ಶುಂಠಿ, ಕಾಳು ಮೆಣಸಿನ ಪುಡಿ ಹಾಕಿ ಈ ಮಿಶ್ರಣವನ್ನು ನುಣ್ಣಗೆ ಅರಿಯಬೇಕು.
2. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ ಹಾಕಬೇಕು. ಸಾಸಿವೆ ಚಟಾಪಟ ಶಬ್ದ ಬರುವಾಗ ಕರಿಬೇವಿನ ಎಲೆ ಮತ್ತು ಬೆಳ್ಳುಳ್ಳಿ ಹಾಕಿ ಬೆಳ್ಳುಳ್ಳಿ ಸ್ವಲ್ಪ ಕಂದು ಬಣ್ಣಕ್ಕೆ ಬರುವಾಗ ಅರೆದ ಮಿಶ್ರಣವನ್ನು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಿ ನಂತರ ರುಚಿಗೆ ತಕ್ಕ ಉಪ್ಪು ಹಾಕಿ 3 ಕಪ್ ನೀರು ಹಾಕಿ ಚೆನ್ನಾಗಿ ಕುದಿಸಬೇಕು.
3. ಸಾರು ಚೆನ್ನಾಗಿ ಕುದಿಯುತ್ತಿರುವಾಗ ಸ್ವಲ್ಪ ಹುಣಸೆ ರಸ ಹಾಕಿ 5 ನಿಮಿಷ ಕುದಿಸಿದರೆ ರುಚಿಯಾದ ಬೆಳ್ಳುಳ್ಳಿ ಸಾರು ರೆಡಿ.



Click it and Unblock the Notifications
