Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಶೀತ, ಕೆಮ್ಮು ದೂರವಿಡುವ ಬೆಳ್ಳುಳ್ಳಿ ರಸಂ

ಬೇಕಾಗುವ ಸಾಮಾಗ್ರಿಗಳು:
*10-15 ಬೆಳ್ಳುಳ್ಳಿ ಎಸಳು
* 2 ಚಮಚ ತೊಗರಿ ಬೇಳೆ
* 2 ಚಮಚ ಕೊತ್ತಂಬರಿ ಬೀಜ
* ಅರ್ಧ ಚಮಚ ಜೀರಿಗೆ
* ಅರ್ಧ ಚಮಚ ಕರಿಮೆಣಸಿನ ಪುಡಿ
* 2 ಒಣ ಕೆಂಪು ಮೆಣಸು
* 1/4 ಚಮಚ ಮೆಂತೆ
* 1/4 ಚಮಚ ಸಾಸಿವೆ
* ಒಂದು ಚಿಕ್ಕ ತುಂಡು ಶುಂಠಿ
* 1/4 ಚಮಚ ಅರಿಶಿಣ
* ಸ್ವಲ್ಪ ಕರಿಬೇವಿನ ಎಲೆ
* 2 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
* 1 ಚಮಚ ಹುಣಸೆ ರಸ
ತಯಾರಿಸುವ ವಿಧಾನ:
1. ಬಾಣಲೆಯನ್ನು ಬಿಸಿ ಮಾಡಿ ಅದರಲ್ಲಿ ತೊಗರಿಬೇಳೆ, ಕೊತ್ತಂಬರಿ ಬೀಜ, ಒಣ ಕೆಂಪು ಮೆಣಸು, ಮಂತೆ, ಕರಿಬೇವಿನ ಎಲೆ, ಅರಿಶಿಣ, ಜೀರಿಗೆ ಇವುಗಳನ್ನು ಹಾಕಿ ಹುರಿಯಬೇಕು. ನಂತರ ಈ ಹುರಿದ ಮಿಶ್ರಣಕ್ಕೆ ಶುಂಠಿ, ಕಾಳು ಮೆಣಸಿನ ಪುಡಿ ಹಾಕಿ ಈ ಮಿಶ್ರಣವನ್ನು ನುಣ್ಣಗೆ ಅರಿಯಬೇಕು.
2. ನಂತರ ಒಂದು ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ ಹಾಕಬೇಕು. ಸಾಸಿವೆ ಚಟಾಪಟ ಶಬ್ದ ಬರುವಾಗ ಕರಿಬೇವಿನ ಎಲೆ ಮತ್ತು ಬೆಳ್ಳುಳ್ಳಿ ಹಾಕಿ ಬೆಳ್ಳುಳ್ಳಿ ಸ್ವಲ್ಪ ಕಂದು ಬಣ್ಣಕ್ಕೆ ಬರುವಾಗ ಅರೆದ ಮಿಶ್ರಣವನ್ನು ಹಾಕಿ 2 ನಿಮಿಷ ಸೌಟ್ ನಿಂದ ಆಡಿಸಿ ನಂತರ ರುಚಿಗೆ ತಕ್ಕ ಉಪ್ಪು ಹಾಕಿ 3 ಕಪ್ ನೀರು ಹಾಕಿ ಚೆನ್ನಾಗಿ ಕುದಿಸಬೇಕು.
3. ಸಾರು ಚೆನ್ನಾಗಿ ಕುದಿಯುತ್ತಿರುವಾಗ ಸ್ವಲ್ಪ ಹುಣಸೆ ರಸ ಹಾಕಿ 5 ನಿಮಿಷ ಕುದಿಸಿದರೆ ರುಚಿಯಾದ ಬೆಳ್ಳುಳ್ಳಿ ಸಾರು ರೆಡಿ.



Click it and Unblock the Notifications











