Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಶೀತ, ಗಂಟಲು ಕೆರತ ಕಡಿಮೆ ಮಾಡುವ ರಸಂ
ಹುರುಳಿಕಾಳಿನಲ್ಲಿ ಪ್ರೊಟೀನ್ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಳೆ ಮತ್ತು ಚಳಿಗಾಲದಲ್ಲಿ ಇದರಿಂದ ರಸಂ ತಯಾರಿಸಿ ಕುಡಿದರೆ ಹಿಡಿದಿರುವ ಶೀತ, ಗಂಟಲು ಕೆರೆತ ಕಡಿಮೆಯಾಗುವುದು.
ಬನ್ನಿ ಹುರುಳಿಕಾಳಿನ ರಸಂ ಮಾಡುವುದು ಹೇಗೆ ಎಂದು ನೋಡೋಣ:
ಬೇಕಾಗುವ ಸಾಮಾಗ್ರಿಗಳು
ಹುರುಳಿಕಾಳು ಅರ್ಧ ಕಪ್
ಟೊಮೆಟೊ 2 (ಮ್ಯಾಶ್ ಮಾಡಿದ್ದು)
ಬೆಳ್ಳುಳ್ಳಿ 3-4 ಎಸಳು
ಹುಣಸೆ ಹಣ್ಣಿನ ರಸ 2 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಚಿಟಿಕೆಯಷ್ಟು ಇಂಗು
ಕರಿ ಮೆಣಸಿನ ಪುಡಿ ಒಂದು ಚಮಚ
ಸಾಸಿವೆ ಅರ್ಧ ಚಮಚ
ಒಣ ಮೆಣಸು 2
ಸ್ವಲ್ಪ ಕರಿ ಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
* ಹುರುಳಿಕಾಳನ್ನು ಬಾಣಲೆಗೆ ಹಾಕಿ ಅದರ ಬಣ್ಣ ಸ್ವಲ್ಪ ಬದಲಾಗುವವರೆಗೆ ಹುರಿಯಿರಿ. ನಂತರ ತಣ್ಣಗಾದ ಮೇಲೆ ತೊಳೆದು ಪ್ರೆಶರ್ ಕುಕ್ಕರ್ ನಲ್ಲಿ ಹಾಕಿ ಬೇಯಿಸಲು ತಕ್ಕ ನೀರು ಮತ್ತು ಸ್ವಲ್ಪ ಉಪ್ಪು ಹಾಕಿ 2-3 ವಿಶಲ್ ಬರುವವರೆಗೆ ಬೇಯಿಸಿ.
* ಪಾತ್ರೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ ಸಾಸಿವೆ ಹಾಕಿ, ಸಾಸಿವೆ ಚಟಾಪಟಾ ಶಬ್ದ ಮಾಡುವಾಗ ಜೀರಿಗೆ ಹಾಕಿ, ನಂತರ ಬೆಳ್ಳುಳ್ಳಿ ಹಾಕಿ ಅದು ಸ್ವಲ್ಪ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ. ನಂತರ ಇಂಗು ಹಾಕಿ, ಒಣ ಮೆಣಸನ್ನು ಮುರಿದು ಹಾಕಿ, ನಂತರ ಕರಿ ಬೇವಿನ ಎಲೆ, ನಂತರ ಟೊಮೆಟೊ ಹಾಕಿ ಮೆತ್ತಗಾದ ಮೇಲೆ, ಮ್ಯಾಶ್ ಮಾಡಿ.
* ನಂತರ ಕರಿ ಮೆಣಸಿನ ಪುಡಿ ಮತ್ತು ಅರಿಶಿಣ ಪುಡಿ ಹಾಕಿ, ಬೇಯಿಸಿದ ಹುರುಳಿಕಾಳು ಹಾಕಿ, ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಿ, ನಂತರ ಹುಣಸೆ ಹಣ್ಣಿನ ರಸ ಹಾಕಿ ಮತ್ತೆ 5 ನಿಮಿಷ ಕುದಿಸಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಹುರುಳಿಕಾಳಿನ ರಸಂ ರೆಡಿ.



Click it and Unblock the Notifications












