Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಈರುಳ್ಳಿ ಹಾಕದ ವೆಜಿಟೆಬಲ್ ಕರಿ
ಈರುಳ್ಳಿ ಬೆಲೆ ಹೆಚ್ಚಾದರೆ ಬಾಯಿ ರುಚಿ ಕಡಿಮೆಯಾಗುವುದು ಎಂದು ಚಿಂತೆ ಮಾಡಬೇಕಾಗಿಲ್ಲ, ಈರುಳ್ಳಿ ಹಾಕದೆ ಅನೇಕ ರುಚಿಕರವಾದ ಅಡುಗೆಗಳನ್ನು ಮಾಡಬಹುದು. ಇಲ್ಲಿ ನಾವು ಈರುಳ್ಳಿ, ಬೆಳ್ಳುಳ್ಳಿ ಹಾಕದೆ ರುಚಿಕರವಾಗಿ ಸಾರು ಮಾಡುವ ವಿಧಾನ ಹೇಳಿದ್ದೇವೆ.
ಬನ್ನಿ, ಇದನ್ನು ಮಾಡುವ ವಿಧಾನ ಹೇಗೆ ಎಂದು ತಿಳಿಯೋಣ:

ಬೇಕಾಗುವ ಸಾಮಾಗ್ರಿಗಳು
ಆಲೂಗಡ್ಡೆ 2( ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಹಾಕಿಡಿ)
* ಕ್ಯಾರೆಟ್(ಕತ್ತರಿಸಿದ್ದು)
* ಸಿಪ್ಪೆ ಸುಲಿದ ಬಟಾಣಿ 1/4 ಕಪ್
* ಎಣ್ಣೆ
* ಜೀರಿಗೆ 1/2 ಚಮಚ
* ರುಚಿಗೆ ತಕ್ಕ ಉಪ್ಪು
* ಅರಿಶಿಣ ಪುಡಿ 1/4 ಚಮಚ
* ಪನ್ನೀರ್ 50 ಗ್ರಾಂ
* ಬ್ರೆಡ್ 3
* ಕೊತ್ತಂಬರಿ ಪುಡಿ 1 ಚಮಚ
* ಖಾರದ ಪುಡಿ (ರುಚಿಗೆ ತಕ್ಕಷ್ಟು)
* ಟೊಮೆಟೊ ಪೇಸ್ಟ್ 1/4 ಕಪ್
* ಸ್ವಲ್ಪ ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ 2 ಚಮಚ ಎಣ್ಣೆ ಹಾಕಿ ಅದರಲ್ಲಿ ಪನ್ನೀರ್ ಹಾಕಿ ಫ್ರೈ ಮಾಡಿ ಒಂದು ಪಾತ್ರೆಯಲ್ಲಿ ಹಾಕಿಡಿ. ನಂತರ ಅದೇ ಎಣ್ಣೆಯಲ್ಲಿ ಬ್ರೆಡ್ ತುಂಡುಗಳನ್ನು ಹಾಕಿ ಕಂದು ಬಣ್ಣ ಬರುವವರಗೆ ಫ್ರೈ ಮಾಡಿ ಇಡಿ.
* ಈಗ ಪಾತ್ರೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಬಿಸಿ ಮಾಡಿ, ಅದಕ್ಕೆ ಜೀರಿಗೆ ಹಾಕಿ, ಜೀರಿಗೆ ಚಟಾಪಟಾ ಶಬ್ದ ಮಾಡುವಾಗ ಆಲೂಗಡ್ಡೆ ಹಾಕಿ 5 ನಿಮಿಷ ಫ್ರೈ ಮಾಡಿ, ನಂತರ ಕ್ಯಾರೆಟ್ ಹಾಕಿ, ಬಟಾಣಿ, ಅರಿಶಿಣ ಪುಡಿ ಹಾಕಿ, ರುಚಿಗೆ ತಕ್ಕ ಉಪ್ಪು ಹಾಕಿ ಬೇಯಲು ತಕ್ಕ ನೀರು ಸೇರಿಸಿ ಬೇಯಿಸಿ.
* ನಂತರ ಖಾರದ ಪುಡಿ, ಕೊತಂಬರಿ ಪುಡಿ ಹಾಕಿ, ಟೊಮೆಟೊ ಪೇಸ್ಟ್ ಹಾಕಿ, ಕುದಿಸಿ, ಮಿಶ್ರಣ ಸ್ವಲ್ಪ ಗಟ್ಟಿಯಾದಾಗ ಫ್ರೈ ಮಾಡಿಟ್ಟ ಪನ್ನೀರ್ ಮತ್ತು ಬ್ರೆಡ್ ಚೂರು ಹಾಕಿ ಮತ್ತೆ 5 ನಿಮಿಷ ಬೇಯಿಸಿದರೆ ಸಾರು ರೆಡಿ.



Click it and Unblock the Notifications











