Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಮಧುಮೇಹಿಗಳ ಬಾಯಿ ರುಚಿ ಹೆಚ್ಚಿಸುವ ಸಾರು
ಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ತಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಹಾಗಂತ ಪಥ್ಯ ಆಹಾರವನ್ನು ತಿನ್ನಬೇಕಾಗಿಲ್ಲ, ಬಾಯಿಗೆ ರುಚಿಕರವಾದ ಆಹಾರವನ್ನು ತಿನ್ನಬಹುದು. ಇಲ್ಲಿ ನಾವು ಮಧುಮೇಹಿಗಳೂ ತಿನ್ನಬಹುದಾದ ಬಟಾಣಿ-ಪನ್ನೀರ್ ಮಸಾಲದ ರೆಸಿಪಿ ನೀಡಿದ್ದೇವೆ.
ಈ ಅಡುಗೆ ಮಧುಮೇಹಿಗಳ ಬಾಯಿ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು
ಪನ್ನೀರ್ 100 ಗ್ರಾಂ
ಈರುಳ್ಳಿ2
ಬೆಳ್ಳುಳ್ಳಿ ಎಸಳು 8
ಲವಂಗ 3
ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
ಕೊತ್ತಂಬರಿ ಪುಡಿ 1 ಚಮಚ
ಹಸಿ ಮೆಣಸಿನಕಾಯಿ 1
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಗರಂ ಮಸಾಲ ಅರ್ಧ ಚಮಚ
ಟೊಮೆಟೊ 2
ಬಟಾಣಿ 1 ಕಪ್(ನೆನೆ ಹಾಕಿದ್ದು)
ಕೊತ್ತಂಬರಿ ಸೊಪ್ಪು
ಎಣ್ಣೆ 3 ಚಮಚ
1 ಕಪ್ ತೆಂಗಿನ ತುರಿ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ 1 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಪನ್ನೀರ್ ಹಾಕಿ ಫ್ರೈ ಮಾಡಿ ಒಂದು ಬದಿಯಲ್ಲಿ ಇಡಿ.
* ನಂತರ ಅದೇ ಪ್ಯಾನ್ ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ, ಸ್ವಲ್ಪ ಕರಿಬೇವಿನ ಎಲೆ ಹಾಕಿ, ಹಸಿ ಮೆಣಸಿನಕಾಯಿ, ಜಜ್ಜಿದ ಶುಂಠಿ, ಬೆಳ್ಳುಳ್ಳಿ ಮತ್ತು ಲವಂಗ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ, ನಂತರ ಬಟಾಣಿ ಹಾಕಿ 5 ನಿಮಿಷ ಫ್ರೈ ಮಾಡಿ, ಅದಕ್ಕೆ ಎಲ್ಲಾ ಮಸಾಲೆ ಸಾಮಾಗ್ರಿಗಳನ್ನು ಸೇರಿಸಿ, ರುಚಿಗೆ ತಕ್ಕ ಉಪ್ಪು ಸೇರಿಸಿ, ಮತ್ತೆ 2 ನಿಮಿಷ ಫ್ರೈ ಮಾಡಿ ಒಂದು ಕಪ್ ನೀರು ಹಾಕಿ ಬೇಯಿಸಿ.
* ತರಕಾರಿ ಬೆಂದ ನಂತರ ರುಬ್ಬಿದ ತೆಂಗಿನ ತುರಿ ಹಾಕಿ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಮತ್ತೆ 5 ನಿಮಿಷ ಬೇಯಿಸಿ ನಂತರ ಫ್ರೈ ಮಾಡಿದ ಪನ್ನೀರ್ ಹಾಕಿ, ಕೊತ್ತಂಬರಿ ಸೊಪ್ಪು ಹಾಕಿ 2 ನಿಮಿಷ ಕುದಿಸಿ, ಉರಿಯಿಂದ ಇಳಿಸಿದರೆ ಬಟಾಣಿ ಪನ್ನೀರ್ ಮಸಾಲ ರೆಡಿ.



Click it and Unblock the Notifications