Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಮಧುಮೇಹಿಗಳ ಬಾಯಿ ರುಚಿ ಹೆಚ್ಚಿಸುವ ಸಾರು
ಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ತಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಹಾಗಂತ ಪಥ್ಯ ಆಹಾರವನ್ನು ತಿನ್ನಬೇಕಾಗಿಲ್ಲ, ಬಾಯಿಗೆ ರುಚಿಕರವಾದ ಆಹಾರವನ್ನು ತಿನ್ನಬಹುದು. ಇಲ್ಲಿ ನಾವು ಮಧುಮೇಹಿಗಳೂ ತಿನ್ನಬಹುದಾದ ಬಟಾಣಿ-ಪನ್ನೀರ್ ಮಸಾಲದ ರೆಸಿಪಿ ನೀಡಿದ್ದೇವೆ.
ಈ ಅಡುಗೆ ಮಧುಮೇಹಿಗಳ ಬಾಯಿ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು
ಪನ್ನೀರ್ 100 ಗ್ರಾಂ
ಈರುಳ್ಳಿ2
ಬೆಳ್ಳುಳ್ಳಿ ಎಸಳು 8
ಲವಂಗ 3
ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
ಕೊತ್ತಂಬರಿ ಪುಡಿ 1 ಚಮಚ
ಹಸಿ ಮೆಣಸಿನಕಾಯಿ 1
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಗರಂ ಮಸಾಲ ಅರ್ಧ ಚಮಚ
ಟೊಮೆಟೊ 2
ಬಟಾಣಿ 1 ಕಪ್(ನೆನೆ ಹಾಕಿದ್ದು)
ಕೊತ್ತಂಬರಿ ಸೊಪ್ಪು
ಎಣ್ಣೆ 3 ಚಮಚ
1 ಕಪ್ ತೆಂಗಿನ ತುರಿ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ 1 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಪನ್ನೀರ್ ಹಾಕಿ ಫ್ರೈ ಮಾಡಿ ಒಂದು ಬದಿಯಲ್ಲಿ ಇಡಿ.
* ನಂತರ ಅದೇ ಪ್ಯಾನ್ ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ, ಸ್ವಲ್ಪ ಕರಿಬೇವಿನ ಎಲೆ ಹಾಕಿ, ಹಸಿ ಮೆಣಸಿನಕಾಯಿ, ಜಜ್ಜಿದ ಶುಂಠಿ, ಬೆಳ್ಳುಳ್ಳಿ ಮತ್ತು ಲವಂಗ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ, ನಂತರ ಬಟಾಣಿ ಹಾಕಿ 5 ನಿಮಿಷ ಫ್ರೈ ಮಾಡಿ, ಅದಕ್ಕೆ ಎಲ್ಲಾ ಮಸಾಲೆ ಸಾಮಾಗ್ರಿಗಳನ್ನು ಸೇರಿಸಿ, ರುಚಿಗೆ ತಕ್ಕ ಉಪ್ಪು ಸೇರಿಸಿ, ಮತ್ತೆ 2 ನಿಮಿಷ ಫ್ರೈ ಮಾಡಿ ಒಂದು ಕಪ್ ನೀರು ಹಾಕಿ ಬೇಯಿಸಿ.
* ತರಕಾರಿ ಬೆಂದ ನಂತರ ರುಬ್ಬಿದ ತೆಂಗಿನ ತುರಿ ಹಾಕಿ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಮತ್ತೆ 5 ನಿಮಿಷ ಬೇಯಿಸಿ ನಂತರ ಫ್ರೈ ಮಾಡಿದ ಪನ್ನೀರ್ ಹಾಕಿ, ಕೊತ್ತಂಬರಿ ಸೊಪ್ಪು ಹಾಕಿ 2 ನಿಮಿಷ ಕುದಿಸಿ, ಉರಿಯಿಂದ ಇಳಿಸಿದರೆ ಬಟಾಣಿ ಪನ್ನೀರ್ ಮಸಾಲ ರೆಡಿ.



Click it and Unblock the Notifications