Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಮಧುಮೇಹಿಗಳ ಬಾಯಿ ರುಚಿ ಹೆಚ್ಚಿಸುವ ಸಾರು
ಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ತಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಹಾಗಂತ ಪಥ್ಯ ಆಹಾರವನ್ನು ತಿನ್ನಬೇಕಾಗಿಲ್ಲ, ಬಾಯಿಗೆ ರುಚಿಕರವಾದ ಆಹಾರವನ್ನು ತಿನ್ನಬಹುದು. ಇಲ್ಲಿ ನಾವು ಮಧುಮೇಹಿಗಳೂ ತಿನ್ನಬಹುದಾದ ಬಟಾಣಿ-ಪನ್ನೀರ್ ಮಸಾಲದ ರೆಸಿಪಿ ನೀಡಿದ್ದೇವೆ.
ಈ ಅಡುಗೆ ಮಧುಮೇಹಿಗಳ ಬಾಯಿ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು
ಪನ್ನೀರ್ 100 ಗ್ರಾಂ
ಈರುಳ್ಳಿ2
ಬೆಳ್ಳುಳ್ಳಿ ಎಸಳು 8
ಲವಂಗ 3
ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
ಕೊತ್ತಂಬರಿ ಪುಡಿ 1 ಚಮಚ
ಹಸಿ ಮೆಣಸಿನಕಾಯಿ 1
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಗರಂ ಮಸಾಲ ಅರ್ಧ ಚಮಚ
ಟೊಮೆಟೊ 2
ಬಟಾಣಿ 1 ಕಪ್(ನೆನೆ ಹಾಕಿದ್ದು)
ಕೊತ್ತಂಬರಿ ಸೊಪ್ಪು
ಎಣ್ಣೆ 3 ಚಮಚ
1 ಕಪ್ ತೆಂಗಿನ ತುರಿ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ 1 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಪನ್ನೀರ್ ಹಾಕಿ ಫ್ರೈ ಮಾಡಿ ಒಂದು ಬದಿಯಲ್ಲಿ ಇಡಿ.
* ನಂತರ ಅದೇ ಪ್ಯಾನ್ ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ, ಸ್ವಲ್ಪ ಕರಿಬೇವಿನ ಎಲೆ ಹಾಕಿ, ಹಸಿ ಮೆಣಸಿನಕಾಯಿ, ಜಜ್ಜಿದ ಶುಂಠಿ, ಬೆಳ್ಳುಳ್ಳಿ ಮತ್ತು ಲವಂಗ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ, ನಂತರ ಬಟಾಣಿ ಹಾಕಿ 5 ನಿಮಿಷ ಫ್ರೈ ಮಾಡಿ, ಅದಕ್ಕೆ ಎಲ್ಲಾ ಮಸಾಲೆ ಸಾಮಾಗ್ರಿಗಳನ್ನು ಸೇರಿಸಿ, ರುಚಿಗೆ ತಕ್ಕ ಉಪ್ಪು ಸೇರಿಸಿ, ಮತ್ತೆ 2 ನಿಮಿಷ ಫ್ರೈ ಮಾಡಿ ಒಂದು ಕಪ್ ನೀರು ಹಾಕಿ ಬೇಯಿಸಿ.
* ತರಕಾರಿ ಬೆಂದ ನಂತರ ರುಬ್ಬಿದ ತೆಂಗಿನ ತುರಿ ಹಾಕಿ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಮತ್ತೆ 5 ನಿಮಿಷ ಬೇಯಿಸಿ ನಂತರ ಫ್ರೈ ಮಾಡಿದ ಪನ್ನೀರ್ ಹಾಕಿ, ಕೊತ್ತಂಬರಿ ಸೊಪ್ಪು ಹಾಕಿ 2 ನಿಮಿಷ ಕುದಿಸಿ, ಉರಿಯಿಂದ ಇಳಿಸಿದರೆ ಬಟಾಣಿ ಪನ್ನೀರ್ ಮಸಾಲ ರೆಡಿ.



Click it and Unblock the Notifications