Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಶೀತ, ಕೆಮ್ಮು ಹತ್ತಿರ ಸುಳಿಯದಿರಲು ಈ ಅಡುಗೆ!
ಮಳೆಗಾಲ ಶುರುವಾಯಿತು. ಈಗ ಶೀತ, ನೆಗಡಿ, ಜ್ವರ ಸಾಮನ್ಯ. ಜ್ವರ ಬಂದರೆ ಬಾಯಿಗೆ ಯಾವ ಅಡುಗೆಯೂ ರುಚಿಸುವುದಿಲ್ಲ. ಆಗ ಕರಿಮೆಣಸಿನ ಕಾಳು ತಯಾರಿಸಿದ ಸಾರು(ರಸಂ) ಅಥವಾ ಕರಿಮೆಣಸಿ ಕಷಾಯ ಮಾಡಿ ಸೇವಿಸಿದರೆ ಬಾಯಿಗೂ ರುಚಿಸುವುದು ಮತ್ತು ಇದು ಜ್ವರ, ಶೀತ, ನೆಗಡಿ ಕಡಿಮೆ ಮಾಡುವುದರಿಂದ ಆರೋಗ್ಯಕ್ಕೂ ಹಿತ. ಇವತ್ತು ನಾವು ಕರಿಮೆಣಸಿನ ಸಾರು ಮತ್ತು ಕಷಾಯ ಮಾಡುವ ವಿಧಾನ ತಿಳಿಯೋಣ.

1. ಕರಿಮೆಣಸಿನ ಸಾರು ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸಿನ ಕಾಳು 2 ಚಮಚ
* ಕಾಲು ಚಮಚ ಕೊತ್ತಂಬರಿ
*ಕಾಲು ಚಮಚ ಜೀರಿಗೆ
*ಕಾಲು ಚಮಚ ಉದ್ದಿನ ಬೇಳೆ
* ತೆಂಗಿನಕಾಯಿ ತುರಿ ಒಂದು ಕಪ್
* ನಿಂಬೆ ಗಾತ್ರದ ಹುಣಸೆ ಹುಳಿ
* ಹುಳಿಯಷ್ಟು ಗಾತ್ರದ ಬೆಲ್ಲ
* ರುಚಿಗೆ ತಕ್ಕ ಉಪ್ಪು
* ಕರಿಬೇವಿನ ಎಲೆ
* ಬೆಳ್ಳುಳ್ಳಿ
* ಸಾಸಿವೆ
* ಎಣ್ಣೆ
ತಯಾರಿಸುವ ವಿಧಾನ:
1. ತೆಂಗಿನ ಕಾಯಿತುರಿಯನ್ನು ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಬೇಕು.
2. ಈಗ ಕರಿಮೆಣಸಿನ ಕಾಳು, ಜೀರಿಗೆ, ಉದ್ದಿನ ಬೇಳೆ ಕೊತ್ತಂಬರಿ ಹಾಕಿ ಉದ್ದಿನ ಬೇಳೆ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಹುರಿದ ತೆಂಗಿನ ಕಾಯಿ ಮತ್ತು ಹುರಿದ ಸಾಮಾಗ್ರಿಗಳನ್ನು ಹಾಕಿ ಮಿಕ್ಸಿಯಲ್ಲಿ ನುಣ್ಣನೆ ರುಬ್ಬಬೇಕು. ಅರೆಯುವಾಗ ಬೆಲ್ಲವನ್ನು ತುರಿದು ಜೊತೆಯಲ್ಲಿ ಹಾಕಿ ಅರೆಯಿರಿ.
4. ಈಗ ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಶಬ್ದ ಬರುವಾಗ ಜಜ್ಜಿದ ಬೆಳ್ಳುಳ್ಳಿ ಮತ್ತು ಕರಿಬೇವಿನ ಎಲೆ ಹಾಕಿ ಬೆಳ್ಳುಳ್ಳಿ ಕಂದು ಬಣ್ಣಕ್ಕೆ ಬರುವಾಗ ರುಬ್ಬಿದ ಮಸಾಲೆ ಹಾಕಿ, ಸ್ವಲ್ಪ ನೀರು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಬೇಕು. ನಂತರ ಉರಿಯಿಂದ ತೆಗೆಯಬೇಕು.
ಈ ರಸವನ್ನು ಬಿಸಿಯಾದ ಅನ್ನದ ಜೊತೆ ಕಲೆಸಿಕೊಂಡು ತಿನ್ನಲು ರುಚಿಕರವಾಗಿರುತ್ತದೆ. ತುಂಬಾ ಶೀತ ಇದ್ದರೆ ಹದ ಬಿಸಿ ಮಾಡಿ ಕುಡಿದರೆ ಶೀತ ಕಡಿಮೆಯಾಗುತ್ತದೆ.
ಈ ರಸ ಮಾಡಿಟ್ಟರೆ ಒಂದು ವಾರದವರೆಗೆ ಬಿಸಿ ಮಾಡಿಕೊಂಡು ತಿನ್ನಬಹುದು.
ಕರಿಮೆಣಸಿನ ಕಷಾಯ ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸು 2 ಚಮಚ
* 1/4 ಚಮಚ ಕೊತ್ತಂಬರಿ
* ಅರ್ಧ ಚಮಚ ಜೀರಿಗೆ
* ಕಾಲು ಚಮಚ ಉದ್ದಿನ ಬೇಳೆ
* ಒಂದು ಏಲಕ್ಕಿ
* ಲವಂಗ 2
* ಒಣ ಶುಂಠಿಯ ತುಂಡು ( ಅರ್ಧ ಇಂಚು)
* ಅರಿಶಿಣ 1/ 4 ಚಮಚ
* ರುಚಿಗೆ ತಕ್ಕ ಉಪ್ಪು
* ತುಳಸಿ ಎಲೆ (ಬೇಕಿದ್ದರೆ)
ಮಾಡುವ ವಿಧಾನ: ಈ ಮೇಲಿನ ಸಾಮಾಗ್ರಿಗಳನ್ನು ಹುರಿದು ಪುಡಿ ಮಾಡಿಡಬೇಕು. ಬೇಕಾದಾಗ ಒಂದು ಚಮಚ ಕಷಾಯದ ಪುಡಿ, ಸ್ವಲ್ಪ ಬೆಲ್ಲದ ಚೂರು, ಸ್ವಲ್ಪ ಉಪ್ಪು ತುಳಸಿ ಎಲೆ, 2 ಲೋಟ ನೀರು ಹಾಕಿ ಆ ನೀರು ಒಂದು ಲೋಟ ಆಗುವವರೆಗೆ ಕುದಿಸಿದರೆ ಕಷಾಯ ರೆಡಿ. ಈ ಕಷಾಯ ಶೀತ, ಕೆಮ್ಮು ಹೋಗಲಾಡಿಸಲು ಸಹಕಾರಿಯಾಗಿದೆ.



Click it and Unblock the Notifications