Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಶೀತ, ಕೆಮ್ಮು ಹತ್ತಿರ ಸುಳಿಯದಿರಲು ಈ ಅಡುಗೆ!
ಮಳೆಗಾಲ ಶುರುವಾಯಿತು. ಈಗ ಶೀತ, ನೆಗಡಿ, ಜ್ವರ ಸಾಮನ್ಯ. ಜ್ವರ ಬಂದರೆ ಬಾಯಿಗೆ ಯಾವ ಅಡುಗೆಯೂ ರುಚಿಸುವುದಿಲ್ಲ. ಆಗ ಕರಿಮೆಣಸಿನ ಕಾಳು ತಯಾರಿಸಿದ ಸಾರು(ರಸಂ) ಅಥವಾ ಕರಿಮೆಣಸಿ ಕಷಾಯ ಮಾಡಿ ಸೇವಿಸಿದರೆ ಬಾಯಿಗೂ ರುಚಿಸುವುದು ಮತ್ತು ಇದು ಜ್ವರ, ಶೀತ, ನೆಗಡಿ ಕಡಿಮೆ ಮಾಡುವುದರಿಂದ ಆರೋಗ್ಯಕ್ಕೂ ಹಿತ. ಇವತ್ತು ನಾವು ಕರಿಮೆಣಸಿನ ಸಾರು ಮತ್ತು ಕಷಾಯ ಮಾಡುವ ವಿಧಾನ ತಿಳಿಯೋಣ.

1. ಕರಿಮೆಣಸಿನ ಸಾರು ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸಿನ ಕಾಳು 2 ಚಮಚ
* ಕಾಲು ಚಮಚ ಕೊತ್ತಂಬರಿ
*ಕಾಲು ಚಮಚ ಜೀರಿಗೆ
*ಕಾಲು ಚಮಚ ಉದ್ದಿನ ಬೇಳೆ
* ತೆಂಗಿನಕಾಯಿ ತುರಿ ಒಂದು ಕಪ್
* ನಿಂಬೆ ಗಾತ್ರದ ಹುಣಸೆ ಹುಳಿ
* ಹುಳಿಯಷ್ಟು ಗಾತ್ರದ ಬೆಲ್ಲ
* ರುಚಿಗೆ ತಕ್ಕ ಉಪ್ಪು
* ಕರಿಬೇವಿನ ಎಲೆ
* ಬೆಳ್ಳುಳ್ಳಿ
* ಸಾಸಿವೆ
* ಎಣ್ಣೆ
ತಯಾರಿಸುವ ವಿಧಾನ:
1. ತೆಂಗಿನ ಕಾಯಿತುರಿಯನ್ನು ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಬೇಕು.
2. ಈಗ ಕರಿಮೆಣಸಿನ ಕಾಳು, ಜೀರಿಗೆ, ಉದ್ದಿನ ಬೇಳೆ ಕೊತ್ತಂಬರಿ ಹಾಕಿ ಉದ್ದಿನ ಬೇಳೆ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಹುರಿದ ತೆಂಗಿನ ಕಾಯಿ ಮತ್ತು ಹುರಿದ ಸಾಮಾಗ್ರಿಗಳನ್ನು ಹಾಕಿ ಮಿಕ್ಸಿಯಲ್ಲಿ ನುಣ್ಣನೆ ರುಬ್ಬಬೇಕು. ಅರೆಯುವಾಗ ಬೆಲ್ಲವನ್ನು ತುರಿದು ಜೊತೆಯಲ್ಲಿ ಹಾಕಿ ಅರೆಯಿರಿ.
4. ಈಗ ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಶಬ್ದ ಬರುವಾಗ ಜಜ್ಜಿದ ಬೆಳ್ಳುಳ್ಳಿ ಮತ್ತು ಕರಿಬೇವಿನ ಎಲೆ ಹಾಕಿ ಬೆಳ್ಳುಳ್ಳಿ ಕಂದು ಬಣ್ಣಕ್ಕೆ ಬರುವಾಗ ರುಬ್ಬಿದ ಮಸಾಲೆ ಹಾಕಿ, ಸ್ವಲ್ಪ ನೀರು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಬೇಕು. ನಂತರ ಉರಿಯಿಂದ ತೆಗೆಯಬೇಕು.
ಈ ರಸವನ್ನು ಬಿಸಿಯಾದ ಅನ್ನದ ಜೊತೆ ಕಲೆಸಿಕೊಂಡು ತಿನ್ನಲು ರುಚಿಕರವಾಗಿರುತ್ತದೆ. ತುಂಬಾ ಶೀತ ಇದ್ದರೆ ಹದ ಬಿಸಿ ಮಾಡಿ ಕುಡಿದರೆ ಶೀತ ಕಡಿಮೆಯಾಗುತ್ತದೆ.
ಈ ರಸ ಮಾಡಿಟ್ಟರೆ ಒಂದು ವಾರದವರೆಗೆ ಬಿಸಿ ಮಾಡಿಕೊಂಡು ತಿನ್ನಬಹುದು.
ಕರಿಮೆಣಸಿನ ಕಷಾಯ ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸು 2 ಚಮಚ
* 1/4 ಚಮಚ ಕೊತ್ತಂಬರಿ
* ಅರ್ಧ ಚಮಚ ಜೀರಿಗೆ
* ಕಾಲು ಚಮಚ ಉದ್ದಿನ ಬೇಳೆ
* ಒಂದು ಏಲಕ್ಕಿ
* ಲವಂಗ 2
* ಒಣ ಶುಂಠಿಯ ತುಂಡು ( ಅರ್ಧ ಇಂಚು)
* ಅರಿಶಿಣ 1/ 4 ಚಮಚ
* ರುಚಿಗೆ ತಕ್ಕ ಉಪ್ಪು
* ತುಳಸಿ ಎಲೆ (ಬೇಕಿದ್ದರೆ)
ಮಾಡುವ ವಿಧಾನ: ಈ ಮೇಲಿನ ಸಾಮಾಗ್ರಿಗಳನ್ನು ಹುರಿದು ಪುಡಿ ಮಾಡಿಡಬೇಕು. ಬೇಕಾದಾಗ ಒಂದು ಚಮಚ ಕಷಾಯದ ಪುಡಿ, ಸ್ವಲ್ಪ ಬೆಲ್ಲದ ಚೂರು, ಸ್ವಲ್ಪ ಉಪ್ಪು ತುಳಸಿ ಎಲೆ, 2 ಲೋಟ ನೀರು ಹಾಕಿ ಆ ನೀರು ಒಂದು ಲೋಟ ಆಗುವವರೆಗೆ ಕುದಿಸಿದರೆ ಕಷಾಯ ರೆಡಿ. ಈ ಕಷಾಯ ಶೀತ, ಕೆಮ್ಮು ಹೋಗಲಾಡಿಸಲು ಸಹಕಾರಿಯಾಗಿದೆ.



Click it and Unblock the Notifications