Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಶೀತ, ಕೆಮ್ಮು ಹತ್ತಿರ ಸುಳಿಯದಿರಲು ಈ ಅಡುಗೆ!
ಮಳೆಗಾಲ ಶುರುವಾಯಿತು. ಈಗ ಶೀತ, ನೆಗಡಿ, ಜ್ವರ ಸಾಮನ್ಯ. ಜ್ವರ ಬಂದರೆ ಬಾಯಿಗೆ ಯಾವ ಅಡುಗೆಯೂ ರುಚಿಸುವುದಿಲ್ಲ. ಆಗ ಕರಿಮೆಣಸಿನ ಕಾಳು ತಯಾರಿಸಿದ ಸಾರು(ರಸಂ) ಅಥವಾ ಕರಿಮೆಣಸಿ ಕಷಾಯ ಮಾಡಿ ಸೇವಿಸಿದರೆ ಬಾಯಿಗೂ ರುಚಿಸುವುದು ಮತ್ತು ಇದು ಜ್ವರ, ಶೀತ, ನೆಗಡಿ ಕಡಿಮೆ ಮಾಡುವುದರಿಂದ ಆರೋಗ್ಯಕ್ಕೂ ಹಿತ. ಇವತ್ತು ನಾವು ಕರಿಮೆಣಸಿನ ಸಾರು ಮತ್ತು ಕಷಾಯ ಮಾಡುವ ವಿಧಾನ ತಿಳಿಯೋಣ.

1. ಕರಿಮೆಣಸಿನ ಸಾರು ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸಿನ ಕಾಳು 2 ಚಮಚ
* ಕಾಲು ಚಮಚ ಕೊತ್ತಂಬರಿ
*ಕಾಲು ಚಮಚ ಜೀರಿಗೆ
*ಕಾಲು ಚಮಚ ಉದ್ದಿನ ಬೇಳೆ
* ತೆಂಗಿನಕಾಯಿ ತುರಿ ಒಂದು ಕಪ್
* ನಿಂಬೆ ಗಾತ್ರದ ಹುಣಸೆ ಹುಳಿ
* ಹುಳಿಯಷ್ಟು ಗಾತ್ರದ ಬೆಲ್ಲ
* ರುಚಿಗೆ ತಕ್ಕ ಉಪ್ಪು
* ಕರಿಬೇವಿನ ಎಲೆ
* ಬೆಳ್ಳುಳ್ಳಿ
* ಸಾಸಿವೆ
* ಎಣ್ಣೆ
ತಯಾರಿಸುವ ವಿಧಾನ:
1. ತೆಂಗಿನ ಕಾಯಿತುರಿಯನ್ನು ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಬೇಕು.
2. ಈಗ ಕರಿಮೆಣಸಿನ ಕಾಳು, ಜೀರಿಗೆ, ಉದ್ದಿನ ಬೇಳೆ ಕೊತ್ತಂಬರಿ ಹಾಕಿ ಉದ್ದಿನ ಬೇಳೆ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಹುರಿದ ತೆಂಗಿನ ಕಾಯಿ ಮತ್ತು ಹುರಿದ ಸಾಮಾಗ್ರಿಗಳನ್ನು ಹಾಕಿ ಮಿಕ್ಸಿಯಲ್ಲಿ ನುಣ್ಣನೆ ರುಬ್ಬಬೇಕು. ಅರೆಯುವಾಗ ಬೆಲ್ಲವನ್ನು ತುರಿದು ಜೊತೆಯಲ್ಲಿ ಹಾಕಿ ಅರೆಯಿರಿ.
4. ಈಗ ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಶಬ್ದ ಬರುವಾಗ ಜಜ್ಜಿದ ಬೆಳ್ಳುಳ್ಳಿ ಮತ್ತು ಕರಿಬೇವಿನ ಎಲೆ ಹಾಕಿ ಬೆಳ್ಳುಳ್ಳಿ ಕಂದು ಬಣ್ಣಕ್ಕೆ ಬರುವಾಗ ರುಬ್ಬಿದ ಮಸಾಲೆ ಹಾಕಿ, ಸ್ವಲ್ಪ ನೀರು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಬೇಕು. ನಂತರ ಉರಿಯಿಂದ ತೆಗೆಯಬೇಕು.
ಈ ರಸವನ್ನು ಬಿಸಿಯಾದ ಅನ್ನದ ಜೊತೆ ಕಲೆಸಿಕೊಂಡು ತಿನ್ನಲು ರುಚಿಕರವಾಗಿರುತ್ತದೆ. ತುಂಬಾ ಶೀತ ಇದ್ದರೆ ಹದ ಬಿಸಿ ಮಾಡಿ ಕುಡಿದರೆ ಶೀತ ಕಡಿಮೆಯಾಗುತ್ತದೆ.
ಈ ರಸ ಮಾಡಿಟ್ಟರೆ ಒಂದು ವಾರದವರೆಗೆ ಬಿಸಿ ಮಾಡಿಕೊಂಡು ತಿನ್ನಬಹುದು.
ಕರಿಮೆಣಸಿನ ಕಷಾಯ ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸು 2 ಚಮಚ
* 1/4 ಚಮಚ ಕೊತ್ತಂಬರಿ
* ಅರ್ಧ ಚಮಚ ಜೀರಿಗೆ
* ಕಾಲು ಚಮಚ ಉದ್ದಿನ ಬೇಳೆ
* ಒಂದು ಏಲಕ್ಕಿ
* ಲವಂಗ 2
* ಒಣ ಶುಂಠಿಯ ತುಂಡು ( ಅರ್ಧ ಇಂಚು)
* ಅರಿಶಿಣ 1/ 4 ಚಮಚ
* ರುಚಿಗೆ ತಕ್ಕ ಉಪ್ಪು
* ತುಳಸಿ ಎಲೆ (ಬೇಕಿದ್ದರೆ)
ಮಾಡುವ ವಿಧಾನ: ಈ ಮೇಲಿನ ಸಾಮಾಗ್ರಿಗಳನ್ನು ಹುರಿದು ಪುಡಿ ಮಾಡಿಡಬೇಕು. ಬೇಕಾದಾಗ ಒಂದು ಚಮಚ ಕಷಾಯದ ಪುಡಿ, ಸ್ವಲ್ಪ ಬೆಲ್ಲದ ಚೂರು, ಸ್ವಲ್ಪ ಉಪ್ಪು ತುಳಸಿ ಎಲೆ, 2 ಲೋಟ ನೀರು ಹಾಕಿ ಆ ನೀರು ಒಂದು ಲೋಟ ಆಗುವವರೆಗೆ ಕುದಿಸಿದರೆ ಕಷಾಯ ರೆಡಿ. ಈ ಕಷಾಯ ಶೀತ, ಕೆಮ್ಮು ಹೋಗಲಾಡಿಸಲು ಸಹಕಾರಿಯಾಗಿದೆ.



Click it and Unblock the Notifications











