Latest Updates
-
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ
ಶೀತ, ಕೆಮ್ಮು ಹತ್ತಿರ ಸುಳಿಯದಿರಲು ಈ ಅಡುಗೆ!
ಮಳೆಗಾಲ ಶುರುವಾಯಿತು. ಈಗ ಶೀತ, ನೆಗಡಿ, ಜ್ವರ ಸಾಮನ್ಯ. ಜ್ವರ ಬಂದರೆ ಬಾಯಿಗೆ ಯಾವ ಅಡುಗೆಯೂ ರುಚಿಸುವುದಿಲ್ಲ. ಆಗ ಕರಿಮೆಣಸಿನ ಕಾಳು ತಯಾರಿಸಿದ ಸಾರು(ರಸಂ) ಅಥವಾ ಕರಿಮೆಣಸಿ ಕಷಾಯ ಮಾಡಿ ಸೇವಿಸಿದರೆ ಬಾಯಿಗೂ ರುಚಿಸುವುದು ಮತ್ತು ಇದು ಜ್ವರ, ಶೀತ, ನೆಗಡಿ ಕಡಿಮೆ ಮಾಡುವುದರಿಂದ ಆರೋಗ್ಯಕ್ಕೂ ಹಿತ. ಇವತ್ತು ನಾವು ಕರಿಮೆಣಸಿನ ಸಾರು ಮತ್ತು ಕಷಾಯ ಮಾಡುವ ವಿಧಾನ ತಿಳಿಯೋಣ.

1. ಕರಿಮೆಣಸಿನ ಸಾರು ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸಿನ ಕಾಳು 2 ಚಮಚ
* ಕಾಲು ಚಮಚ ಕೊತ್ತಂಬರಿ
*ಕಾಲು ಚಮಚ ಜೀರಿಗೆ
*ಕಾಲು ಚಮಚ ಉದ್ದಿನ ಬೇಳೆ
* ತೆಂಗಿನಕಾಯಿ ತುರಿ ಒಂದು ಕಪ್
* ನಿಂಬೆ ಗಾತ್ರದ ಹುಣಸೆ ಹುಳಿ
* ಹುಳಿಯಷ್ಟು ಗಾತ್ರದ ಬೆಲ್ಲ
* ರುಚಿಗೆ ತಕ್ಕ ಉಪ್ಪು
* ಕರಿಬೇವಿನ ಎಲೆ
* ಬೆಳ್ಳುಳ್ಳಿ
* ಸಾಸಿವೆ
* ಎಣ್ಣೆ
ತಯಾರಿಸುವ ವಿಧಾನ:
1. ತೆಂಗಿನ ಕಾಯಿತುರಿಯನ್ನು ಕಂದು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಬೇಕು.
2. ಈಗ ಕರಿಮೆಣಸಿನ ಕಾಳು, ಜೀರಿಗೆ, ಉದ್ದಿನ ಬೇಳೆ ಕೊತ್ತಂಬರಿ ಹಾಕಿ ಉದ್ದಿನ ಬೇಳೆ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಹುರಿದ ತೆಂಗಿನ ಕಾಯಿ ಮತ್ತು ಹುರಿದ ಸಾಮಾಗ್ರಿಗಳನ್ನು ಹಾಕಿ ಮಿಕ್ಸಿಯಲ್ಲಿ ನುಣ್ಣನೆ ರುಬ್ಬಬೇಕು. ಅರೆಯುವಾಗ ಬೆಲ್ಲವನ್ನು ತುರಿದು ಜೊತೆಯಲ್ಲಿ ಹಾಕಿ ಅರೆಯಿರಿ.
4. ಈಗ ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಶಬ್ದ ಬರುವಾಗ ಜಜ್ಜಿದ ಬೆಳ್ಳುಳ್ಳಿ ಮತ್ತು ಕರಿಬೇವಿನ ಎಲೆ ಹಾಕಿ ಬೆಳ್ಳುಳ್ಳಿ ಕಂದು ಬಣ್ಣಕ್ಕೆ ಬರುವಾಗ ರುಬ್ಬಿದ ಮಸಾಲೆ ಹಾಕಿ, ಸ್ವಲ್ಪ ನೀರು ಹಾಕಿ ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಬೇಕು. ನಂತರ ಉರಿಯಿಂದ ತೆಗೆಯಬೇಕು.
ಈ ರಸವನ್ನು ಬಿಸಿಯಾದ ಅನ್ನದ ಜೊತೆ ಕಲೆಸಿಕೊಂಡು ತಿನ್ನಲು ರುಚಿಕರವಾಗಿರುತ್ತದೆ. ತುಂಬಾ ಶೀತ ಇದ್ದರೆ ಹದ ಬಿಸಿ ಮಾಡಿ ಕುಡಿದರೆ ಶೀತ ಕಡಿಮೆಯಾಗುತ್ತದೆ.
ಈ ರಸ ಮಾಡಿಟ್ಟರೆ ಒಂದು ವಾರದವರೆಗೆ ಬಿಸಿ ಮಾಡಿಕೊಂಡು ತಿನ್ನಬಹುದು.
ಕರಿಮೆಣಸಿನ ಕಷಾಯ ಮಾಡುವ ವಿಧಾನ:
ಬೇಕಾಗುವ ಸಾಮಾಗ್ರಿಗಳು:
* ಕರಿಮೆಣಸು 2 ಚಮಚ
* 1/4 ಚಮಚ ಕೊತ್ತಂಬರಿ
* ಅರ್ಧ ಚಮಚ ಜೀರಿಗೆ
* ಕಾಲು ಚಮಚ ಉದ್ದಿನ ಬೇಳೆ
* ಒಂದು ಏಲಕ್ಕಿ
* ಲವಂಗ 2
* ಒಣ ಶುಂಠಿಯ ತುಂಡು ( ಅರ್ಧ ಇಂಚು)
* ಅರಿಶಿಣ 1/ 4 ಚಮಚ
* ರುಚಿಗೆ ತಕ್ಕ ಉಪ್ಪು
* ತುಳಸಿ ಎಲೆ (ಬೇಕಿದ್ದರೆ)
ಮಾಡುವ ವಿಧಾನ: ಈ ಮೇಲಿನ ಸಾಮಾಗ್ರಿಗಳನ್ನು ಹುರಿದು ಪುಡಿ ಮಾಡಿಡಬೇಕು. ಬೇಕಾದಾಗ ಒಂದು ಚಮಚ ಕಷಾಯದ ಪುಡಿ, ಸ್ವಲ್ಪ ಬೆಲ್ಲದ ಚೂರು, ಸ್ವಲ್ಪ ಉಪ್ಪು ತುಳಸಿ ಎಲೆ, 2 ಲೋಟ ನೀರು ಹಾಕಿ ಆ ನೀರು ಒಂದು ಲೋಟ ಆಗುವವರೆಗೆ ಕುದಿಸಿದರೆ ಕಷಾಯ ರೆಡಿ. ಈ ಕಷಾಯ ಶೀತ, ಕೆಮ್ಮು ಹೋಗಲಾಡಿಸಲು ಸಹಕಾರಿಯಾಗಿದೆ.



Click it and Unblock the Notifications











