Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕ್ಯಾಲೋರಿ ಕಡಿಮೆ ಇರುವ ಅಲಸಂದೆ ಕಾಳಿನ ಸಾರು
ಕಾಳುಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಪೋಷಕಾಂಶಗಳು ಅಧಿಕವಿರುವುದರಿಂದ ಇವುಗಳನ್ನು ತಿಂದರೆ ದೇಹದಲ್ಲಿ ಪೋಷಕಾಂಶದ ಕೊರತೆ ಉಂಟಾಗುವುದಿಲ್ಲ.
ಕಡಿಮೆ ಕ್ಯಾಲೋರಿಯ, ರುಚಿಕರವಾದ ಆಹಾರವನ್ನು ತಿನ್ನ ಬಯಸುವುದಾದರೆ ಈ ಅಲಸಂದೆ ಕಾಳಿನ ಸಾರು ಮಾಡಬಹುದು. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಈ ಆರೋಗ್ಯಕರವಾದ ಸಾರಿನ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು
ಅಲಸಂದೆ ಕಾಳು 1 ಕಪ್
ಈರುಳ್ಳಿ 1 (ಕತ್ತರಿಸಿದ್ದು)
ಕ್ಯಾರೆಟ್ 2 (ಕತ್ತರಿಸಿದ್ದು)
ಬೆಳ್ಳುಳ್ಳಿ 4-5 ಎಸಳು
ಅರ್ಧ ಇಂಚಿನಷ್ಟು ದೊಡ್ಡದಿರುವ ಶುಂಠಿ
ಟೊಮೆಟೊ 1
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಖಾರಕ್ಕೆ ತಕ್ಕ ಮೆಣಸಿನ ಪುಡಿ
ಚಿಟಕೆಯಷ್ಟು ಇಂಗು
ಪಲಾವ್ ಎಲೆ 1
ತುಪ್ಪ 1 ಚಮಚ
ನೀರು 3 ಕಪ್
ರುಚಿಗೆ ತಕ್ಕ ಉಪ್ಪು
ಅರ್ಧ ಚಮಚ ನಿಂಬೆ ರಸ
ಸ್ವಲ್ಪಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
1. ಅಲಸಂದೆ ಕಾಳನ್ನು ರಾತ್ರಿಯಲ್ಲಿ ನೆನೆ ಹಾಕಬೇಕು. ನಂತರ ಅಲಸಂದೆ ಕಾಳು ಮತ್ತು ಕ್ಯಾರೆಟ್ ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
2. ಪಾತ್ರೆಯನ್ನು ಅನ್ನು ಉರಿ ಮೇಲೆ ಇಟ್ಟು ತುಪ್ಪ ಹಾಕಬೇಕು. ತುಪ್ಪ ಬಿಸಿಯಾದಾಗ ಜೀರಿಗೆ ಹಾಕಬೇಕು. ನಂತರ ಕತ್ತರಿಸಿದ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಬೆಳ್ಳುಳ್ಳಿ, ಶುಂಠಿ, ಪಲಾವ್ ಎಲೆ ಹಾಕಿ ಸ್ವಲ್ಪ ಹುರಿದು, ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಹುರಿಯಬೇಕು. ಚಿಟಿಕೆಯಷ್ಟು ಇಂಗು ಹಾಕಬೇಕು. ನಂತರ ಬೇಯಿಸಿದ ಅಲಸಂಡೆ ಮತ್ತು ಕ್ಯಾರೆಟ್ ಹಾಕಿ ರುಚಿಗೆ ತಕ್ಕ ಉಪ್ಪು, ಅರಿಶಿಣ ಪುಡಿ, ಖಾರದ ಪುಡಿ ಹಾಕಿ ಕುದಿಸಬೇಕು. ನಂತರ ಸ್ವಲ್ಪ ನಿಂಬೆ ರಸ ಹಿಂಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಅಲಸಂದೆ ಕರಿ ರೆಡಿ.



Click it and Unblock the Notifications
