Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕ್ಯಾಲೋರಿ ಕಡಿಮೆ ಇರುವ ಅಲಸಂದೆ ಕಾಳಿನ ಸಾರು
ಕಾಳುಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಪೋಷಕಾಂಶಗಳು ಅಧಿಕವಿರುವುದರಿಂದ ಇವುಗಳನ್ನು ತಿಂದರೆ ದೇಹದಲ್ಲಿ ಪೋಷಕಾಂಶದ ಕೊರತೆ ಉಂಟಾಗುವುದಿಲ್ಲ.
ಕಡಿಮೆ ಕ್ಯಾಲೋರಿಯ, ರುಚಿಕರವಾದ ಆಹಾರವನ್ನು ತಿನ್ನ ಬಯಸುವುದಾದರೆ ಈ ಅಲಸಂದೆ ಕಾಳಿನ ಸಾರು ಮಾಡಬಹುದು. ಇದನ್ನು ಸುಲಭವಾಗಿ ಮಾಡಬಹುದಾಗಿದ್ದು ಈ ಆರೋಗ್ಯಕರವಾದ ಸಾರಿನ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು
ಅಲಸಂದೆ ಕಾಳು 1 ಕಪ್
ಈರುಳ್ಳಿ 1 (ಕತ್ತರಿಸಿದ್ದು)
ಕ್ಯಾರೆಟ್ 2 (ಕತ್ತರಿಸಿದ್ದು)
ಬೆಳ್ಳುಳ್ಳಿ 4-5 ಎಸಳು
ಅರ್ಧ ಇಂಚಿನಷ್ಟು ದೊಡ್ಡದಿರುವ ಶುಂಠಿ
ಟೊಮೆಟೊ 1
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಖಾರಕ್ಕೆ ತಕ್ಕ ಮೆಣಸಿನ ಪುಡಿ
ಚಿಟಕೆಯಷ್ಟು ಇಂಗು
ಪಲಾವ್ ಎಲೆ 1
ತುಪ್ಪ 1 ಚಮಚ
ನೀರು 3 ಕಪ್
ರುಚಿಗೆ ತಕ್ಕ ಉಪ್ಪು
ಅರ್ಧ ಚಮಚ ನಿಂಬೆ ರಸ
ಸ್ವಲ್ಪಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
1. ಅಲಸಂದೆ ಕಾಳನ್ನು ರಾತ್ರಿಯಲ್ಲಿ ನೆನೆ ಹಾಕಬೇಕು. ನಂತರ ಅಲಸಂದೆ ಕಾಳು ಮತ್ತು ಕ್ಯಾರೆಟ್ ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
2. ಪಾತ್ರೆಯನ್ನು ಅನ್ನು ಉರಿ ಮೇಲೆ ಇಟ್ಟು ತುಪ್ಪ ಹಾಕಬೇಕು. ತುಪ್ಪ ಬಿಸಿಯಾದಾಗ ಜೀರಿಗೆ ಹಾಕಬೇಕು. ನಂತರ ಕತ್ತರಿಸಿದ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಬೆಳ್ಳುಳ್ಳಿ, ಶುಂಠಿ, ಪಲಾವ್ ಎಲೆ ಹಾಕಿ ಸ್ವಲ್ಪ ಹುರಿದು, ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಹುರಿಯಬೇಕು. ಚಿಟಿಕೆಯಷ್ಟು ಇಂಗು ಹಾಕಬೇಕು. ನಂತರ ಬೇಯಿಸಿದ ಅಲಸಂಡೆ ಮತ್ತು ಕ್ಯಾರೆಟ್ ಹಾಕಿ ರುಚಿಗೆ ತಕ್ಕ ಉಪ್ಪು, ಅರಿಶಿಣ ಪುಡಿ, ಖಾರದ ಪುಡಿ ಹಾಕಿ ಕುದಿಸಬೇಕು. ನಂತರ ಸ್ವಲ್ಪ ನಿಂಬೆ ರಸ ಹಿಂಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಅಲಸಂದೆ ಕರಿ ರೆಡಿ.



Click it and Unblock the Notifications