Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಬಾಯಿ ರುಚಿಯನ್ನು ಹೆಚ್ಚಿಸುತ್ತೆ ಈ ಬಸ್ಸಾರು
ಬಸ್ಸಾರು ಕರ್ನಾಟಕದ ಪ್ರಸಿದ್ಧ ಅಡುಗೆಯಾಗಿದೆ. ಈ ಬಸ್ಸಾರು ರುಚಿಯ ಜೊತೆಗೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. 3-4 ಬಗೆಯ ಸೊಪ್ಪನ್ನು ಬಳಸಿ ಈ ಬಸ್ಸಾರನ್ನು ಮಾಡಲಾಗುವುದು. ರುಬ್ಬಿ ಮಾಡುವ ಈ ಬಸ್ಸಾರನ್ನು ಮುದ್ದೆ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ಬಸ್ಸಾರಿನಲ್ಲಿ ಸೊಪ್ನನ್ನು ಬೇಳೆಯ ಜೊತೆ ಬೇಯಿಸಿ ಆ ನೀರಿನಿಂದ ತಯಾರಿಸಲಾಗುವುದು, ನಂತರ ಬೇಯಿಸಿ ಸೊಪ್ಪನಿಂದ ರಚಿಕರವಾದ ಪಲ್ಯವನ್ನು ತಯಾರಿಸಬಹುದು. ಬಸ್ಸಾರಿನ ರೆಸಿಪಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು, ಬೆರೆಕೆಸೊಪ್ಪು, ದಂಟಿನಸೊಪ್ಪು(ಎಲ್ಲಾ ಒಂದೊಂದು ಕಟ್ಟು)
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಸಾಂಬಾರ್ ಪುಡಿ - ಅರ್ಧ ಚಮಚ
ಕೊತ್ತಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
* ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
* ಈಗ ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರಿಬೇಳೆ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಬೇಳೆ ಬೇಯಲು ಬಿಡಿ. ಬೇಳೆಯನ್ನು ತುಂಬಾ ಬೇಯಿಸಬೇಡಿ.
* ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ , ರುಚಿಗೆ ತಕ್ಕ ಉಪ್ಪು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ.
* ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು ಸೊಪ್ಪಿನ ನೀರನ್ನು ಮತ್ತು ಸೊಪ್ಪನ್ನು ಬೇರೆ ಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಈಗ ಮಸಾಲೆಗೆ:
* ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಸ್ವಲ್ಪ ಹುರಿದುಕೊಂಡು,ಅದಕ್ಕೆ ಸ್ವಲ್ಪ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ ಜೀರಿಗೆ, ಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಬೇಕು.
* ನಂತರ ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು , ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಸ್ವಲ್ಪ ಹೊತ್ತು ಉರಿದು ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸ್ವಲ್ಪ ಸೊಪ್ಪನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಸಲಹೆ: ಬಸ್ಸಾರಿಗೆ ಕೊತ್ತಂಬರಿ ಸೊಪ್ಪು ಮತ್ತು ಸ್ವಲ್ಪ ಅಧಿಕ ಹಾಕಿದರೆ ರುಚಿ ಜಾಸ್ತಿ.
ಇದನ್ನು ರಾತ್ರಿ ಮಾಡಿ ಬೆಳಗ್ಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ರಾಗಿ ಮುದ್ದೆಗೆ ಬಸ್ಸಾರು ಬೆಸ್ಟ್ ಕಾಂಬೀನೇಷನ್.
ಬೇಯಿಸಿದ ಉಳಿದ ಸೊಪ್ಪಿನಿಂದ ಪಲ್ಯ ಮಾಡಿರಿ.



Click it and Unblock the Notifications











