Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಬಾಯಿ ರುಚಿಯನ್ನು ಹೆಚ್ಚಿಸುತ್ತೆ ಈ ಬಸ್ಸಾರು
ಬಸ್ಸಾರು ಕರ್ನಾಟಕದ ಪ್ರಸಿದ್ಧ ಅಡುಗೆಯಾಗಿದೆ. ಈ ಬಸ್ಸಾರು ರುಚಿಯ ಜೊತೆಗೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. 3-4 ಬಗೆಯ ಸೊಪ್ಪನ್ನು ಬಳಸಿ ಈ ಬಸ್ಸಾರನ್ನು ಮಾಡಲಾಗುವುದು. ರುಬ್ಬಿ ಮಾಡುವ ಈ ಬಸ್ಸಾರನ್ನು ಮುದ್ದೆ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ಬಸ್ಸಾರಿನಲ್ಲಿ ಸೊಪ್ನನ್ನು ಬೇಳೆಯ ಜೊತೆ ಬೇಯಿಸಿ ಆ ನೀರಿನಿಂದ ತಯಾರಿಸಲಾಗುವುದು, ನಂತರ ಬೇಯಿಸಿ ಸೊಪ್ಪನಿಂದ ರಚಿಕರವಾದ ಪಲ್ಯವನ್ನು ತಯಾರಿಸಬಹುದು. ಬಸ್ಸಾರಿನ ರೆಸಿಪಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು, ಬೆರೆಕೆಸೊಪ್ಪು, ದಂಟಿನಸೊಪ್ಪು(ಎಲ್ಲಾ ಒಂದೊಂದು ಕಟ್ಟು)
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಸಾಂಬಾರ್ ಪುಡಿ - ಅರ್ಧ ಚಮಚ
ಕೊತ್ತಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
* ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
* ಈಗ ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರಿಬೇಳೆ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಬೇಳೆ ಬೇಯಲು ಬಿಡಿ. ಬೇಳೆಯನ್ನು ತುಂಬಾ ಬೇಯಿಸಬೇಡಿ.
* ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ , ರುಚಿಗೆ ತಕ್ಕ ಉಪ್ಪು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ.
* ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು ಸೊಪ್ಪಿನ ನೀರನ್ನು ಮತ್ತು ಸೊಪ್ಪನ್ನು ಬೇರೆ ಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಈಗ ಮಸಾಲೆಗೆ:
* ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಸ್ವಲ್ಪ ಹುರಿದುಕೊಂಡು,ಅದಕ್ಕೆ ಸ್ವಲ್ಪ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ ಜೀರಿಗೆ, ಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಬೇಕು.
* ನಂತರ ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು , ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಸ್ವಲ್ಪ ಹೊತ್ತು ಉರಿದು ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸ್ವಲ್ಪ ಸೊಪ್ಪನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಸಲಹೆ: ಬಸ್ಸಾರಿಗೆ ಕೊತ್ತಂಬರಿ ಸೊಪ್ಪು ಮತ್ತು ಸ್ವಲ್ಪ ಅಧಿಕ ಹಾಕಿದರೆ ರುಚಿ ಜಾಸ್ತಿ.
ಇದನ್ನು ರಾತ್ರಿ ಮಾಡಿ ಬೆಳಗ್ಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ರಾಗಿ ಮುದ್ದೆಗೆ ಬಸ್ಸಾರು ಬೆಸ್ಟ್ ಕಾಂಬೀನೇಷನ್.
ಬೇಯಿಸಿದ ಉಳಿದ ಸೊಪ್ಪಿನಿಂದ ಪಲ್ಯ ಮಾಡಿರಿ.



Click it and Unblock the Notifications