Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಬಾಯಿ ರುಚಿಯನ್ನು ಹೆಚ್ಚಿಸುತ್ತೆ ಈ ಬಸ್ಸಾರು
ಬಸ್ಸಾರು ಕರ್ನಾಟಕದ ಪ್ರಸಿದ್ಧ ಅಡುಗೆಯಾಗಿದೆ. ಈ ಬಸ್ಸಾರು ರುಚಿಯ ಜೊತೆಗೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. 3-4 ಬಗೆಯ ಸೊಪ್ಪನ್ನು ಬಳಸಿ ಈ ಬಸ್ಸಾರನ್ನು ಮಾಡಲಾಗುವುದು. ರುಬ್ಬಿ ಮಾಡುವ ಈ ಬಸ್ಸಾರನ್ನು ಮುದ್ದೆ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ಬಸ್ಸಾರಿನಲ್ಲಿ ಸೊಪ್ನನ್ನು ಬೇಳೆಯ ಜೊತೆ ಬೇಯಿಸಿ ಆ ನೀರಿನಿಂದ ತಯಾರಿಸಲಾಗುವುದು, ನಂತರ ಬೇಯಿಸಿ ಸೊಪ್ಪನಿಂದ ರಚಿಕರವಾದ ಪಲ್ಯವನ್ನು ತಯಾರಿಸಬಹುದು. ಬಸ್ಸಾರಿನ ರೆಸಿಪಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು, ಬೆರೆಕೆಸೊಪ್ಪು, ದಂಟಿನಸೊಪ್ಪು(ಎಲ್ಲಾ ಒಂದೊಂದು ಕಟ್ಟು)
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಸಾಂಬಾರ್ ಪುಡಿ - ಅರ್ಧ ಚಮಚ
ಕೊತ್ತಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
* ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
* ಈಗ ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರಿಬೇಳೆ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಬೇಳೆ ಬೇಯಲು ಬಿಡಿ. ಬೇಳೆಯನ್ನು ತುಂಬಾ ಬೇಯಿಸಬೇಡಿ.
* ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ , ರುಚಿಗೆ ತಕ್ಕ ಉಪ್ಪು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ.
* ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು ಸೊಪ್ಪಿನ ನೀರನ್ನು ಮತ್ತು ಸೊಪ್ಪನ್ನು ಬೇರೆ ಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಈಗ ಮಸಾಲೆಗೆ:
* ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಸ್ವಲ್ಪ ಹುರಿದುಕೊಂಡು,ಅದಕ್ಕೆ ಸ್ವಲ್ಪ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ ಜೀರಿಗೆ, ಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಬೇಕು.
* ನಂತರ ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು , ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಸ್ವಲ್ಪ ಹೊತ್ತು ಉರಿದು ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸ್ವಲ್ಪ ಸೊಪ್ಪನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಸಲಹೆ: ಬಸ್ಸಾರಿಗೆ ಕೊತ್ತಂಬರಿ ಸೊಪ್ಪು ಮತ್ತು ಸ್ವಲ್ಪ ಅಧಿಕ ಹಾಕಿದರೆ ರುಚಿ ಜಾಸ್ತಿ.
ಇದನ್ನು ರಾತ್ರಿ ಮಾಡಿ ಬೆಳಗ್ಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ರಾಗಿ ಮುದ್ದೆಗೆ ಬಸ್ಸಾರು ಬೆಸ್ಟ್ ಕಾಂಬೀನೇಷನ್.
ಬೇಯಿಸಿದ ಉಳಿದ ಸೊಪ್ಪಿನಿಂದ ಪಲ್ಯ ಮಾಡಿರಿ.



Click it and Unblock the Notifications