Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಬಾಯಿ ರುಚಿಯನ್ನು ಹೆಚ್ಚಿಸುತ್ತೆ ಈ ಬಸ್ಸಾರು
ಬಸ್ಸಾರು ಕರ್ನಾಟಕದ ಪ್ರಸಿದ್ಧ ಅಡುಗೆಯಾಗಿದೆ. ಈ ಬಸ್ಸಾರು ರುಚಿಯ ಜೊತೆಗೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. 3-4 ಬಗೆಯ ಸೊಪ್ಪನ್ನು ಬಳಸಿ ಈ ಬಸ್ಸಾರನ್ನು ಮಾಡಲಾಗುವುದು. ರುಬ್ಬಿ ಮಾಡುವ ಈ ಬಸ್ಸಾರನ್ನು ಮುದ್ದೆ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ಬಸ್ಸಾರಿನಲ್ಲಿ ಸೊಪ್ನನ್ನು ಬೇಳೆಯ ಜೊತೆ ಬೇಯಿಸಿ ಆ ನೀರಿನಿಂದ ತಯಾರಿಸಲಾಗುವುದು, ನಂತರ ಬೇಯಿಸಿ ಸೊಪ್ಪನಿಂದ ರಚಿಕರವಾದ ಪಲ್ಯವನ್ನು ತಯಾರಿಸಬಹುದು. ಬಸ್ಸಾರಿನ ರೆಸಿಪಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು, ಬೆರೆಕೆಸೊಪ್ಪು, ದಂಟಿನಸೊಪ್ಪು(ಎಲ್ಲಾ ಒಂದೊಂದು ಕಟ್ಟು)
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಸಾಂಬಾರ್ ಪುಡಿ - ಅರ್ಧ ಚಮಚ
ಕೊತ್ತಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
* ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
* ಈಗ ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರಿಬೇಳೆ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಬೇಳೆ ಬೇಯಲು ಬಿಡಿ. ಬೇಳೆಯನ್ನು ತುಂಬಾ ಬೇಯಿಸಬೇಡಿ.
* ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ , ರುಚಿಗೆ ತಕ್ಕ ಉಪ್ಪು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ.
* ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು ಸೊಪ್ಪಿನ ನೀರನ್ನು ಮತ್ತು ಸೊಪ್ಪನ್ನು ಬೇರೆ ಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಈಗ ಮಸಾಲೆಗೆ:
* ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಸ್ವಲ್ಪ ಹುರಿದುಕೊಂಡು,ಅದಕ್ಕೆ ಸ್ವಲ್ಪ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ ಜೀರಿಗೆ, ಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಬೇಕು.
* ನಂತರ ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು , ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಸ್ವಲ್ಪ ಹೊತ್ತು ಉರಿದು ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸ್ವಲ್ಪ ಸೊಪ್ಪನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಸಲಹೆ: ಬಸ್ಸಾರಿಗೆ ಕೊತ್ತಂಬರಿ ಸೊಪ್ಪು ಮತ್ತು ಸ್ವಲ್ಪ ಅಧಿಕ ಹಾಕಿದರೆ ರುಚಿ ಜಾಸ್ತಿ.
ಇದನ್ನು ರಾತ್ರಿ ಮಾಡಿ ಬೆಳಗ್ಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ರಾಗಿ ಮುದ್ದೆಗೆ ಬಸ್ಸಾರು ಬೆಸ್ಟ್ ಕಾಂಬೀನೇಷನ್.
ಬೇಯಿಸಿದ ಉಳಿದ ಸೊಪ್ಪಿನಿಂದ ಪಲ್ಯ ಮಾಡಿರಿ.



Click it and Unblock the Notifications