Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ತುಪ್ಪದ ರುಚಿ ಜೊತೆ ಈ ಮಸಾಲೆ ಹಾಕಿ ಮಾಡಿ ಕಡ್ಲೆ ಉಸ್ಲಿ, ರುಚಿ ಸೂಪರ್ ಆಗಿರುತ್ತೆ
ಮಕ್ಕಳು ಪಿಜ್ಜಾ, ಬರ್ಗರ್ ಅಂತ ಕೇಳುತ್ತವೆ, ಆದರೆ ವಾರಕ್ಕೊಮ್ಮೆಯಾದರೂ ಕಡ್ಲೆ ಉಸ್ಲಿ ಮಾಡಿ ಕೊಡಿ ಅವರ ಬೆಳವಣಿಗೆಗೆ ತುಂಬಾ ಒಳ್ಳೆಯದು, ಇನ್ನು ದೊಡ್ಡವರು ಇದನ್ನು ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ, ಅದರಲ್ಲಿಯೂ ಈ ತುಪ್ಪದ ಫ್ಲೇವರ್ ಉಸ್ಲಿ ರುಚಿ ಇನ್ನೂ ಸೂಪರ್ ಆಗಿರುತ್ತೆ ನೋಡಿ:

ಬೇಕಾಗುವ ಸಾಮಗ್ರಿ
ಗರಂ ಮಸಾಲ ಪುಡಿ 1 ಚಮಚ
ಜೀರಿಗೆ ಪುಡಿ 1 ಚಮಚ
ಕಲ್ಲುಪ್ಪು 1 ಚಮಚ
ಅರಿಶಿಣ ಪುಡಿ 1/2 ಚಮಚ
ತುಪ್ಪ 2 ಚಮಚ
ಕಪ್ಪುಕಡ್ಲೆ 2 ಕಪ್
ಖಾರದ ಪುಡಿ 1 ಚಮಚ (ಖಾರ ಕಡಿಮೆ ಬಯಸುವವರು 1/ 2 ಚಮಚ ಬಳಸಬಹುದು)
ಮಾಡುವ ವಿಧಾನ:
ನೀವು ಕಡ್ಲೆಯನ್ನು 5-6 ಗಂಟೆ ನೆನೆ ಹಾಕಬೇಕು
ನೀವು ಸ್ವಲ್ಪ ಉಪ್ಪು ಹಾಕಿ, 2 ಕಪ್ ನೀರು ಹಾಕಿ 2 ವಿಶಲ್ ಬರುವವರೆಗೆ ಬಯಸಿ
ಈಗ ದಪ್ಪತಳವಿರುವ ಪಾತ್ರೆ ತಗೆದು ಬಿಸಿ ಮಾಡಿ 2 ಚಮಚ ತುಪ್ಪ ಹಾಕಿ
ಈಗ ತುಪ್ಪಕ್ಕೆ ಅರಿಶಿಣ, ಖಾರದ ಪುಡಿ 1/ 2 ನಿಮಿಷ ಫ್ರೈ ಮಾಡಿ ನೋಡಿ
ಜೀರಿಗೆ ಪುಡಿ ಹಾಕಿ, ಕಲ್ಲುಪ್ಪು ಸೇರಿಸಿ
ಈಗ ಬೇಯಿಸಿದ ಕಡ್ಲೆ ಹಾಕಿ ಮಿಕ್ಸ್ ಮಾಡಿ, ಗರಂ ಮಸಾಲ ಸೇರಿಸಿ ಮಿಕ್ಸ್ ಮಾಡಿದರೆ
ರುಚಿಯಾದ ಕಡ್ಲೆ ಉಸ್ಲಿ ರೆಡಿ
ಸಲಹೆ: ಕಡ್ಲೆ ಬೇಢಯಿಸುವಾಗ ಉಪ್ಪು ಹಾಕಿದ್ದರೆ ನಂತರ
ತುಪ್ಪಕ್ಕೆ ಮೊದಲೇ ಉಪ್ಪು ಹಾಬೇಡಿ, ಬೇಕಿದ್ದರೆ ಮತ್ತೆ ಸೇರಿಸಬಹುದು
ತುಪ್ಪಕ್ಕೆ ಕರಿಬೇವು ಸೇರಿಸಿ.
ನೀವು ಸ್ವಲ್ಪ ಕೊತ್ತಂಬರಿ ಸೊಪ್ಪು ಸೇರಿಸಬಹುದು
ಬೇಕಿದ್ದರೆ ತೆಂಗಿನ ತುರಿ ಸೇರಿಸಬಹುದು
ಇವೆಲ್ಲಾ ಭಿನ್ನ ಫ್ಲೇವರ್ ನೀಡುತ್ತೆ
ಈ ಸ್ನ್ಯಾಕ್ಸ್ ತುಂಬಾ ರುಚಿಯಾಗಿರುವುದರಿಂದ ಮಕ್ಕಳು ಕೂಡ
ಇಷ್ಟಪಟ್ಟು ಸವಿಯುತ್ತಾರೆ.
ಇದನ್ನು ತಿನ್ನುವುದರಿಂದ ಅವರ ಬೆವಣಿಗೆಗೆ ಸಹಕಾರಿ.
ದೊಡ್ಡವರು ಇದನ್ನು ಸ್ನ್ಯಾಕ್ಸ್ ಆಗಿ ಬಳಸಿದರೆ ಈ
ಪ್ರಯೋಜನಗಳಿವೆ
ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣ ಮಾಡುತ್ತದೆ
ಕಡ್ಲೆಯಲ್ಲಿ ಕಾರ್ಬೋಹೈಡ್ರೇಟ್ಸ್, ಪ್ರೊಟೀನ್, ನಾರಿನಂಶ ಇರುವುದರಿಂದ ದೇಹಕ್ಕೆ
ಸಕ್ಕರೆಯಂಶ ನಿಧಾನಕ್ಕೆ ಬಿಡುಗಡೆಯಾಗುತ್ತೆ, ಹಾಗಾಗಿ ಸಕ್ಕರೆಯಂಶ
ನಿಯಂತ್ರಣದಲ್ಲಿಡಲು ಸಹಕಾರಿ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
ಕಡ್ಲೆ ಸೇವನೆ ಮಾಡುವುದರಿಂದ ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು, ಮೆದುಳು ಚುರುಕಾಗಿ ಇರುತ್ತದೆ
ತೂಕ ನಿಯಂತ್ರಣಕ್ಕೆ ಸಹಕಾರಿ
ಕಡ್ಲೆ ಉಸ್ಲಿ ತಿಂದಾಗ ಬೇಗನೆ ಹೊಟ್ಟೆ ತುಂಬುತ್ತದ, ಇದು ದೇಹಕ್ಕೆ ಪೋಷಕಾಂಶ
ನೀಡುತ್ತದೆ, ತೂಕ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ರಕ್ತ ಹೀನತೆ ತಡೆಗಟ್ಟುತ್ತದೆ
ಯಾರಿಗೆ ರಕ್ತಹೀನತೆ ಇದೆಯೋ ಅವರು ಈ ಕಡ್ಲೆಯನ್ನು ಸ್ನ್ಯಾಕ್ಸ್ ರೀತಿ
ಸೇವಿಸುತ್ತಾ ಬನ್ನಿ. ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗುವುದು.
ಗರ್ಭಿಣಿಯರಿಗೆ ಮಕ್ಕಳಿಗೆ ತುಂಬಾ ಒಳ್ಳೆಯದು.



Click it and Unblock the Notifications