Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ತುಪ್ಪದ ರುಚಿ ಜೊತೆ ಈ ಮಸಾಲೆ ಹಾಕಿ ಮಾಡಿ ಕಡ್ಲೆ ಉಸ್ಲಿ, ರುಚಿ ಸೂಪರ್ ಆಗಿರುತ್ತೆ
ಮಕ್ಕಳು ಪಿಜ್ಜಾ, ಬರ್ಗರ್ ಅಂತ ಕೇಳುತ್ತವೆ, ಆದರೆ ವಾರಕ್ಕೊಮ್ಮೆಯಾದರೂ ಕಡ್ಲೆ ಉಸ್ಲಿ ಮಾಡಿ ಕೊಡಿ ಅವರ ಬೆಳವಣಿಗೆಗೆ ತುಂಬಾ ಒಳ್ಳೆಯದು, ಇನ್ನು ದೊಡ್ಡವರು ಇದನ್ನು ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ, ಅದರಲ್ಲಿಯೂ ಈ ತುಪ್ಪದ ಫ್ಲೇವರ್ ಉಸ್ಲಿ ರುಚಿ ಇನ್ನೂ ಸೂಪರ್ ಆಗಿರುತ್ತೆ ನೋಡಿ:

ಬೇಕಾಗುವ ಸಾಮಗ್ರಿ
ಗರಂ ಮಸಾಲ ಪುಡಿ 1 ಚಮಚ
ಜೀರಿಗೆ ಪುಡಿ 1 ಚಮಚ
ಕಲ್ಲುಪ್ಪು 1 ಚಮಚ
ಅರಿಶಿಣ ಪುಡಿ 1/2 ಚಮಚ
ತುಪ್ಪ 2 ಚಮಚ
ಕಪ್ಪುಕಡ್ಲೆ 2 ಕಪ್
ಖಾರದ ಪುಡಿ 1 ಚಮಚ (ಖಾರ ಕಡಿಮೆ ಬಯಸುವವರು 1/ 2 ಚಮಚ ಬಳಸಬಹುದು)
ಮಾಡುವ ವಿಧಾನ:
ನೀವು ಕಡ್ಲೆಯನ್ನು 5-6 ಗಂಟೆ ನೆನೆ ಹಾಕಬೇಕು
ನೀವು ಸ್ವಲ್ಪ ಉಪ್ಪು ಹಾಕಿ, 2 ಕಪ್ ನೀರು ಹಾಕಿ 2 ವಿಶಲ್ ಬರುವವರೆಗೆ ಬಯಸಿ
ಈಗ ದಪ್ಪತಳವಿರುವ ಪಾತ್ರೆ ತಗೆದು ಬಿಸಿ ಮಾಡಿ 2 ಚಮಚ ತುಪ್ಪ ಹಾಕಿ
ಈಗ ತುಪ್ಪಕ್ಕೆ ಅರಿಶಿಣ, ಖಾರದ ಪುಡಿ 1/ 2 ನಿಮಿಷ ಫ್ರೈ ಮಾಡಿ ನೋಡಿ
ಜೀರಿಗೆ ಪುಡಿ ಹಾಕಿ, ಕಲ್ಲುಪ್ಪು ಸೇರಿಸಿ
ಈಗ ಬೇಯಿಸಿದ ಕಡ್ಲೆ ಹಾಕಿ ಮಿಕ್ಸ್ ಮಾಡಿ, ಗರಂ ಮಸಾಲ ಸೇರಿಸಿ ಮಿಕ್ಸ್ ಮಾಡಿದರೆ
ರುಚಿಯಾದ ಕಡ್ಲೆ ಉಸ್ಲಿ ರೆಡಿ
ಸಲಹೆ: ಕಡ್ಲೆ ಬೇಢಯಿಸುವಾಗ ಉಪ್ಪು ಹಾಕಿದ್ದರೆ ನಂತರ
ತುಪ್ಪಕ್ಕೆ ಮೊದಲೇ ಉಪ್ಪು ಹಾಬೇಡಿ, ಬೇಕಿದ್ದರೆ ಮತ್ತೆ ಸೇರಿಸಬಹುದು
ತುಪ್ಪಕ್ಕೆ ಕರಿಬೇವು ಸೇರಿಸಿ.
ನೀವು ಸ್ವಲ್ಪ ಕೊತ್ತಂಬರಿ ಸೊಪ್ಪು ಸೇರಿಸಬಹುದು
ಬೇಕಿದ್ದರೆ ತೆಂಗಿನ ತುರಿ ಸೇರಿಸಬಹುದು
ಇವೆಲ್ಲಾ ಭಿನ್ನ ಫ್ಲೇವರ್ ನೀಡುತ್ತೆ
ಈ ಸ್ನ್ಯಾಕ್ಸ್ ತುಂಬಾ ರುಚಿಯಾಗಿರುವುದರಿಂದ ಮಕ್ಕಳು ಕೂಡ
ಇಷ್ಟಪಟ್ಟು ಸವಿಯುತ್ತಾರೆ.
ಇದನ್ನು ತಿನ್ನುವುದರಿಂದ ಅವರ ಬೆವಣಿಗೆಗೆ ಸಹಕಾರಿ.
ದೊಡ್ಡವರು ಇದನ್ನು ಸ್ನ್ಯಾಕ್ಸ್ ಆಗಿ ಬಳಸಿದರೆ ಈ
ಪ್ರಯೋಜನಗಳಿವೆ
ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣ ಮಾಡುತ್ತದೆ
ಕಡ್ಲೆಯಲ್ಲಿ ಕಾರ್ಬೋಹೈಡ್ರೇಟ್ಸ್, ಪ್ರೊಟೀನ್, ನಾರಿನಂಶ ಇರುವುದರಿಂದ ದೇಹಕ್ಕೆ
ಸಕ್ಕರೆಯಂಶ ನಿಧಾನಕ್ಕೆ ಬಿಡುಗಡೆಯಾಗುತ್ತೆ, ಹಾಗಾಗಿ ಸಕ್ಕರೆಯಂಶ
ನಿಯಂತ್ರಣದಲ್ಲಿಡಲು ಸಹಕಾರಿ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
ಕಡ್ಲೆ ಸೇವನೆ ಮಾಡುವುದರಿಂದ ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು, ಮೆದುಳು ಚುರುಕಾಗಿ ಇರುತ್ತದೆ
ತೂಕ ನಿಯಂತ್ರಣಕ್ಕೆ ಸಹಕಾರಿ
ಕಡ್ಲೆ ಉಸ್ಲಿ ತಿಂದಾಗ ಬೇಗನೆ ಹೊಟ್ಟೆ ತುಂಬುತ್ತದ, ಇದು ದೇಹಕ್ಕೆ ಪೋಷಕಾಂಶ
ನೀಡುತ್ತದೆ, ತೂಕ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ರಕ್ತ ಹೀನತೆ ತಡೆಗಟ್ಟುತ್ತದೆ
ಯಾರಿಗೆ ರಕ್ತಹೀನತೆ ಇದೆಯೋ ಅವರು ಈ ಕಡ್ಲೆಯನ್ನು ಸ್ನ್ಯಾಕ್ಸ್ ರೀತಿ
ಸೇವಿಸುತ್ತಾ ಬನ್ನಿ. ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗುವುದು.
ಗರ್ಭಿಣಿಯರಿಗೆ ಮಕ್ಕಳಿಗೆ ತುಂಬಾ ಒಳ್ಳೆಯದು.



Click it and Unblock the Notifications