Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅರಿಶಿನದ ಎಲೆ ತಂಬುಳಿ ರೆಸಿಪಿ
ಆಯುರ್ವೇದದಲ್ಲಿ ಅರಿಶಿಣಕ್ಕೆ ಬಹಳ ಮಹತ್ವವಿದೆ. ಅರಿಶಿಣವು ಸರ್ವರೋಗಗಳನ್ನು ನಿವಾರಿಸಿ ತಡೆಯುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಸೌಂದರ್ಯವರ್ಧಕವೂ ಹೌದು, ಆರೋಗ್ಯವರ್ಧಕವೂ ಹೌದು. ಹಾಗಾಗಿ ಗಾಯ ನಿವಾರಕವೂ ಹೌದು, ಅಲರ್ಜಿ ನಿವಾರಕವೂ ಹೌದು. ಇದರ ಪ್ರಯೋಜನಗಳ ಪಟ್ಟಿ ಬಹಳ ಉದ್ದವಿದೆ.

ಅಡುಗೆಯಲ್ಲೂ ಕೂಡ ಅರಿಶಿಣಕ್ಕೆ ಬಹಳ ಮಹತ್ವವಿದೆ. ಅಡುಗೆ ಮನೆಯ ಸಾಂಬಾರ ಪದಾರ್ಥಗಳಲ್ಲಿ ಅರಿಶಿಣಕ್ಕೆ ಪ್ರಮುಖ ಸ್ಥಾನ. ಅರಿಶಿಣದ ಗಡ್ಡೆಗಳಿಂದ ತಯಾರಿಸುವ ಪುಡಿ ಮಾತ್ರವಲ್ಲ ಬದಲಾಗಿ ಅರಿಶಿಣದ ಎಲೆಗಳಲ್ಲೂ ಕೂಡ ಬಹಳ ಶಕ್ತಿ ಇದೆ. ಅದರ ಘಮವೇ ಬಹಳ ಉತ್ತಮವಾಗಿರುತ್ತದೆ. ಅರಿಶಿಣದ ಎಲೆಯನ್ನು ಬಳಸಿ ಮಾಡುವ ಕಡುಬು ನೀವು ಕೇಳಿರಬಹುದು.

ಪಾಯಸ ಮಾಡುವಾಗ ಅರಿಶಿಣದ ಎಲೆಯನ್ನು ಪಾಯಸಕ್ಕೆ ಘಮ ಹೆಚ್ಚಿಸುವುದಕ್ಕೆ ಬಳಸಲಾಗುತ್ತದೆ. ಅದೇ ರೀತಿ ಅರಿಶಿಣದ ಎಲೆಯಿಂದ ತಂಬಳಿಯನ್ನೂ ಮಾಡಬಹುದು. ಅರೆ ಅರಿಶಿಣದ ಎಲೆಯ ತಂಬಳಿಯೇ ಎಂದು ಹುಬ್ಬೇರಿಸಬೇಡಿ. ಹೌದು ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ತಂಬಳಿಯನ್ನು ಮಾಡುವುದು ಹೇಗ ಎಂಬುದನ್ನು ತಿಳಿಯೋಣ ಬನ್ನಿ.
Recipe By: Sushma
Recipe Type: Tambuli
Serves: 3
-
ಬೇಕಾಗುವ ಸಾಮಗ್ರಿಗಳು
ಅರಿಶಿಣದ ಎಲೆಯ ಎಳೆಯ ಕುಡಿಗಳು- ಐದರಿಂದ ಆರು
ಕಾಳುಮೆಣಸು- ಐದಾರು
ಜೀರಿಗೆ- ಒಂದು ಸ್ಪೂನ್
ತೆಂಗಿನ ಕಾಯಿತುರಿ- ಒಂದು ಮುಷ್ಠಿ
ಕಡೆದ ಮಜ್ಜಿಗೆ- ಕಾಲು ಲೀಟರ್
ಬೆಲ್ಲ- ನಾಲ್ಕು ಟೀ ಸ್ಪೂನ್
ಉಪ್ಪು - ರುಚಿಗೆ ತಕ್ಕಷ್ಟು
ಬೆಣ್ಣೆ - ನಾಲ್ಕು ಸ್ಪೂನ್
-
ಮಾಡುವ ವಿಧಾನ
ಅರಿಶಿನಣದ ಎಲೆಯನ್ನು ಸಣ್ಣಗೆ ಹೆಚ್ಚಿಕೊಳ್ಳಿ.
ನಂತರ ಅದನ್ನು ಚಿಟಿಕೆ ಬೆಣ್ಣೆ ಹಾಕಿ ಹುರಿಯಿರಿ.
ಅದಕ್ಕೆ ಕಾಳುಮೆಣಸು, ಕಾಯಿತುರಿ,ಜೀರಿಗೆ ಹಾಕಿ ಹುರಿಯಿರಿ.
ಈ ಮಿಶ್ರಣವನ್ನು ರುಬ್ಬಿಕೊಳ್ಳಿ. ನಂತರ ಈ ರುಬ್ಬಿದ ಮಿಶ್ರಣದ ಜೊಗಟಿಯನ್ನು ಸೋಸಿಕೊಳ್ಳಿ.
ಸೋಸದೆಯೂ ಬಳಸಬಹುದು. ನಂತರ ಈ ರಸಕ್ಕೆ ಉಪ್ಪು,ಬೆಲ್ಲ ಮತ್ತು ಕಡೆದ ಮಜ್ಜಿಗೆ ಸೇರಿಸಿ ಚೆನ್ನಾಗಿ ಕೈಯಾಡಿ.
ನಂತರ ಬೆಣ್ಣೆಗೆ ಸ್ವಲ್ಪ ಜೀರಿಗೆ ಹಾಕಿ ಒಗ್ಗರಣೆ ಮಾಡಿದರೆ ಅರಿಶಿಣದ ಎಲೆ ತಂಬಳಿ ಸವಿಯಲು ಸಿದ್ಧ.
- ಅರಿಶಿಣದ ಎಲೆಯ ತಂಬಳಿ ಸೇವನೆಯಿಂದ ಜೀರ್ಣಕ್ರಿಯೆ ಹೆಚ್ಚುತ್ತದೆ. ಗಾಯವನ್ನು ಗುಣಗೊಳಿಸುವ ಶಕ್ತಿ ಇದಕ್ಕಿದೆ. ಊರಿಯೂತ ತಡೆಯುವ ಶಕ್ತಿ ಇದೆ. ಚರ್ಮದ ಕಾಂತಿ ಹೆಚ್ಚಿಸುವ ಕೆಲಸವನ್ನು ಇದು ಮಾಡುತ್ತದೆ.
- ಕ್ಯಾಲೋರಿ - - 29
- ಪ್ರೊಟೀನ್ - - 0.91ಗ್ರಾಮ್



Click it and Unblock the Notifications