Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
ಖಾರ ಪೊಂಗಲ್ ಅಥವಾ ಹುಗ್ಗಿ
ಖಾರ ಪೊಂಗಲ್ ಅಥವಾ ಹುಗ್ಗಿಯನ್ನು ಸಂಕ್ರಾಂತಿ ಸುಗ್ಗಿಯ ವೇಳೆಯಲ್ಲಿಯೇ ಮಾಡಬೇಕೆಂದೇನಿಲ್ಲ. ಅಕ್ಕಿ, ಬೇಳೆ ಮಿಶ್ರಣದ ಸತ್ವಯುತ ಆಹಾರವನ್ನು ಯಾವಾಗ ಬೇಕಾದರೂ ತಯಾರಿಸಿ ಮೆಲ್ಲಬಹುದು. ಬೆಂಗಳೂರಿನ ಭಾರತಿ ಚಂದ್ರಶೇಖರ್ ಅವರು ಸರಳ ವಿಧಾನವನ್ನು ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಇಂದೇ ತಯಾರಿಸಿ, ತಿಂದು ತೇಗಿ, ಮಸ್ತ್ ಮಜಾ ಮಾಡಿ.
ಬೇಕಾಗುವ ಸಾಮಗ್ರಿಗಳು
ಅಕ್ಕಿ 1 ಕಪ್
ಹೆಸರು ಬೇಳೆ 3/4 ಕಪ್
ಎಣ್ಣೆ 6 ಚಮಚ
ಜೀರಿಗೆ 1 ಚಮಚ
ಮೆಣಸು 1 ಚಮಚ
ಕರಿಬೇವು ಸ್ವಲ್ಪ
ಹಸಿ ಮೆಣಸಿನಕಾಯಿ 1
ಅರಿಶಿನ ಪುಡಿ ಸ್ವಲ್ಪ
ನಿಂಬೆ ರಸ 2 ಚಮಚ
ತುಪ್ಪ 4 ಚಮಚ
ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ:
ಕುಕ್ಕರ್ ಗೆ ಎಣ್ಣೆ ಹಾಕಿ, ಸಾಸಿವೆ, ಕರಿಬೇವು, ಜೀರಿಗೆ, ಮೆಣಸು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಹೆಸರುಬೇಳೆ, ತೊಳೆದುಕೊಂಡ ಅಕ್ಕಿ ಹಾಕಿ ಹುರಿಯಿರಿ. 4 ಲೋಟ ನೀರನ್ನು ಹಾಕಿ. ರುಚಿಗೆ ಉಪ್ಪು, ಅರಿಶಿನ, ನಿಂಬೆ ರಸ ಹಾಕಿ ಮುಚ್ಚಿ. ಒಂದು ವಿಷಲ್ ಬಂದ ಮೇಲೆ ಉರಿ ಸಣ್ಣ ಮಾಡಿ 5 ನಿಮಿಷದ ನಂತರ ಆಫ್ ಮಾಡಿ.
ಕುಕ್ಕರ್ ತಣ್ಣಗಾದ ಮೇಲೆ ತುಪ್ಪ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದು ಸರಳವಾದ ಮತ್ತು ಬೇಗ ಆಗುವ ಅಡುಗೆ. ಇದರ ಜೊತೆ ಕಾಯಿ ಚಟ್ನಿ ಅಥವಾ ಮೊಸರು ಬಜ್ಜಿಯಿದ್ದರೆ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications