Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಖಾರ ಪೊಂಗಲ್ ಅಥವಾ ಹುಗ್ಗಿ
ಖಾರ ಪೊಂಗಲ್ ಅಥವಾ ಹುಗ್ಗಿಯನ್ನು ಸಂಕ್ರಾಂತಿ ಸುಗ್ಗಿಯ ವೇಳೆಯಲ್ಲಿಯೇ ಮಾಡಬೇಕೆಂದೇನಿಲ್ಲ. ಅಕ್ಕಿ, ಬೇಳೆ ಮಿಶ್ರಣದ ಸತ್ವಯುತ ಆಹಾರವನ್ನು ಯಾವಾಗ ಬೇಕಾದರೂ ತಯಾರಿಸಿ ಮೆಲ್ಲಬಹುದು. ಬೆಂಗಳೂರಿನ ಭಾರತಿ ಚಂದ್ರಶೇಖರ್ ಅವರು ಸರಳ ವಿಧಾನವನ್ನು ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಇಂದೇ ತಯಾರಿಸಿ, ತಿಂದು ತೇಗಿ, ಮಸ್ತ್ ಮಜಾ ಮಾಡಿ.
ಬೇಕಾಗುವ ಸಾಮಗ್ರಿಗಳು
ಅಕ್ಕಿ 1 ಕಪ್
ಹೆಸರು ಬೇಳೆ 3/4 ಕಪ್
ಎಣ್ಣೆ 6 ಚಮಚ
ಜೀರಿಗೆ 1 ಚಮಚ
ಮೆಣಸು 1 ಚಮಚ
ಕರಿಬೇವು ಸ್ವಲ್ಪ
ಹಸಿ ಮೆಣಸಿನಕಾಯಿ 1
ಅರಿಶಿನ ಪುಡಿ ಸ್ವಲ್ಪ
ನಿಂಬೆ ರಸ 2 ಚಮಚ
ತುಪ್ಪ 4 ಚಮಚ
ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ:
ಕುಕ್ಕರ್ ಗೆ ಎಣ್ಣೆ ಹಾಕಿ, ಸಾಸಿವೆ, ಕರಿಬೇವು, ಜೀರಿಗೆ, ಮೆಣಸು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಹೆಸರುಬೇಳೆ, ತೊಳೆದುಕೊಂಡ ಅಕ್ಕಿ ಹಾಕಿ ಹುರಿಯಿರಿ. 4 ಲೋಟ ನೀರನ್ನು ಹಾಕಿ. ರುಚಿಗೆ ಉಪ್ಪು, ಅರಿಶಿನ, ನಿಂಬೆ ರಸ ಹಾಕಿ ಮುಚ್ಚಿ. ಒಂದು ವಿಷಲ್ ಬಂದ ಮೇಲೆ ಉರಿ ಸಣ್ಣ ಮಾಡಿ 5 ನಿಮಿಷದ ನಂತರ ಆಫ್ ಮಾಡಿ.
ಕುಕ್ಕರ್ ತಣ್ಣಗಾದ ಮೇಲೆ ತುಪ್ಪ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದು ಸರಳವಾದ ಮತ್ತು ಬೇಗ ಆಗುವ ಅಡುಗೆ. ಇದರ ಜೊತೆ ಕಾಯಿ ಚಟ್ನಿ ಅಥವಾ ಮೊಸರು ಬಜ್ಜಿಯಿದ್ದರೆ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications