Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಖಾರ ಪೊಂಗಲ್ ಅಥವಾ ಹುಗ್ಗಿ
ಖಾರ ಪೊಂಗಲ್ ಅಥವಾ ಹುಗ್ಗಿಯನ್ನು ಸಂಕ್ರಾಂತಿ ಸುಗ್ಗಿಯ ವೇಳೆಯಲ್ಲಿಯೇ ಮಾಡಬೇಕೆಂದೇನಿಲ್ಲ. ಅಕ್ಕಿ, ಬೇಳೆ ಮಿಶ್ರಣದ ಸತ್ವಯುತ ಆಹಾರವನ್ನು ಯಾವಾಗ ಬೇಕಾದರೂ ತಯಾರಿಸಿ ಮೆಲ್ಲಬಹುದು. ಬೆಂಗಳೂರಿನ ಭಾರತಿ ಚಂದ್ರಶೇಖರ್ ಅವರು ಸರಳ ವಿಧಾನವನ್ನು ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಇಂದೇ ತಯಾರಿಸಿ, ತಿಂದು ತೇಗಿ, ಮಸ್ತ್ ಮಜಾ ಮಾಡಿ.
ಬೇಕಾಗುವ ಸಾಮಗ್ರಿಗಳು
ಅಕ್ಕಿ 1 ಕಪ್
ಹೆಸರು ಬೇಳೆ 3/4 ಕಪ್
ಎಣ್ಣೆ 6 ಚಮಚ
ಜೀರಿಗೆ 1 ಚಮಚ
ಮೆಣಸು 1 ಚಮಚ
ಕರಿಬೇವು ಸ್ವಲ್ಪ
ಹಸಿ ಮೆಣಸಿನಕಾಯಿ 1
ಅರಿಶಿನ ಪುಡಿ ಸ್ವಲ್ಪ
ನಿಂಬೆ ರಸ 2 ಚಮಚ
ತುಪ್ಪ 4 ಚಮಚ
ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ:
ಕುಕ್ಕರ್ ಗೆ ಎಣ್ಣೆ ಹಾಕಿ, ಸಾಸಿವೆ, ಕರಿಬೇವು, ಜೀರಿಗೆ, ಮೆಣಸು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ನಂತರ ಹೆಸರುಬೇಳೆ, ತೊಳೆದುಕೊಂಡ ಅಕ್ಕಿ ಹಾಕಿ ಹುರಿಯಿರಿ. 4 ಲೋಟ ನೀರನ್ನು ಹಾಕಿ. ರುಚಿಗೆ ಉಪ್ಪು, ಅರಿಶಿನ, ನಿಂಬೆ ರಸ ಹಾಕಿ ಮುಚ್ಚಿ. ಒಂದು ವಿಷಲ್ ಬಂದ ಮೇಲೆ ಉರಿ ಸಣ್ಣ ಮಾಡಿ 5 ನಿಮಿಷದ ನಂತರ ಆಫ್ ಮಾಡಿ.
ಕುಕ್ಕರ್ ತಣ್ಣಗಾದ ಮೇಲೆ ತುಪ್ಪ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದು ಸರಳವಾದ ಮತ್ತು ಬೇಗ ಆಗುವ ಅಡುಗೆ. ಇದರ ಜೊತೆ ಕಾಯಿ ಚಟ್ನಿ ಅಥವಾ ಮೊಸರು ಬಜ್ಜಿಯಿದ್ದರೆ ತುಂಬಾ ಚೆನ್ನಾಗಿರುತ್ತದೆ.



Click it and Unblock the Notifications