Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬ್ಯಾಚುಲರ್ ಕಿಚನ್ ನಲ್ಲಿ ಬೆಳ್ಳುಳ್ಳಿ ಅನ್ನ

ಬೇಕಾಗುವ ಪದಾರ್ಥಗಳು
ಎರಡು ಗೆಡ್ಡೆ ಬೆಳ್ಳುಳ್ಳಿ
ಸ್ವಲ್ಪ ಕರಿಬೇವಿನ ಎಲೆ
ಸಾಸಿವೆ
ಉದ್ದಿನಬೇಳೆ
ಕಡ್ಲೆಬೇಳೆ
ಹಸಿಮೆಣಸು
ಒಣಮೆಣಸು
ಉಪ್ಪು
ಮಾಡುವ ವಿಧಾನ
ಮೊದಲು ಮಾಡಿದ ಅನ್ನವನ್ನು ಬಟ್ಟಲಿಗೆ ಹಾಕಿ ತಣ್ಣಗಾಗಲು ಬಿಡಿ. ಬೆಳ್ಳುಳ್ಳಿಯ ಸಿಪ್ಪೆ ತೆಗೆದು ಸಿದ್ಧಪಡಿಸಿಟ್ಟುಕೊಳ್ಳಿ. ನಾಲ್ಕು ಹಸಿ ಮೆಣಸು ಸೀಳಿಕೊಳ್ಳಿ.
ಒಗ್ಗರಣೆಗೆ ಎರಡು ಒಣಮೆಣಸು ತುಂಡು ಮಾಡಿಕೊಂಡು, ಒಲೆ ಹಚ್ಚಿ ಬಾಣಲಿ ಇಡಿ (ಪಾತ್ರೆಯೂ ಆದೀತು). ಕಾವು ಸಣ್ಣಗಿರಲಿ. ಸ್ವಲ್ಪ ಎಣ್ಣೆ ಹಾಕಿ. ಎಣ್ಣೆ ಕಾದ ಕೂಡಲೇ ಅರ್ಧ ಟೀ ಸ್ಪೂನ್ ಸಾಸಿವೆ ಹಾಕಿ, ಪಟ್ ಪಟ್ ಎಂಬ ಸದ್ದು ಕೇಳುತ್ತಿದ್ದಂತೆ ಬೆಳ್ಳುಳ್ಳಿ ಹಾಕಿ. ಬಂಗಾರದ ಬಣ್ಣಕ್ಕೆ ಬರುತ್ತಿದ್ದಂತೆ ಸ್ವಲ್ಪ ಉದ್ದಿನಬೇಳೆ, ಕಡ್ಲೆಬೇಳೆ, ಒಣಮೆಣಸು ಹಾಕಿ. ಕೆಂಪಗಾಗುವಷ್ಟು ಹುರಿಯಿರಿ. ಕೆಂಪಗಾಗುತ್ತಿದ್ದಂತೆ ಹಸಿಮೆಣಸು, ಕರಿಬೇವಿನ ಎಲೆ ಹಾಕಿ ಹುರಿಯಿರಿ. ಆಮೇಲೆ ಉಪ್ಪು ಹಾಕಿ ಅನ್ನವನ್ನು ಹಾಕಿ ಕಲಸಿ. ಅಲ್ಲಿಗೆ ಬೆಳ್ಳುಳ್ಳಿ ಅನ್ನ ಸಿದ್ಧ.
ಇದಕ್ಕೆ ಬೇಕಾದವರು ಲಿಂಬೆಹಣ್ಣಿನ ರಸ ಬೆರೆಸಬಹುದು, ತೆಂಗಿನಕಾಯಿಯ ತುರಿ ಹಾಕಬಹುದು. ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಬಹುದು.
ಮತ್ತೊಂದು ಪ್ರಮುಖ ಸಂಗತಿಯೆಂದರೆ, ಬ್ರಹ್ಮಚಾರಿಗಳ ಮನೆಯಲ್ಲಿ ಅನ್ನ ಉಳಿಯುವುದು ಹೆಚ್ಚು. ಇಂದಿನ ಅನ್ನ ನಾಳೆಗೆ ಉಳಿದಾಗ ತಂಗಳನ್ನ ತಿನ್ನಬೇಕು ಎಂದು ಬೇಸರವಿರುತ್ತದೆ. ಆ ದುಃಖವನ್ನು ಇದು ಹೋಗಲಾಡಿಸುತ್ತದೆ. ಅದಕ್ಕೆ ಅನ್ನ ಉಳಿದರೆ, ಅದಕ್ಕೆ ನೀರು ಹಾಕಿಡಿ. ಅದು ಕೆಟ್ಟು ಹೋಗುವುದಿಲ್ಲ. ಅದೇ ಅನ್ನವನ್ನು ಹಿಂಡಿ ಹಿಂಡಿ ನೀರಿನಾಂಶ ತೆಗೆದು ಬೆಳ್ಳುಳ್ಳಿ ಅನ್ನ ಮಾಡಬಹುದು. ಅದೇ ಹೆಚ್ಚು ರುಚಿ.
ಗಮನವಿಡಬೇಕಾದ ಅಂಶ
* ಅನ್ನ ಬಟ್ಟಲಿಗೆ ಹಾಕಿ ತಣ್ಣಗೆ ಮಾಡಿದರೆ ಬೆಳ್ಳುಳ್ಳಿ ಅನ್ನ ಮುದ್ದೆಯಾಗುವುದಿಲ್ಲ.
* ಇದಕ್ಕೆ ಶುಂಠಿ ಇತ್ಯಾದಿ ಹಾಕಬೇಡಿ. ಬೆಳ್ಳುಳ್ಳಿ ಮತ್ತು ಶುಂಠಿ ಎರಡರ ಘಾಟು ರುಚಿಯನ್ನೇ ಕೆಡಿಸುತ್ತದೆ.
* ತಂಗಳನ್ನ ಎಂದು ಹೀಗಳೆಯಬೇಡಿ, ಬೆಳ್ಳುಳ್ಳಿ ಅನ್ನ ಮಾಡಿ.
* ಬಹಳ ಸುಲಭ ಮತ್ತು ಕಡಿಮೆ ಸಮಯ ಹಿಡಿಯುವ ತಿಂಡಿ.
(ಕೃಪೆ : ಅವಧಿ)



Click it and Unblock the Notifications